ನವದೆಹಲಿ,: ಬೀದಿ ನಾಯಿಗಳಿಗೆ ಆಹಾರ ನೀಡುವವರಿಗೆ ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದ ಬಾಂಬೆ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಬುಧವಾರ ಮಾರ್ಪಡು ಮಾಡಿದೆ.
ಬೀದಿ ನಾಯಿಗಳಿಗೆ ಆಹಾರ ನೀಡುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ನಾವು ಬಯಸುತ್ತೇವೆ. ಆಹಾರ ನೀಡುವ ಮೂಲಕ ತೊಂದರೆ ಉಂಟುಮಾಡುವ ಯಾರ ವಿರುದ್ಧ ಬೇಕಾದರೂ ಕ್ರಮ ಕೈಗೊಳ್ಳಲು ಪುರಸಭೆಗೆ ಸ್ವಾತಂತ್ರ್ಯ ಇದೆ. ಆದರೆ ಆಹಾರ ನೀಡುವವರ ವಿರುದ್ಧ ದಂಡದಂತಹ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು” ಎಂದು ನ್ಯಾ. ಸಂಜೀವ್ ಖನ್ನಾ ಮತ್ತು ನ್ಯಾ. ಜೆ ಕೆ ಮಹೇಶ್ವರಿ ಅವರಿದ್ದ ಪೀಠ ಹೇಳಿದೆ.
ಮಣ್ಣಲ್ಲಿ ದೇಹ ಮಣ್ಣಾಗುವ ಬದಲು ಉಪಯೋಗವಾಗಲಿ..▶️ ಅಂಗಾಂಗ ದಾನ ಮಾಡಲು ಮುಂದಾದ ನಟ ವಿಜಯ್ ದೇವರಕೊಂಡ – Vishwanews24
ಈ ಮೂಲಕ, ಬೀದಿನಾಯಿಗಳಿಗೆ ಆಹಾರ ನೀಡುವಂತೆ ಒತ್ತಾಯಿಸುವವರು ಅವುಗಳನ್ನು ದತ್ತುಪಡೆಯಬೇಕು ಎಂದು ಹೈಕೋರ್ಟ್ ನಾಗಪುರ ಪೀಠ ಮಾಡಿದ್ದ ಅವಲೋಕನಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
“ಮನುಷ್ಯರು ಇರುವಲ್ಲೆಲ್ಲಾ ಹಿತಾಸಕ್ತಿ ಸಂಘರ್ಷ ಇರುತ್ತದೆ. ಬೀದಿನಾಯಿಗಳಿಂದಲೂ ತಪ್ಪಾಗುತ್ತದೆ, ನಾವು ಎರಡರ ಬಗ್ಗೆಯೂ ಜಾಗೃತರಾಗಿರಬೇಕು, ಬೇರೆ ವಿಚಾರಗಳು ಇರಬಹುದು. ಆಹಾರ ನೀಡುವ ಜನರಿಗೆ ನೀವು ಅವುಗಳನ್ನು ದತ್ತು ಪಡೆದುಕೊಳ್ಳಿ ಎಂದು ಒತ್ತಾಯಿಸಲು ಸಾಧ್ಯವಿಲ್ಲ” ಎಂಬುದಾಗಿ ನ್ಯಾ. ಖನ್ನಾ ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ʻ24X7 ಸಹಾಯವಾಣಿʼ ಆರಂಭ : ಸಚಿವ ಸುಧಾಕರ್ – Vishwanews24
ಮಹಾರಾಷ್ಟ್ರದ ನಾಗಪುರದಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವವರಿಗೆ ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಬಾಂಬೆ ಹೈಕೋರ್ಟ್ ಸೂಚಿಸಿತ್ತು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…