Featured

ಬಿ.ಎಸ್. ವೈ ರಾಜೀನಾಮೆ : ತಮ್ಮದು ವಿಫಲ ಸರ್ಕಾರ, ವಿಫಲ ಆಡಳಿತ, ವಿಫಲ ನಾಯಕತ್ವ ಎನ್ನುವುದನ್ನು  ಒಪ್ಪಿಕೊಂಡಂತಾಗಿದೆ :ಕಾಂಗ್ರೆಸ್

ಬಿ.ಎಸ್. ವೈ ರಾಜೀನಾಮೆ : ತಮ್ಮದು ವಿಫಲ ಸರ್ಕಾರ, ವಿಫಲ ಆಡಳಿತ, ವಿಫಲ ನಾಯಕತ್ವ ಎನ್ನುವುದನ್ನು  ಒಪ್ಪಿಕೊಂಡಂತಾಗಿದೆ :ಕಾಂಗ್ರೆಸ್

ಬಿಎಸ್ ವೈ ಕಣ್ಣೀರು ಪದತ್ಯಾಗ’ ವಲ್ಲ ‘ಪದಚ್ಯುತಿ’ ಎಂದು ಸಾರಿ ಹೇಳುತ್ತಿದೆ..: ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು, : ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜೀನಾಮೆ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ” ಬಿಎಸ್ ವೈ ಕಣ್ಣೀರು ಪದತ್ಯಾಗ’ ವಲ್ಲ ‘ಪದಚ್ಯುತಿ’ ಎಂದು ಸಾರಿ ಹೇಳುತ್ತಿದೆ” ಎಂದು ವ್ಯಂಗ್ಯವಾಡಿದೆ.

ತಮ್ಮದು ವಿಫಲ ಸರ್ಕಾರ, ವಿಫಲ ಆಡಳಿತ, ವಿಫಲ ನಾಯಕತ್ವ ಎನ್ನುವುದನ್ನು ಬಿ.ಎಸ್. ಯಡಿಯೂರಪ್ಪ ಅವರು ರಾಜೀನಾಮೆ ಘೋಷಣೆ ಮಾಡುವ ಮೂಲಕ ಒಪ್ಪಿಕೊಂಡಂತಾಗಿದೆ. ಅವರೇ ಹೇಳಿಕೊಳ್ಳುವಂತೆ ಸಮರ್ಥ ಆಡಳಿತವೇ ಆಗಿದ್ದಿದ್ದರೆ ಈ ಬಿಜೆಪಿಯ ಹೈಕಮಾಂಡ್ ‘ಪದಚ್ಯುತಿ’ ಮಾಡಿದ್ದೇಕೆ ? ಎಂದು ಪ್ರಶ್ನಿಸಿದೆ.

ಸಮ್ಮಿಶ್ರ ಸರ್ಕಾರ ಉರುಳಿ ರಾಜ್ಯದಲ್ಲಿ ಕಮಲ ಅರಳಿ ಇಂದಿಗೆ ಎರಡು ವರ್ಷ ತುಂಬಿದ ಹಿನ್ನಲೆಯಲ್ಲಿ ಇಂದು ಸರ್ಕಾರದ ಸಾಧನ ಸಮಾವೇಶದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ಸಿಎಂ ಬಿ.ಎಸ್. ಯಡಿಯೂರಪ್ಪ,ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಕಣ್ಣೀರಿಟ್ಟು ತಮ್ಮ ಸಿಎಂ ಸ್ಥಾನದ ಪದತ್ಯಾಗದ ಘೋಷಣೆ ಮಾಡಿದ್ದರು.

ಬಿಜೆಪಿಯಲ್ಲಿ 75 ವರ್ಷ ಮೇಲ್ಪಟ್ಟವರಿಗೆ ಅಧಿಕಾರಕ್ಕೆ ಅವಕಾಶ ಕೊಡಲ್ಲ ಆದರೆ ಜೆ.ಪಿ. ನಡ್ಡಾ ಅವರು ನನಗೆ 2 ವರ್ಷ ಮುಖ್ಯಮಂತ್ರಿ ಆಗಲು ಅವಕಾಶ ಮಾಡಿಕೊಟ್ಟರು. ಪ್ರಧಾನಿ ಮೋದಿ, ಅಮಿತ್ ಶಾ ಜೋಡಿ ಮತ್ತೊಮ್ಮೆ ಲೋಕಸಭೆ ಚುನಾವಣೆಯಲ್ಲಿ ಗೆದ್ದು ದೇಶವನ್ನು ಮುನ್ನಡೆಸುವ ಅವಕಾಶ ಸಿಗಬೇಕು ಎಂದಿದ್ದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

11 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

11 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

12 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

12 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

12 hours ago