ನವದೆಹಲಿ,: ಬೀದಿ ನಾಯಿಗಳಿಗೆ ಆಹಾರ ನೀಡುವವರಿಗೆ ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದ ಬಾಂಬೆ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಬುಧವಾರ ಮಾರ್ಪಡು ಮಾಡಿದೆ.
ಬೀದಿ ನಾಯಿಗಳಿಗೆ ಆಹಾರ ನೀಡುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ನಾವು ಬಯಸುತ್ತೇವೆ. ಆಹಾರ ನೀಡುವ ಮೂಲಕ ತೊಂದರೆ ಉಂಟುಮಾಡುವ ಯಾರ ವಿರುದ್ಧ ಬೇಕಾದರೂ ಕ್ರಮ ಕೈಗೊಳ್ಳಲು ಪುರಸಭೆಗೆ ಸ್ವಾತಂತ್ರ್ಯ ಇದೆ. ಆದರೆ ಆಹಾರ ನೀಡುವವರ ವಿರುದ್ಧ ದಂಡದಂತಹ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು” ಎಂದು ನ್ಯಾ. ಸಂಜೀವ್ ಖನ್ನಾ ಮತ್ತು ನ್ಯಾ. ಜೆ ಕೆ ಮಹೇಶ್ವರಿ ಅವರಿದ್ದ ಪೀಠ ಹೇಳಿದೆ.
ಮಣ್ಣಲ್ಲಿ ದೇಹ ಮಣ್ಣಾಗುವ ಬದಲು ಉಪಯೋಗವಾಗಲಿ..▶️ ಅಂಗಾಂಗ ದಾನ ಮಾಡಲು ಮುಂದಾದ ನಟ ವಿಜಯ್ ದೇವರಕೊಂಡ – Vishwanews24
ಈ ಮೂಲಕ, ಬೀದಿನಾಯಿಗಳಿಗೆ ಆಹಾರ ನೀಡುವಂತೆ ಒತ್ತಾಯಿಸುವವರು ಅವುಗಳನ್ನು ದತ್ತುಪಡೆಯಬೇಕು ಎಂದು ಹೈಕೋರ್ಟ್ ನಾಗಪುರ ಪೀಠ ಮಾಡಿದ್ದ ಅವಲೋಕನಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
“ಮನುಷ್ಯರು ಇರುವಲ್ಲೆಲ್ಲಾ ಹಿತಾಸಕ್ತಿ ಸಂಘರ್ಷ ಇರುತ್ತದೆ. ಬೀದಿನಾಯಿಗಳಿಂದಲೂ ತಪ್ಪಾಗುತ್ತದೆ, ನಾವು ಎರಡರ ಬಗ್ಗೆಯೂ ಜಾಗೃತರಾಗಿರಬೇಕು, ಬೇರೆ ವಿಚಾರಗಳು ಇರಬಹುದು. ಆಹಾರ ನೀಡುವ ಜನರಿಗೆ ನೀವು ಅವುಗಳನ್ನು ದತ್ತು ಪಡೆದುಕೊಳ್ಳಿ ಎಂದು ಒತ್ತಾಯಿಸಲು ಸಾಧ್ಯವಿಲ್ಲ” ಎಂಬುದಾಗಿ ನ್ಯಾ. ಖನ್ನಾ ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ʻ24X7 ಸಹಾಯವಾಣಿʼ ಆರಂಭ : ಸಚಿವ ಸುಧಾಕರ್ – Vishwanews24
ಮಹಾರಾಷ್ಟ್ರದ ನಾಗಪುರದಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವವರಿಗೆ ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಬಾಂಬೆ ಹೈಕೋರ್ಟ್ ಸೂಚಿಸಿತ್ತು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…