ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರು ನಿವಾಸಿಗಳಾದ ರವಿ (64), ನಂಜಮ್ಮ (75) ಹಾಗೂ ರಮ್ಯಾ (23) ದಾರುಣವಾಗಿ ಮೃತಪಟ್ಟವರು.
ಗಾಯಾಳುಗಳನ್ನು ಸುಶೀಲ, ಕೀರ್ತಿ ಕುಮಾರ್, ಕಿರಣ್, ಬಿಂದು, ಪ್ರಶಾಂತ್ ಹಾಗೂ ಚಾಲಕ ಸುಬ್ರಹ್ಮಣ್ಯ ಎಂದು ಗುರುತಿಸಲಾಗಿದ್ದು, ಚಿಂತಾಜಕನಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.
ಶನಿವಾರ ಮುಂಜಾನೆ ಸುಮಾರು 5 ಗಂಟೆ ವೇಳೆಗೆ, ಬೆಂಗಳೂರು ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಇನೋವಾ ಕಾರು ಚಾಲಕರ ನಿಯಂತ್ರಣ ತಪ್ಪಿ ನಾರಾಯಣ ಗುರು ವೃತ್ತಕ್ಕೆ ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಅಪಘಾತದ ಹೊಡೆತಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ.
ಕಾರಿನಲ್ಲಿ ಒಟ್ಟು 9 ಮಂದಿ ಸಂಬಂಧಿಕರು ಪ್ರಯಾಣಿಸುತ್ತಿದ್ದರು. ಘಟನೆಯ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆ ಪ್ರಾರಂಭವಾಗಿದೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…