ಬೀದರ್: ಅಲ್ಲಾಹುನ ದಯೆಯಿಂದ ಬಸವಕಲ್ಯಾಣ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಜಯಗಳಿಸಿದರೆ 2023ರಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಬಸವಕಲ್ಯಾಣದ ಜಮಾಅತೆ ಇಸ್ಲಾಮೀ ಹಿಂದ್ ಮಸೀದಿಯಲ್ಲಿ, ಜೆಡಿಎಸ್ ಅಭ್ಯರ್ಥಿ ಸೈಯದ್ ಯಸ್ರಬ್ ಅಲಿ ಖಾದ್ರಿಪರ ಪ್ರಚಾರ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ನ ಸ್ನೇಹಿತರು ನಮ್ಮನ್ನ ಬಿಜೆಪಿಯ ಬಿ ಟೀಮ್ ಅನ್ನೋ ಗೂಭೆ ಕೂರಿಸಿ ನಮ್ಮ ಪಕ್ಷದ ಬಗ್ಗೆ ಕೆಟ್ಟ ವಾತಾವರಣ ನಿರ್ಮಾಣ ಮಾಡಿದ್ದಾರೆ. ಯಾರ್ ಏನು ಅಂದ್ರು ನಾವು ನಮ್ಮ ಸೆಕ್ಯೂಲರ್ ಐಡಾಲಾಜಿಗೆ ದಕ್ಕೆ ಬಾರದಂತೆ ನಡೆದುಕೊಳ್ಳುತ್ತೇವೆ ಎಂಬುದನ್ನು ನಾನು ಬಹಳ ಸ್ಪಷ್ಟವಾಗಿ ಹೇಳುತ್ತೇನೆ.
ಖಾದ್ರಿ ಸಾಹೇಬರನ್ನ ನಿಲ್ಲಿಸಲು ತಿರ್ಮಾನಿಸಿದ್ದು, ದೇವರು ಕೊಟ್ಟ ಪ್ರೇರಣೆಯಾಗಿದೆ. ಮುಸ್ಲಿಂ ಸಮಾಜದ ಅಭ್ಯರ್ಥಿಯನ್ನು ನಿಲ್ಲಿಸಿದ್ರೆ ಮುಸ್ಲಿಂರಿಗೆ ನ್ಯಾಯ ದೊರಕಿಸಿಕೊಟ್ಟಂತಾಗುತ್ತದೆ ಎಂಬ ಕಾರಣಕ್ಕಾಗಿ ಮುಸ್ಲಿಂ ಸಮಾಜದ ಅಭ್ಯರ್ಥಿಯನ್ನು ಹಾಕಿದ್ದೇವೆ. ಕಲಬುರಗಿಯ ಇನಮ್ದಾರ್ ಅವರನ್ನು ನಾನು ವಿಚಾರಿಸಿದಾಗ ಅವ್ರು ಖಾದ್ರಿ ಸಾಹೇಬರ ಹೆಸರು ಹೇಳಿದ್ದರು. ಅದೇ ಕಾರಣಕ್ಕಾಗಿ ಖಾದ್ರಿ ಸಾಹೇಬರಲ್ಲಿ ಮನವಿ ಮಾಡಿದಾಗ ಅವ್ರು ಟೈಮ್ ತಗೊಂಡು ಒಪ್ಪಿಕೊಂಡರು. ಈ ಚುನಾವಣೆಯಲ್ಲಿ ಅಲ್ಲಾಹುನ ದಯೆಯಿಂದ ನಾನು ಪಾಸ್ ಆದ್ರೆ 2023 ರಲ್ಲಿ ನಮ್ಮ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದರು.
ಸ್ಯಾಂಡಲ್ವುಡ್ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಕೊರೊನಾ ಪಾಸಿಟಿವ್ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…