ದೇಹಕ್ಕೆ ಎಲ್ಲಾ ರೀತಿಯ ಪೋಷಕಾಂಸಗಳು ದೊರೆಯಲು ಎಲ್ಲಾ ರೀತಿಯ ತರಕಾರಿಗಳನನ್ಉ ತಿನ್ನಬೇಕು. ಏಕೆಂದರೆ ಎಲ್ಲಾ ಬಗೆಯ ಪೋಷಕಾಂಶಗಳು ಮತ್ತು ವಿಟಮಿನ್ ಗಳು ಒಂದೇ ಬಗೆಯ ಆಹಾರದಲ್ಲಿ ಇರುವುದಿಲ್ಲ. ಅದರಲ್ಲೂ ಕೆಲವು ತರಕಾರಿಗಳು ಔಷಧೀಯ ಗುಣವನ್ನು ಹೊಂದಿದೆ. ಉದಾಹರಣೆಗೆ ಬೀಟ್ ರೂಟ್.
ಬೀಟ್ರೂಟ್ ರಸವು ಹಸಿವನ್ನ ಹೆಚ್ಚು ಮಾಡುತ್ತದೆ. ಇದರಲ್ಲಿರುವ ವಿಟಮಿನ್ ಬಿ ಮತ್ತು ವಿಟಮಿನ್ ಸಿ ಜೀರ್ಣಕ್ರಿಯೆ ಉತ್ತಮಗೊಳಿಸುವುದರ ಜೊತೆಗೆ ಲಿವರ್ ಮತ್ತು ಹೊಟ್ಟೆಯ ಆರೋಗ್ಯಕ್ಕೂ ಬಹಳ ಪ್ರಯೋಜನಕಾರಿಯಾಗಿದೆ. ಇದು ಜೀರ್ಣಕ್ರಿಯೆಯನ್ನ ಸರಾಗಗೊಳಿಸುವುದರೊಂದಿಗೆ ಹೊಟ್ಟೆಯಲ್ಲಿ ಗ್ಯಾಸ್ ಉಂಟಾಗದಂತೆ ಮಾಡುತ್ತದೆ.
ಬೀಟ್ ರೂಟ್ ತಿಂದರೆ ಈ ಕೆಳಗಿನ ಪ್ರಮುಖ ಆರೋಗ್ಯಕರ ಗುಣಗಳನ್ನು ಪಡೆಯಬಹುದು.
ದೇಹಕ್ಕೆ ಶಕ್ತಿ ನೀಡುತ್ತದೆ: ಬೀಟ್ ರೂಟ್ ನಲ್ಲಿ ಕಾರ್ಬೋಹೈಡ್ರೇಟ್ ಅಧಿಕವಿರುವುರುವುದರಿಂದ ಇದನ್ನು ತಿಂದರೆ ದೇಹಕ್ಕೆ ಶಕ್ತಿ ದೊರೆಯುತ್ತದೆ. ಸುಸ್ತು, ತಲೆಸುತ್ತು ಈ ರೀತಿಯ ಸಮಸ್ಯೆ ಕಂಡು ಬಂದರೆ ಬೀಟ್ ರೂಟ್ ಜ್ಯೂಸ್ ಕುಡಿದರೆ ಸಾಕು ಕಡಿಮೆಯಾಗುವುದು.
ಪೋಷಕಾಂಶಗಳು: ಬೀಟ್ ರೂಟ್ ನಲ್ಲಿ ವಿಟಮಿನ್ ಎ, ಸಿ, ಬೇಟೈನ್, ಕ್ಯಾಲ್ಸಿಯಂ, ಮ್ಯಾಗ್ನಿಷಿಯಂ, ರಂಜಕ, ನೈಸಿನ್ ಮತ್ತು ಕಬ್ಬಿಣದಂಶ ಅಧಿಕವಿರುತ್ತದೆ.
ಅಧಿಕ ಫಾಲಿಕ್ ಆಸಿಡ್: ಫಾಲಿಕ್ ಆಸಿಡ್ ಆರೋಗ್ಯಕ್ಕೆ ತುಂಬಾ ಅಗತ್ಯ. ಇದು ಜೀವಕಣಗಳ ಉತ್ಪತ್ತಿ ಹೆಚ್ಚಾಗಲು ಸಹಾಯ ಮಾಡುತ್ತದೆ. ಫಾಲಿಕ್ ಆಸಿಡ್ ಕೊರತೆ ಇರುವವರು ಮಾತ್ರೆ ತೆಗೆದುಕೊಳ್ಳುವ ಬದಲು ಪ್ರತಿನಿತ್ಯ ಬೀಟ್ ರೂಟ್ ಅನ್ನು ಜ್ಯೂಸ್ ಮಾಡಿ ಕುಡಿದರೆ ಸಾಕು.
ಹೃದಯ ಸ್ವಾಸ್ಥ್ಯಒಳ್ಳೆಯದು: ಬೀಟ್ ರೂಟ್ ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಅಲ್ಲದೆ ಬೀಟ್ ರೂಟ್ ದೇಹದಲ್ಲಿ ರಕ್ತಸಂಚಾರ ಸರಿಯಾಗಿ ನಡೆಯುವಂತೆ ನೋಡಿಕೊಳ್ಳುತ್ತದೆ. ಬೀಟ್ ರೂಟ್ ನಲ್ಲಿರುವ ಬೇಟೈನ್ ಅಂಶ ದೇಹದಲ್ಲಿರುವ ಕೊಬ್ಬಿನಂಶವನ್ನು ಕಡಿಮೆ ಮಾಡುತ್ತದೆ.
ರಕ್ತ ಹೀನತೆ ನಿವಾರಿಸುತ್ತದೆ: ರಕ್ತ ಹೀನತೆ ಸಮಸ್ಯೆ ಇರವವರು ಪ್ರತಿನಿತ್ಯ ಬೀಟ್ ರೂಟ್ ಜ್ಯೂಸ್ ಕುಡಿಯುವುದು, ಬೀಟ್ ರೂಟ್ ನಿಂದ ಪದಾರ್ಥಗಳನ್ನು ತಯಾರಿಸಿ ತಿನ್ನಬೇಕು. ಈ ರೀತಿ ಮಾಡಿದರೆ ದೇಹದಲ್ಲಿ ರಕ್ತಕಣಗಳು ಹೆಚ್ಚಾಗಿ ರಕ್ತಹೀನತೆ ಸಮಸ್ಯೆ ಕಡಿಮೆಯಾಗುವುದು. ಆದ್ದರಿಂದ ಬೀಟ್ ರೂಟ್ ತಿನ್ನಲು ಇಷ್ಟವಿರಲಿ ಅಥವಾ ಇಲ್ಲದಿರಲಿ, ಆದರೆ ಇದನ್ನು ಕಡ್ಡಾಯವಾಗಿ ನಿಮ್ಮ ಆಹಾರಕ್ರಮದಲ್ಲಿ ಸೇರಿಸಿದರೆ ಆರೋಗ್ಯಕ್ಕೆ ಒಳ್ಳೆಯದು.
ಬೀಟ್ರೂಟ್ನಲ್ಲಿರೋ ಆಂಥೋಕ್ಯಾನಿನ್ಸ್ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಆಕ್ಸಿಡೇಶನ್ ವಿರುದ್ಧ ಹೋರಾಡುತ್ತದೆ. ಅಂಥೋಕ್ಯಾನಿನ್ಸ್ ವಿವಿಧ ಬಗೆಯ ಕ್ಯಾನ್ಸರ್ ತಡೆಗಟ್ಟಲು ನೆರವಾಗುತ್ತದೆ. ಇದಲ್ಲದೆ, ಬೀಟ್ರೂಟ್ ಲಿವರ್ ಮತ್ತು ಹೊಟ್ಟೆಯ ಆರೋಗ್ಯಕ್ಕೆ ಒಳ್ಳೆಯದು. ಇದು ಕ್ಯಾಲ್ಸಿಯಂ, ಪೊಟ್ಯಾಸಿಯಂ ಮತ್ತು ಕಬ್ಬಿಣ ಹಾಗೂ ಇತರ ಪೋಷಕಾಂಶಗಳನ್ನು ಒಳಗೊಂಡಿದೆ. ಮೂಳೆಗಳು ಮತ್ತು ಹಲ್ಲುಗಳನ್ನ ಬಲಗೊಳಿಸುತ್ತದೆ. ಇನ್ನು ಬೀಟ್ರೂಟ್ ಜ್ಯೂಸ್ ಅತ್ಯುತ್ತಮ ರಕ್ತ ಶುದ್ಧೀಕಾರಕವಾಗಿದೆ. ಇದು ಕಣ್ಣಿನ ಆರೋಗ್ಯ ಕಾಪಾಡುತ್ತದೆ. ಮತ್ತು ರಕ್ತ ಸಂಚಾರವನ್ನ ಉತ್ತಮವಾಗಿರಿಸುತ್ತದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…