ಬೀದರ್: ಉದ್ಯೋಗಕ್ಕಾಗಿ ಆನ್ಲೈನ್ನಲ್ಲಿ ಹಣ ಹೂಡಿಕೆ ಮಾಡಿ ವಂಚನೆಗೆ ಒಳಗಾದ ಉಪನ್ಯಾಸಕಿ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ನಡೆದಿದೆ.
ಆರತಿ ಕನಾಟೆ (28) ಆತ್ಮಹತ್ಯೆ ಮಾಡಿಕೊಂಡ ಟೀಚರ್. ಆನ್ಲೈನ್ನಲ್ಲಿ ಪರಿಚಯವಾದ ವ್ಯಕ್ತಿಯೊಂದಿಗೆ ಹಣದ ವ್ಯವಹಾರ ನಡೆಸಿ ವಂಚನೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನ್ಲೈನ್ನಲ್ಲಿ ಮನೆಯಲ್ಲೇ ಕುಳಿತು ಉದ್ಯಮ ಮಾಡಲು ಹಣ ಹೂಡಿಕೆ ಮಾಡಿ ಎಂದ ವ್ಯಕ್ತಿಯನ್ನು ನಂಬಿದ ಉಪನ್ಯಾಸಕಿ ಬರೋಬ್ಬರಿ 2.50 ಲಕ್ಷ ವರೆಗೆ ಹಣ ಕಳುಹಿಸಿದ್ದಾರೆ. ಬಳಿಕ ಇನ್ನೂ 82 ಸಾವಿರ ಹಣ ಕಳಿಸಿದ್ರೆ ಉದ್ಯೋಗದ ಜೊತೆಗೆ ಹೂಡಿಕೆ ಮಾಡಿದ ಎಲ್ಲಾ ಹಣವನ್ನು ವಾಪಸ್ ಕೊಡುವುದಾಗಿ ತಿಳಿಸಿದ್ದಾನೆ. ಇದನ್ನೂ ಓದಿ: ಬಂಟ್ವಾಳ: ಮಗುವಿನ ಅನಾರೋಗ್ಯ ಹಿನ್ನೆಲೆ.. ಉಕ್ರೇನ್ ಕುಟುಂಬದಿಂದ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅಗೇಲು ಸೇವೆ – Vishwanews24
ಮನೆಯವರ ಗಮನಕ್ಕೆ ತಾರದೆ ಲಕ್ಷಾಂತರ ರೂಪಾಯಿ ಕಳೆದುಕೊಂಡ ಭೀತಿಯಿಂದ ಉಪನ್ಯಾಸಕಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಹಣ ಹೂಡಿಕೆ ಮಾಡಿದ್ದ ಏಜೆನ್ಸಿ ಬಗ್ಗೆ ಡೆತ್ನೋಟ್ನಲ್ಲಿ ಉಲ್ಲೇಖ ಮಾಡಿ ಉಪನ್ಯಾಸಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಉಪನ್ಯಾಸಕಿ ಬಸವಕಲ್ಯಾಣ ನಗರದ ಖಾಸಗಿ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ಕುರಿತು ಬಸವಕಲ್ಯಾಣ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಂಗಳೂರು : ಓವರ್ ಟೇಕ್ ಮಾಡುವ ಭರದಲ್ಲಿ ಬಸ್ಗೆ ಬೈಕ್ ಡಿಕ್ಕಿ.. ಇಬ್ಬರು ಸವಾರರು ಸ್ಥಳದಲ್ಲೇ ಸಾವು – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…