Featured

ಬುರ್ಖಾ ಧರಿಸುವುದು ದುಷ್ಟಪದ್ದತಿ , ಮುಂದಿನ ದಿನಗಳಲ್ಲಿ ಬುರ್ಖಾ ನಿಷೇಧ : ಯುಪಿ ಸಚಿವ ಆನಂದ್‌‌ ಸ್ವರೂಪ್‌ ಶುಕ್ಲಾ -Vishwanews24

ಬುರ್ಖಾ ಧರಿಸುವುದು ದುಷ್ಟಪದ್ದತಿ , ಮುಂದಿನ ದಿನಗಳಲ್ಲಿ ಬುರ್ಖಾ ನಿಷೇಧ : ಯುಪಿ ಸಚಿವ ಆನಂದ್‌‌ ಸ್ವರೂಪ್‌ ಶುಕ್ಲಾ -Vishwanews24

ಬಲಿಯಾ, : “ತ್ರಿವಳಿ ತಲಾಖ್‌ನಿಂದ ಮುಸ್ಲಿಂ ಮಹಿಳೆಯರನ್ನು ದೂರ ಮಾಡಿದ್ದಾಯಿತು. ಮುಂದಿನ ದಿನಗಳಲ್ಲಿ ಮುಸ್ಲಿಂ ಮಹಿಳೆಯರಿಗೆ ಬುರ್ಖಾ ಧರಿಸುವುದರಿಂದ ಮುಕ್ತಿ ನೀಡಲಾಗುವುದು” ಎಂದು ಉತ್ತರಪ್ರದೇಶದ ಸಚಿವ ಆನಂದ್‌‌ ಸ್ವರೂಪ್‌ ಶುಕ್ಲಾ ಹೇಳಿದ್ದಾರೆ.

ಬಲಿಯಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬುರ್ಖಾ ಧರಿಸುವುದು ದುಷ್ಟಪದ್ದತಿ. ತ್ರಿವಳಿ ತಲಾಖ್‌ ಅನ್ನು ನಿರ್ಮೂಲನೆ ಮಾಡಿದಂತೆ ಈ ದುಷ್ಟ ಪದ್ದತಿಯಿಂದಲೂ ಕೂಡಾ ಮಹಿಳೆಯರಿಗೆ ಮುಕ್ತಿ ನೀಡಲಾಗುವುದು. ಅನೇಕ ಮುಸ್ಲಿಂ ರಾಷ್ಟ್ರಗಳು ಇದನ್ನು ನಿಷೇಧಿಸಿವೆ. ಈ ದೇಶದಲ್ಲೂ ಕೂಡಾ ಬುರ್ಖಾವನ್ನು ನಿಷೇಧಿಸಬೇಕು” ಎಂದಿದ್ದಾರೆ.

ಇದನ್ನೂ ಓದಿ : ಬ್ಯಾಂಕ್‌ ಗ್ರಾಹಕರ ಗಮನಕ್ಕೆ: ಮಾರ್ಚ್ 27 ರಿಂದ ಸತತ ಏಳು ದಿನ ಬ್ಯಾಂಕ್‌ಗಳು ಕಾರ್ಯನಿರ್ವಹಿಸುವುದಿಲ್ಲ -Vishwanews24

“ಬಲಿಯಾದ ಮಸೀದಿಗಳಲ್ಲಿ ದೊಡ್ಡದಾಗಿ ಧ್ವನಿವರ್ಧಕ ಬಳಸುತ್ತಿರುವದರಿಂದ ಹತ್ತಿರದ ಶಿಕ್ಷಣ ಸಂಸ್ಥೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗುವುದಲ್ಲದೇ, ಯೋಗಾಭ್ಯಾಸ, ಧ್ಯಾನ, ಮುಂತಾದ ಚಟುವಟಿಕೆಗಳನ್ನು ಮಾಡುವಾಗ ತೊಂದರೆಯಾಗುತ್ತದೆ” ಎಂದು ಆರೋಪಿಸಿದ್ದಾರೆ.

“ಈ ಪ್ರದೇಶದ ಜನರು ತೀವ್ರ ಶಬ್ದ ಮಾಲಿನ್ಯ ಎದುರಿಸುತ್ತಿದ್ದಾರೆ. ಅಲ್ಲದೇ, ವಿದ್ಯಾರ್ಥಿಗಳ ಅಧ್ಯಯನಕ್ಕೆ ಕೂಡಾ ತೊಂದರೆಯಾಗುತ್ತದೆ. ಮಕ್ಕಳು, ಹಿರಿಯರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ” ಎಂದಿದ್ದಾರೆ.

ಇದನ್ನೂ ಓದಿ : ಸಿಡಿ ಪ್ರಕರಣ : ಇಂತಹ 10 ವೀಡಿಯೋ ಬರಲಿ ನಾನು ಹೆದರಲ್ಲ , ಕಾನೂನು ಹೋರಾಟ ನಡೆಸಿ ನಿರ್ದೋಷಿ ಆಗಿ ಬರುತ್ತೇನೆ : ರಮೇಶ್ ಜಾರಕಿಹೊಳಿ -Vishwanews24

 

 

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

9 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

9 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

10 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

10 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

11 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

11 hours ago