ಜಿಲ್ಲೆ

ಬಿ.ಜೆ.ಪಿ. ಟಿಕೆಟ್: ಘಟಾನುಘಟಿ ನಾಯಕರು……

ವಿಧಾನಸಭೆ ಚುನಾವಣೆಗೆ ಬಿ.ಜೆ.ಪಿ. ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 18 ಮಾಜಿ ಸಚಿವರು, ಇಬ್ಬರು ಸಂಸದರು, ಮೂವರು ವಿಧಾನಪರಿಷತ್ ಸದಸ್ಯರು ಸೇರಿ 72 ಮಂದಿಗೆ ಅವಕಾಶ ನೀಡಲಾಗಿದೆ.

ರಾಜ್ಯದ ನಾಯಕರ ಅಭಿಪ್ರಾಯ ಪಡೆದುಕೊಂಡ ಕೇಂದ್ರ ಬಿ.ಜೆ.ಪಿ. ನಾಯಕರು ತಮ್ಮದೇ ಮೂಲಗಳಿಂದ, ಸರ್ವೇ ಮಾಹಿತಿ ಆಧರಿಸಿ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ. ಘಟಾನುಘಟಿ ನಾಯಕರಿಗೆ ಟಿಕೆಟ್ ಖಚಿತವಾಗಿದ್ದರೂ, ಅವರು ಹೇಳಿದವರಿಗೆ ಕೆಲವು ಕ್ಷೇತ್ರಗಳಲ್ಲಿ ಟಿಕೆಟ್ ಕೈ ತಪ್ಪಿದೆ.

ಬಿ.ಎಸ್. ಯಡಿಯೂರಪ್ಪ, ಕೆ.ಎಸ್. ಈಶ್ವರಪ್ಪ ಮತ್ತು ಜಗದೀಶ್ ಶೆಟ್ಟರ್ ಅವರ ಬೆಂಬಲಿಗರಿಗೆ ಮೊದಲ ಪಟ್ಟಿಯಲ್ಲಿ ಟಿಕೆಟ್ ಕೈ ತಪ್ಪಿದೆ. ಶಿವಮೊಗ್ಗದ ನಗರ ಕ್ಷೇತ್ರದಲ್ಲಿ ಬಿ.ಎಸ್.ವೈ. ಆಪ್ತ ಎಸ್. ರುದ್ರೇಗೌಡರಿಗೆ ಅವಕಾಶ ಸಿಕ್ಕಿಲ್ಲ. ಕೆ.ಎಸ್. ಈಶ್ವರಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ.

ಈಶ್ವರಪ್ಪ ಅವರ ಬೆಂಬಲಿಗರಾದ ಸೋಮಣ್ಣ ಬೇವಿನ ಮರದ ಅವರಿಗೆ ಶಿಗ್ಗಾಂವಿಯಲ್ಲಿ ಅವಕಾಶ ತಪ್ಪಿದ್ದು, ಅವರು ಪಕ್ಷೇತರರಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ. ಜಗದೀಶ್ ಶೆಟ್ಟರ್ ಅವರ ಬೆಂಬಲಿಗರಾದ ಮಾಜಿ ಶಾಸಕಿ ಸೀಮಾ ಮಸೂತಿ ಅವರಿಗೆ ಟಿಕೆಟ್ ತಪ್ಪಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ರಾಜ್ಯ ನಾಯಕರು ಹೇಳಿದವರಿಗೆಲ್ಲಾ ಟಿಕೆಟ್ ನೀಡಿಲ್ಲ. ಘಟಾನುಘಟಿ ನಾಯಕರ ಬೆಂಬಲಿಗರಿಗೇ ಅನೇಕ ಕ್ಷೇತ್ರಗಳಲ್ಲಿ ಟಿಕೆಟ್ ತಪ್ಪಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago