ಜಿಲ್ಲೆ

ಬಿ.ಜೆ.ಪಿ. ಟಿಕೆಟ್: ಘಟಾನುಘಟಿ ನಾಯಕರು……

ವಿಧಾನಸಭೆ ಚುನಾವಣೆಗೆ ಬಿ.ಜೆ.ಪಿ. ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 18 ಮಾಜಿ ಸಚಿವರು, ಇಬ್ಬರು ಸಂಸದರು, ಮೂವರು ವಿಧಾನಪರಿಷತ್ ಸದಸ್ಯರು ಸೇರಿ 72 ಮಂದಿಗೆ ಅವಕಾಶ ನೀಡಲಾಗಿದೆ.

ರಾಜ್ಯದ ನಾಯಕರ ಅಭಿಪ್ರಾಯ ಪಡೆದುಕೊಂಡ ಕೇಂದ್ರ ಬಿ.ಜೆ.ಪಿ. ನಾಯಕರು ತಮ್ಮದೇ ಮೂಲಗಳಿಂದ, ಸರ್ವೇ ಮಾಹಿತಿ ಆಧರಿಸಿ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ. ಘಟಾನುಘಟಿ ನಾಯಕರಿಗೆ ಟಿಕೆಟ್ ಖಚಿತವಾಗಿದ್ದರೂ, ಅವರು ಹೇಳಿದವರಿಗೆ ಕೆಲವು ಕ್ಷೇತ್ರಗಳಲ್ಲಿ ಟಿಕೆಟ್ ಕೈ ತಪ್ಪಿದೆ.

ಬಿ.ಎಸ್. ಯಡಿಯೂರಪ್ಪ, ಕೆ.ಎಸ್. ಈಶ್ವರಪ್ಪ ಮತ್ತು ಜಗದೀಶ್ ಶೆಟ್ಟರ್ ಅವರ ಬೆಂಬಲಿಗರಿಗೆ ಮೊದಲ ಪಟ್ಟಿಯಲ್ಲಿ ಟಿಕೆಟ್ ಕೈ ತಪ್ಪಿದೆ. ಶಿವಮೊಗ್ಗದ ನಗರ ಕ್ಷೇತ್ರದಲ್ಲಿ ಬಿ.ಎಸ್.ವೈ. ಆಪ್ತ ಎಸ್. ರುದ್ರೇಗೌಡರಿಗೆ ಅವಕಾಶ ಸಿಕ್ಕಿಲ್ಲ. ಕೆ.ಎಸ್. ಈಶ್ವರಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ.

ಈಶ್ವರಪ್ಪ ಅವರ ಬೆಂಬಲಿಗರಾದ ಸೋಮಣ್ಣ ಬೇವಿನ ಮರದ ಅವರಿಗೆ ಶಿಗ್ಗಾಂವಿಯಲ್ಲಿ ಅವಕಾಶ ತಪ್ಪಿದ್ದು, ಅವರು ಪಕ್ಷೇತರರಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ. ಜಗದೀಶ್ ಶೆಟ್ಟರ್ ಅವರ ಬೆಂಬಲಿಗರಾದ ಮಾಜಿ ಶಾಸಕಿ ಸೀಮಾ ಮಸೂತಿ ಅವರಿಗೆ ಟಿಕೆಟ್ ತಪ್ಪಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ರಾಜ್ಯ ನಾಯಕರು ಹೇಳಿದವರಿಗೆಲ್ಲಾ ಟಿಕೆಟ್ ನೀಡಿಲ್ಲ. ಘಟಾನುಘಟಿ ನಾಯಕರ ಬೆಂಬಲಿಗರಿಗೇ ಅನೇಕ ಕ್ಷೇತ್ರಗಳಲ್ಲಿ ಟಿಕೆಟ್ ತಪ್ಪಿದೆ.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

5 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

7 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

7 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

8 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

8 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

8 hours ago