Featured

ಬುರ್ಖಾ ಧರಿಸಿ ತಲೆಯ ಮೇಲೆ ನೀರಿನ ಕೊಡ ಹಿಡಿದು ಪ್ರತಿಭಟನೆ ನಡೆಸಿದ ವಾಟಾಳ್‌ ನಾಗರಾಜ್‌  – Vishwanews24

ಕಾವೇರಿಗಾಗಿ ನಾವು ಕರ್ನಾಟಕ ಬಂದ್‌ಗೆ  ಕರೆ ಕೊಟ್ಟರೆ ಸರ್ಕಾರ ನಮ್ಮನ್ನು ಬಂದ್‌ ಮಾಡಲು ಹೊರಟಿದೆ : ವಾಟಾಳ್‌ ನಾಗರಾಜ್‌  ಆಕ್ರೋಶ

ಬೆಂಗಳೂರು: ಕಾವೇರಿಗಾಗಿ ನಾವು ಕರ್ನಾಟಕ ಬಂದ್‌ಗೆ  ಕರೆ ಕೊಟ್ಟರೆ ಸರ್ಕಾರ ನಮ್ಮನ್ನು ಬಂದ್‌ ಮಾಡಲು ಹೊರಟಿದೆ ಎಂದು ಕನ್ನಡ ಹೋರಾಟಗಾರ ವಾಟಾಳ್‌ ನಾಗರಾಜ್‌  ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಾಲರ್ಸ್‌ ಕಾಲನಿ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇವತ್ತು ಎರಡು ಬಂದ್‌ ನಡೆಯುತ್ತಿದೆ. ನಾವು ಕಾವೇರಿಗಾಗಿ  ಬಂದ್‌ಗೆ ಕರೆ ನೀಡಿದರೆ ಸರ್ಕಾರ ನಮ್ಮ ಪ್ರತಿಭಟನೆಯನ್ನು ಬಂದ್‌ ಮಾಡುತ್ತಿದೆ. ಸರ್ಕಾರ ಕಾವೇರಿ ಸಮಸ್ಯೆಯನ್ನು ಅರ್ಥಮಾಡಿಕೊಂಡಿಲ್ಲ ಎಂದು ಸಿಟ್ಟು ಹೊರಹಾಕಿದರು.

ಇದನ್ನೂ ಓದಿ: 

ಬಂದ್‌ಗೆ ಬೆಂಬಲ ನೀಡಿದ ಜನತೆಗೆ ಧನ್ಯವಾದ ಹೇಳಿದ ವಾಟಾಳ್‌, ಅಖಂಡ ಕರ್ನಾಟಕ ಹೆಸರನ್ನು ಕನ್ನಡಿಗರು ಉಳಿಸಿದ್ದಾರೆ. ದೇಶಕ್ಕೆ ಕನ್ನಡಿಗರ ಶಕ್ತಿ ಪ್ರದರ್ಶನವಾಗಿದೆ ಎಂದು ಹೇಳಿದರು.

ಹಿಳೆಯರ ಪರವಾಗಿ, ನ್ಯಾಯ, ಸತ್ಯದ ಪರವಾಗಿ ಒತ್ತಾಯಿಸಿ ಇಂದು ಬುರ್ಖಾ ಧರಿಸಿ ಖಾಲಿ ಕೊಡ ಕೈಯಲ್ಲಿ ಹಿಡಿದು ಕಾವೇರಿ ಜಲಕ್ಕಾಗಿ ಹೋರಾಟ ಮಾಡುತ್ತಿದ್ದೇನೆ ಎಂದು ಕನ್ನಡ ಒಕ್ಕೂಟ ನಾಯಕ ಮಾಜಿ ಶಾಸಕ ಕನ್ನಡ ಚಳವಳಿಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಕರ್ನಾಟಕ ತಮಿಳು ನಾಡಿಗೆ ಕದ್ದು ನೀರು ಬಿಡುತ್ತಿದೆ ಎಂದು ಸಾಂಕೇತಿಸಲು ಈ ಕಪ್ಪು ಬಣ್ಣ ಧರಿಸಿದ್ದೇನೆ, ಇನ್ನು ಬುರ್ಖಾ ಮಹಿಳೆಯರ ನ್ಯಾಯದ,ಸಮಾನತೆಯ ಸಂಕೇತವಾಗಿದೆ. ನ್ಯಾಯದೇವತೆ ಧರಿಸುವ ಬಟ್ಟೆ ಅಥವಾ ಬುರ್ಖಾ ಎಂದಾದರೂ ಕರೆಯಲಿ. ನ್ಯಾಯದೇವತೆಯ ಸಂದೇಶ ಸಾರುವ ಬುರ್ಖಾ ಧರಿಸಿದ್ದೇನೆ. ಮಹಿಳೆಯರ ಗೌರವದ ಸಂಕೇತ ಸಾರುವ ಬುರ್ಖಾ ಧರಿಸಿದ್ದೇನೆ. ಕಾವೇರಿ ನದಿ ನೀರು ವಿಚಾರವಾಗಿ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇನೆ ಎಂದು ಹೇಳಿದರು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

3 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

3 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

4 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

5 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

5 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

5 hours ago