Featured

ಬೀದಿ ನಾಯಿ ದಾಳಿಯಿಂದ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ – vishwanews24

ಬೀದಿ ನಾಯಿ ದಾಳಿಯಿಂದ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ

ಬೆಂಗಳೂರು: ಬೆಂಗಳೂರಿನಲ್ಲಿ ಬೀದಿ ನಾಯಿ ದಾಳಿಯಿಂದ ಗಾಯಗೊಂಡ ಅಥವಾ ಸಾವನ್ನಪ್ಪಿದವರಿಗೆ ಕರ್ನಾಟಕ ಸರ್ಕಾರ ಪರಿಷ್ಕೃತ ಪರಿಹಾರ ಮಾರ್ಗಸೂಚಿ ಪ್ರಕಟಿಸಿದೆ. ಸಣ್ಣ ಗಾಯಗಳಿಗೆ 5,000 ರೂ., ಸಾವು ಸಂಭವಿಸಿದರೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಕರ್ನಾಟಕ ಸರ್ಕಾರ ನವೀಕರಿಸಿದ ಆದೇಶವನ್ನು ಬಿಡುಗಡೆಗೊಳಿಸಿದೆ.

ಬೆಂಗಳೂರು ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡ ಅಥವಾ ಸಾವನ್ನಪ್ಪಿದ ಜನರಿಗೆ ಪರಿಹಾರ ಮಾರ್ಗಸೂಚಿಗಳನ್ನು ಪರಿಷ್ಕರಿಸಿ ಕರ್ನಾಟಕ ಸರ್ಕಾರ ನವೀಕರಿಸಿದ ಆದೇಶವನ್ನು ಬಿಡುಗಡೆ ಮಾಡಿದ್ದು, ನಾಯಿ ಕಚ್ಚಿದ ಗಾಯ, ಮೂಗೇಟುಗಳು ಮತ್ತು ರಕ್ತಸ್ರಾವದ ಸಮಸ್ಯೆ, ಸೀಳುವಿಕೆ, ಇಂತಹ ಗಾಯಗಳು ಕಂಡು ಬಂದರೆ 5,000 ರೂ. ವರೆಗೆ ಪರಿಹಾರವನ್ನು ನೀಡಲಾಗುವುದು. ಇನ್ನು ಬೀದಿ ನಾಯಿ ದಾಳಿಯಿಂದ ಅಥವಾ ರೇಬೀಸ್‌ನಿಂದ ವ್ಯಕ್ತಿ ಸಾವನ್ನಪ್ಪಿದರೆ, ಅವರ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು.

ನಾಯಿಗಳ ದಾಳಿಯಿಂದ ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆಯನ್ನು ನೀಡಲು ಹಾಗೂ ಸಾವನ್ನಪ್ಪಿದವರ ಮನೆಯ ಆರ್ಥಿಕ ಸಹಾಯಕ್ಕಾಗಿ ಈ ಪರಿಷ್ಕರಣೆ ಮಾಡಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿದೆ. 2023ರಲ್ಲಿ ನಾಯಿಗಳ ದಾಳಿಯಿಂದ ಗಾಯಗೊಂಡ ಅಥವಾ ಸಾವನ್ನಪ್ಪಿದವರಿಗೆ ವಿಶೇಷ ಯೋಜನೆಯನ್ನು ಮಾಡಲಾಗಿತ್ತು. ಇದೀಗ ಆ ಯೋಜನೆಯನ್ನೇ ಮುಂದುವರಿಸಲಾಗುತ್ತಿದ್ದು, ಅದರಲ್ಲಿ ಕೆಲವೊಂದನ್ನು ಬದಲಾವಣೆ ಮಾಡಲಾಗಿದೆ.

ಈ 5,000 ರೂ.ಗಳಲ್ಲಿ 3,500 ರೂ.ಗಳನ್ನು ನಗರಾಭಿವೃದ್ಧಿ ಇಲಾಖೆ ನೀಡುತ್ತದೆ. ಉಳಿದ 1,500 ರೂ. ಅನ್ನು ಆರೋಗ್ಯ ಇಲಾಖೆಯ ಅಡಿಯಲ್ಲಿ ಬರುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ಗೆ ವರ್ಗಾಯಿಸಲಾಗುತ್ತದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ. ಈ ಮೂಲಕ ನಾಯಿಗಳ ದಾಳಿಯಿಂದ ಆಗಿರುವ ಗಾಯಗಳಿಗೆ ಸರಿಯಾದ ಚಿಕಿತ್ಸೆ ನೀಡಿ, ಗುಣಮುಖ ಮಾಡುವುದು ಸರ್ಕಾರ ಉದ್ದೇಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago