ಬೀದರ್: ಉದ್ಯೋಗಕ್ಕಾಗಿ ಆನ್ಲೈನ್ನಲ್ಲಿ ಹಣ ಹೂಡಿಕೆ ಮಾಡಿ ವಂಚನೆಗೆ ಒಳಗಾದ ಉಪನ್ಯಾಸಕಿ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ನಡೆದಿದೆ.
ಆರತಿ ಕನಾಟೆ (28) ಆತ್ಮಹತ್ಯೆ ಮಾಡಿಕೊಂಡ ಟೀಚರ್. ಆನ್ಲೈನ್ನಲ್ಲಿ ಪರಿಚಯವಾದ ವ್ಯಕ್ತಿಯೊಂದಿಗೆ ಹಣದ ವ್ಯವಹಾರ ನಡೆಸಿ ವಂಚನೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನ್ಲೈನ್ನಲ್ಲಿ ಮನೆಯಲ್ಲೇ ಕುಳಿತು ಉದ್ಯಮ ಮಾಡಲು ಹಣ ಹೂಡಿಕೆ ಮಾಡಿ ಎಂದ ವ್ಯಕ್ತಿಯನ್ನು ನಂಬಿದ ಉಪನ್ಯಾಸಕಿ ಬರೋಬ್ಬರಿ 2.50 ಲಕ್ಷ ವರೆಗೆ ಹಣ ಕಳುಹಿಸಿದ್ದಾರೆ. ಬಳಿಕ ಇನ್ನೂ 82 ಸಾವಿರ ಹಣ ಕಳಿಸಿದ್ರೆ ಉದ್ಯೋಗದ ಜೊತೆಗೆ ಹೂಡಿಕೆ ಮಾಡಿದ ಎಲ್ಲಾ ಹಣವನ್ನು ವಾಪಸ್ ಕೊಡುವುದಾಗಿ ತಿಳಿಸಿದ್ದಾನೆ. ಇದನ್ನೂ ಓದಿ: ಬಂಟ್ವಾಳ: ಮಗುವಿನ ಅನಾರೋಗ್ಯ ಹಿನ್ನೆಲೆ.. ಉಕ್ರೇನ್ ಕುಟುಂಬದಿಂದ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅಗೇಲು ಸೇವೆ – Vishwanews24
ಮನೆಯವರ ಗಮನಕ್ಕೆ ತಾರದೆ ಲಕ್ಷಾಂತರ ರೂಪಾಯಿ ಕಳೆದುಕೊಂಡ ಭೀತಿಯಿಂದ ಉಪನ್ಯಾಸಕಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಹಣ ಹೂಡಿಕೆ ಮಾಡಿದ್ದ ಏಜೆನ್ಸಿ ಬಗ್ಗೆ ಡೆತ್ನೋಟ್ನಲ್ಲಿ ಉಲ್ಲೇಖ ಮಾಡಿ ಉಪನ್ಯಾಸಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಉಪನ್ಯಾಸಕಿ ಬಸವಕಲ್ಯಾಣ ನಗರದ ಖಾಸಗಿ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ಕುರಿತು ಬಸವಕಲ್ಯಾಣ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಂಗಳೂರು : ಓವರ್ ಟೇಕ್ ಮಾಡುವ ಭರದಲ್ಲಿ ಬಸ್ಗೆ ಬೈಕ್ ಡಿಕ್ಕಿ.. ಇಬ್ಬರು ಸವಾರರು ಸ್ಥಳದಲ್ಲೇ ಸಾವು – Vishwanews24
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…