ಬೀದರ್: ಅಲ್ಲಾಹುನ ದಯೆಯಿಂದ ಬಸವಕಲ್ಯಾಣ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಜಯಗಳಿಸಿದರೆ 2023ರಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಬಸವಕಲ್ಯಾಣದ ಜಮಾಅತೆ ಇಸ್ಲಾಮೀ ಹಿಂದ್ ಮಸೀದಿಯಲ್ಲಿ, ಜೆಡಿಎಸ್ ಅಭ್ಯರ್ಥಿ ಸೈಯದ್ ಯಸ್ರಬ್ ಅಲಿ ಖಾದ್ರಿಪರ ಪ್ರಚಾರ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ನ ಸ್ನೇಹಿತರು ನಮ್ಮನ್ನ ಬಿಜೆಪಿಯ ಬಿ ಟೀಮ್ ಅನ್ನೋ ಗೂಭೆ ಕೂರಿಸಿ ನಮ್ಮ ಪಕ್ಷದ ಬಗ್ಗೆ ಕೆಟ್ಟ ವಾತಾವರಣ ನಿರ್ಮಾಣ ಮಾಡಿದ್ದಾರೆ. ಯಾರ್ ಏನು ಅಂದ್ರು ನಾವು ನಮ್ಮ ಸೆಕ್ಯೂಲರ್ ಐಡಾಲಾಜಿಗೆ ದಕ್ಕೆ ಬಾರದಂತೆ ನಡೆದುಕೊಳ್ಳುತ್ತೇವೆ ಎಂಬುದನ್ನು ನಾನು ಬಹಳ ಸ್ಪಷ್ಟವಾಗಿ ಹೇಳುತ್ತೇನೆ.
ಖಾದ್ರಿ ಸಾಹೇಬರನ್ನ ನಿಲ್ಲಿಸಲು ತಿರ್ಮಾನಿಸಿದ್ದು, ದೇವರು ಕೊಟ್ಟ ಪ್ರೇರಣೆಯಾಗಿದೆ. ಮುಸ್ಲಿಂ ಸಮಾಜದ ಅಭ್ಯರ್ಥಿಯನ್ನು ನಿಲ್ಲಿಸಿದ್ರೆ ಮುಸ್ಲಿಂರಿಗೆ ನ್ಯಾಯ ದೊರಕಿಸಿಕೊಟ್ಟಂತಾಗುತ್ತದೆ ಎಂಬ ಕಾರಣಕ್ಕಾಗಿ ಮುಸ್ಲಿಂ ಸಮಾಜದ ಅಭ್ಯರ್ಥಿಯನ್ನು ಹಾಕಿದ್ದೇವೆ. ಕಲಬುರಗಿಯ ಇನಮ್ದಾರ್ ಅವರನ್ನು ನಾನು ವಿಚಾರಿಸಿದಾಗ ಅವ್ರು ಖಾದ್ರಿ ಸಾಹೇಬರ ಹೆಸರು ಹೇಳಿದ್ದರು. ಅದೇ ಕಾರಣಕ್ಕಾಗಿ ಖಾದ್ರಿ ಸಾಹೇಬರಲ್ಲಿ ಮನವಿ ಮಾಡಿದಾಗ ಅವ್ರು ಟೈಮ್ ತಗೊಂಡು ಒಪ್ಪಿಕೊಂಡರು. ಈ ಚುನಾವಣೆಯಲ್ಲಿ ಅಲ್ಲಾಹುನ ದಯೆಯಿಂದ ನಾನು ಪಾಸ್ ಆದ್ರೆ 2023 ರಲ್ಲಿ ನಮ್ಮ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದರು.
ಸ್ಯಾಂಡಲ್ವುಡ್ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಕೊರೊನಾ ಪಾಸಿಟಿವ್ -Vishwanews24
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…