ಉಡುಪಿ: ಬಿ.ಪಿ.ಎಲ್. ಪಡಿತರ ಚೀಟಿ ಪಡೆಯಲು ಪ್ರಸ್ತುತ ಜಾರಿಯಲ್ಲಿರುವ ಕುಟುಂಬದ ವಾರ್ಷಿಕ ಆದಾಯ ಮಿತಿ ರೂ. 1.20 ಲಕ್ಷವನ್ನು ರೂ. 3.00 ಲಕ್ಷಕ್ಕೆ ಹೆಚ್ಚಿಸುವಂತೆ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಮುಖ್ಯಮಂತ್ರಿ ಡಿ. ಕೆ. ಶಿವ ಕುಮಾರ್ ರವರಿಗೆ ಮನವಿ ಮಾಡಿದ್ದಾರೆ.
ಪ್ರಸ್ತುತ ಬಿ.ಪಿ.ಎಲ್. ಪಡಿತರ ಚೀಟಿಗೆ ಅನ್ವಯವಾಗುತ್ತಿರುವ ರೂ. 1.20 ಲಕ್ಷ ವಾರ್ಷಿಕ ಆದಾಯದ ಮಿತಿಯನ್ನು 2017ರಲ್ಲಿ ನಿಗದಿಪಡಿಸಲಾಗಿತ್ತು. ಕಳೆದ 9 ವರ್ಷಗಳಲ್ಲಿ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಗಣನೀಯವಾಗಿ ಏರಿಕೆಯಾಗಿದೆ. ಆದಾಯ ಮಿತಿಯನ್ನು ಪರಿಷ್ಕರಿಸದ ಕಾರಣ ಅನೇಕ ಬಡ ಹಾಗೂ ಕೆಳಮಧ್ಯಮ ವರ್ಗದ ಕುಟುಂಬಗಳು ಬಿ.ಪಿ.ಎಲ್. ಸೌಲಭ್ಯದಿಂದ ವಂಚಿತರಾಗಿರುತ್ತಾರೆ.
ಬಹುತೇಕ ಬಿ.ಪಿ.ಎಲ್. ಕುಟುಂಬಗಳ ಆದಾಯವು ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಇಂದಿನ ಆರ್ಥಿಕ ಪರಿಸ್ಥಿತಿ ಹಾಗೂ ಜೀವನ ನಿರ್ವಹಣೆಗೆ ಹೆಚ್ಚಾದ ವೆಚ್ಚವನ್ನು ಗಮನಿಸಿದರೆ, ರೂ. 1.20 ಲಕ್ಷ ಆದಾಯ ಮಿತಿ ಈಗಿನ ಕಾಲಘಟ್ಟಕ್ಕೆ ಹೊಂದಿಕೆಯಾಗುವುದಿಲ್ಲ. ಆದುದರಿಂದ, ಬಿ.ಪಿ.ಎಲ್. ಪಡಿತರ ಚೀಟಿಗೆ ವಾರ್ಷಿಕ ಆದಾಯ ಮಿತಿಯನ್ನು ರೂ. 3.00 ಲಕ್ಷಕ್ಕೆ ಹೆಚ್ಚಿಸುವ ಮೂಲಕ ನೈಜ ಅರ್ಹ ಕುಟುಂಬಗಳಿಗೆ ಆಹಾರ ಭದ್ರತೆ ಹಾಗೂ ಸರ್ಕಾರದ ವಿವಿಧ ಜನಪರ ಯೋಜನೆಗಳ ಸೌಲಭ್ಯ ದೊರೆಯುವಂತೆ ರಾಜ್ಯ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಯಶ್ಪಾಲ್ ಸುವರ್ಣ ರವರು ಪತ್ರ ಬರೆದು ಆಗ್ರಹಿಸಿದ್ದಾರೆ.
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…
ಏರ್ ಇಂಡಿಯಾ ವಿಮಾನದ ಎಲ್ಲಾ ಪೈಲಟ್ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ ನವದೆಹಲಿ: ಆಕಾಶದಲ್ಲಿ ಹಾರಾಡುವಾಗಲೇ ತೀವ್ರ ಗಾಳಿಯ ಅಡಚಣೆಗೆ…
ರಾಷ್ಟ್ರೀಯ ಹೆದ್ದಾರಿಯಲ್ಲಿ 10 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಲಭ್ಯತೆ ಕಡ್ಡಾಯ: ವಿಳಂಬವಾದರೆ ₹10,000 ದಂಡ ..! ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ…
ಮೈಸೂರು: ಮದುವೆ ನಿಶ್ಚಯವಾಗಿದ್ದ SBI ಉದ್ಯೋಗಿಗಳಿಬ್ಬರು ಆತ್ಮಹತ್ಯೆಗೆ ಶರಣು ಮೈಸೂರು: ಡಿಸೆಂಬರ್ನಲ್ಲಿ ಹಸೆಮಣೆ ಏರಬೇಕಿದ್ದ SBI ಉದ್ಯೋಗಿಗಳಿಬ್ಬರು ಪ್ರತ್ಯೇಕವಾಗಿ ಆತ್ಮಹತ್ಯೆಗೆ…
ಬಂಟ್ವಾಳ : ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿದ ವಿದ್ಯಾರ್ಥಿಗೆ ಸಿಎಂ ಮೆಚ್ಚುಗೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು…
ಸಂಘಪರಿವಾರದ ಪ್ರಮುಖರಿಗೆ ನಿರ್ಬಂಧ ವಿಧಿಸಿರುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾದ ಕ್ರಮ .. ನಿರ್ಬಂಧಗಳ ಮೂಲಕ ಸಂಘಪರಿವಾರದ ಮುಖಂಡರ ರಾಷ್ಟ್ರಭಕ್ತಿ ಮತ್ತು…