ಬೀದರ್ : ಉಪಚುನಾವಣೆಯಲ್ಲಿಅಲ್ಲಾಹುನ ದಯೆಯಿಂದ ಪಾಸ್ ಆದ್ರೆ 2023 ರಲ್ಲಿ ನಮ್ಮ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ : HDK -Vishwanews24

Featured, ರಾಜ್ಯ ನ್ಯೂಸ್

ಬೀದರ್ : ಉಪಚುನಾವಣೆಯಲ್ಲಿಅಲ್ಲಾಹುನ ದಯೆಯಿಂದ ಪಾಸ್ ಆದ್ರೆ 2023 ರಲ್ಲಿ ನಮ್ಮ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ : HDK -Vishwanews24

ಬೀದರ್: ಅಲ್ಲಾಹುನ ದಯೆಯಿಂದ ಬಸವಕಲ್ಯಾಣ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಜಯಗಳಿಸಿದರೆ 2023ರಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬಸವಕಲ್ಯಾಣದ ಜಮಾಅತೆ ಇಸ್ಲಾಮೀ ಹಿಂದ್ ಮಸೀದಿಯಲ್ಲಿ, ಜೆಡಿಎಸ್ ಅಭ್ಯರ್ಥಿ ಸೈಯದ್ ಯಸ್ರಬ್ ಅಲಿ ಖಾದ್ರಿಪರ ಪ್ರಚಾರ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ನ ಸ್ನೇಹಿತರು ನಮ್ಮನ್ನ ಬಿಜೆಪಿಯ ಬಿ ಟೀಮ್ ಅನ್ನೋ ಗೂಭೆ ಕೂರಿಸಿ ನಮ್ಮ ಪಕ್ಷದ ಬಗ್ಗೆ ಕೆಟ್ಟ ವಾತಾವರಣ ನಿರ್ಮಾಣ ಮಾಡಿದ್ದಾರೆ. ಯಾರ್ ಏನು ಅಂದ್ರು ನಾವು ನಮ್ಮ ಸೆಕ್ಯೂಲರ್ ಐಡಾಲಾಜಿಗೆ ದಕ್ಕೆ ಬಾರದಂತೆ ನಡೆದುಕೊಳ್ಳುತ್ತೇವೆ ಎಂಬುದನ್ನು ನಾನು ಬಹಳ ಸ್ಪಷ್ಟವಾಗಿ ಹೇಳುತ್ತೇನೆ.

ಉಡುಪಿ : ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಅನುಷ್ಟಾನ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ : ಡಾ. ಆರ್. ಜಿ ಆನಂದ್ -Vishwanews24

ಖಾದ್ರಿ ಸಾಹೇಬರನ್ನ ನಿಲ್ಲಿಸಲು ತಿರ್ಮಾನಿಸಿದ್ದು, ದೇವರು ಕೊಟ್ಟ ಪ್ರೇರಣೆಯಾಗಿದೆ. ಮುಸ್ಲಿಂ ಸಮಾಜದ ಅಭ್ಯರ್ಥಿಯನ್ನು ನಿಲ್ಲಿಸಿದ್ರೆ ಮುಸ್ಲಿಂರಿಗೆ ನ್ಯಾಯ ದೊರಕಿಸಿಕೊಟ್ಟಂತಾಗುತ್ತದೆ ಎಂಬ ಕಾರಣಕ್ಕಾಗಿ ಮುಸ್ಲಿಂ ಸಮಾಜದ ಅಭ್ಯರ್ಥಿಯನ್ನು ಹಾಕಿದ್ದೇವೆ. ಕಲಬುರಗಿಯ ಇನಮ್ದಾರ್ ಅವರನ್ನು ನಾನು ವಿಚಾರಿಸಿದಾಗ ಅವ್ರು ಖಾದ್ರಿ ಸಾಹೇಬರ ಹೆಸರು ಹೇಳಿದ್ದರು. ಅದೇ ಕಾರಣಕ್ಕಾಗಿ ಖಾದ್ರಿ ಸಾಹೇಬರಲ್ಲಿ ಮನವಿ ಮಾಡಿದಾಗ ಅವ್ರು ಟೈಮ್ ತಗೊಂಡು ಒಪ್ಪಿಕೊಂಡರು. ಈ ಚುನಾವಣೆಯಲ್ಲಿ ಅಲ್ಲಾಹುನ ದಯೆಯಿಂದ ನಾನು ಪಾಸ್ ಆದ್ರೆ 2023 ರಲ್ಲಿ ನಮ್ಮ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದರು.

ಸ್ಯಾಂಡಲ್‌ವುಡ್‌ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್​ ಜನ್ಯ ಅವರಿಗೆ ಕೊರೊನಾ ಪಾಸಿಟಿವ್ -Vishwanews24