Featured

ಬೀದಿ ನಾಯಿಗಳಿಗೆ ಆಹಾರ ನೀಡಿದವರಿಗೆ ದಂಡ ವಿಧಿಸುವಂತಿಲ್ಲ :  ಸುಪ್ರೀಂ ಕೋರ್ಟ್‌ – Vishwanews24

ಬೀದಿ ನಾಯಿಗಳಿಗೆ ಆಹಾರ ನೀಡಿದವರಿಗೆ ದಂಡ ವಿಧಿಸುವಂತಿಲ್ಲ :  ಸುಪ್ರೀಂ ಕೋರ್ಟ್‌

ನವದೆಹಲಿ,: ಬೀದಿ ನಾಯಿಗಳಿಗೆ ಆಹಾರ ನೀಡುವವರಿಗೆ ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದ ಬಾಂಬೆ ಹೈಕೋರ್ಟ್‌ ಆದೇಶವನ್ನು ಸುಪ್ರೀಂ ಕೋರ್ಟ್‌ ಬುಧವಾರ ಮಾರ್ಪಡು ಮಾಡಿದೆ.

ಬೀದಿ ನಾಯಿಗಳಿಗೆ ಆಹಾರ ನೀಡುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ನಾವು ಬಯಸುತ್ತೇವೆ. ಆಹಾರ ನೀಡುವ ಮೂಲಕ ತೊಂದರೆ ಉಂಟುಮಾಡುವ ಯಾರ ವಿರುದ್ಧ ಬೇಕಾದರೂ ಕ್ರಮ ಕೈಗೊಳ್ಳಲು ಪುರಸಭೆಗೆ ಸ್ವಾತಂತ್ರ್ಯ ಇದೆ. ಆದರೆ ಆಹಾರ ನೀಡುವವರ ವಿರುದ್ಧ ದಂಡದಂತಹ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು” ಎಂದು ನ್ಯಾ. ಸಂಜೀವ್ ಖನ್ನಾ ಮತ್ತು ನ್ಯಾ. ಜೆ ಕೆ ಮಹೇಶ್ವರಿ ಅವರಿದ್ದ ಪೀಠ ಹೇಳಿದೆ.

ಮಣ್ಣಲ್ಲಿ ದೇಹ ಮಣ್ಣಾಗುವ ಬದಲು ಉಪಯೋಗವಾಗಲಿ..▶️ ಅಂಗಾಂಗ ದಾನ ಮಾಡಲು ಮುಂದಾದ ನಟ ವಿಜಯ್ ದೇವರಕೊಂಡ – Vishwanews24

ಈ ಮೂಲಕ, ಬೀದಿನಾಯಿಗಳಿಗೆ ಆಹಾರ ನೀಡುವಂತೆ ಒತ್ತಾಯಿಸುವವರು ಅವುಗಳನ್ನು ದತ್ತುಪಡೆಯಬೇಕು ಎಂದು ಹೈಕೋರ್ಟ್‌ ನಾಗಪುರ ಪೀಠ ಮಾಡಿದ್ದ ಅವಲೋಕನಗಳಿಗೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ.

“ಮನುಷ್ಯರು ಇರುವಲ್ಲೆಲ್ಲಾ ಹಿತಾಸಕ್ತಿ ಸಂಘರ್ಷ ಇರುತ್ತದೆ. ಬೀದಿನಾಯಿಗಳಿಂದಲೂ ತಪ್ಪಾಗುತ್ತದೆ, ನಾವು ಎರಡರ ಬಗ್ಗೆಯೂ ಜಾಗೃತರಾಗಿರಬೇಕು, ಬೇರೆ ವಿಚಾರಗಳು ಇರಬಹುದು. ಆಹಾರ ನೀಡುವ ಜನರಿಗೆ ನೀವು ಅವುಗಳನ್ನು ದತ್ತು ಪಡೆದುಕೊಳ್ಳಿ ಎಂದು ಒತ್ತಾಯಿಸಲು ಸಾಧ್ಯವಿಲ್ಲ” ಎಂಬುದಾಗಿ ನ್ಯಾ. ಖನ್ನಾ ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ʻ24X7 ಸಹಾಯವಾಣಿʼ ಆರಂಭ :‌ ಸಚಿವ ಸುಧಾಕರ್ – Vishwanews24

ಮಹಾರಾಷ್ಟ್ರದ ನಾಗಪುರದಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವವರಿಗೆ ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಬಾಂಬೆ ಹೈಕೋರ್ಟ್‌ ಸೂಚಿಸಿತ್ತು.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

10 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

16 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

16 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

17 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

18 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

18 hours ago