Featured

ಬುಲ್ಡೋಜರ್ ಕಾನೂನು ತರೋಕೆ ಇದು ಉತ್ತರ ಪ್ರದೇಶ ಅಲ್ಲ : ಡಿ ಕೆ ಶಿ – Vishwanews24

ಕರ್ನಾಟಕವನ್ನು ಯುಪಿಗೆ ಹೋಲಿಸಬೇಡಿ..

ಬಿಜೆಪಿಯವರು ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ..

ದಾವಣಗೆರೆ: ಬುಲ್ಡೋಜರ್ ಕಾನೂನು ತರೋಕೆ ಇದು ಉತ್ತರ ಪ್ರದೇಶ ಅಲ್ಲ.ಕರ್ನಾಟಕವನ್ನು ಯುಪಿಗೆ ಹೋಲಿಸಬೇಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಲ್ಲಿ ಬೇರೆ, ಬೇರೆ ವಿಷಯಗಳಿದ್ದವು ಅದಕ್ಕೆ ಬುಲ್ಡೋಜರ್ ಮಾದರಿ ಮಾಡುತ್ತಿದೆ ಅಲ್ಲಿನ ಸರ್ಕಾರ, ಆದರೆ ಕರ್ನಾಟಕದಲ್ಲಿ ಪ್ರಜ್ಞಾವಂತರಿದ್ದಾರೆ. ಬಿಜೆಪಿ ಸರ್ಕಾರ ಯಾಕಾದರೂ ಬಂದಿದೆ ಎಂದು ಜನ ಕೊರಗುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿಯವರು ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಅವರು ಜನಾದೇಶದಿಂದ ಅಧಿಕಾರಕ್ಕೆ ಬಂದಿಲ್ಲ. ಶಾಸಕರನ್ನು ಖರೀದಿ ಮಾಡಿ ಅಧಿಕಾರ ನಡೆಸುತ್ತಿದ್ದಾರೆ. ಇದನ್ನು ಸದನದಲ್ಲೇ ಶಾಸಕ ಶ್ರೀನಿವಾಸಗೌಡ ಒಪ್ಪಿಕೊಂಡಿದ್ದಾರೆ. ಆಪರೇಷನ್ ಕಮಲದಿಂದ ಬಿಜೆಪಿ ಸರ್ಕಾರ ಜನ್ಮ ತಾಳಿದೆ. ಹೀಗಾಗಿ ಔಷಧಿ, ಗೊಬ್ಬರ, ನೇಮಕಾತಿ ಎಲ್ಲದರಲ್ಲೂ ದುಡ್ಡು ಹೊಡೆಯುತ್ತಿದ್ದಾರೆ.

ಕಾಮಗಾರಿಗಳಲ್ಲಿ ಶೇ.40 ಕಮಿಷನ್ ಪಡೆಯುತ್ತಿದ್ದಾರೆ. ಇವರು ಇವತ್ತು ಇರ್ತಾರೆ ನಾಳೆ ಹೋಗ್ತಾರೆ. ಆದರೆ, ಇದು ರಾಜ್ಯಕ್ಕೆ ಕಪ್ಪು ಚುಕ್ಕೆ ತಂದಿದೆ. ಪ್ರಸ್ತುತವಾಗಿ ನಡೆಯುತ್ತಿರುವ ಧರ್ಮ ದಂಗಲ್‍ನಿಂದಾಗಿ ಬಿಜೆಪಿ ನಾಯಕರ ನಡೆಯ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಮುಸ್ಲಿಂರಿಗೆ ಪ್ರಧಾನ ಮಂತ್ರಿ ಆಗುವ ಅರ್ಹತೆ ಇದೆ, ಏಕೆ ಮುಸ್ಲಿಮರು ರಾಷ್ರಪತಿಯಾಗಿಲ್ವಾ, ವಿಜ್ಞಾನಿಗಳಾಗಿಲ್ವಾ, ಯಾಕೆ ಅವರ ಮೇಲೆ ಸುಮ್ಮನೆ ಭೇದ ಭಾವ ಮಾಡುತ್ತೀರಿ? ಬಿಜೆಪಿ ಕಷ್ಟಕಾಲದಲ್ಲಿ ಬಡವರ ಹೊಟ್ಟೆ ಮೇಲೆ ಬರೆ ಹಾಕಿದೆ. ಎಲ್ಲಾದರೂ ಗಾಡಿ ನಿಂತರೆ ಪಂಚರ್ ಯಾರು ಹಾಕುತ್ತಾರೆ? ಸಂವಿಧಾನ ಕಿತ್ತು ಹಾಕಲು ನಿಮ್ಮಿಂದ ಆಗತ್ತಾ?, ದೇಶ ಶಾಂತಿಯ ತೋಟವೆಂದು ನಾವು ಬದುಕಬೇಕು ಎಂದು ಅಭಿಪ್ರಾಯಪಟ್ಟರು.

ಹಲಾಲ್, ಪಲಾಲ್ ಎಲ್ಲ ಮಾಡಿದ್ದು ಬಿಜೆಪಿಯವರೇ. ನಮ್ಮ ಭಾಗದಲ್ಲಿ ಕಬ್ಬಾಳಮ್ಮ ದೇವಸ್ಥಾನ ಇದೆ ಅಲ್ಲಿ ಸಾವಿರ ಮರಿ ಕಡಿಯುತ್ತಾರೆ. ಕಡಿದಿದ್ದ ಮರಿಗಳನ್ನು ಮುಸ್ಲಿಂರೇ ಕ್ಲಿನ್ ಮಾಡುತ್ತಾರೆ. ಕೋಲಾರ, ರಾಮನಗರದಲ್ಲಿ ಮಾವಿನ ತೋಪಿಗೆ ಔಷಧಿ ಹೊಡೆಯುವರು ಯಾರು? ಚಿತ್ರದುರ್ಗದಲ್ಲಿ ಕುರಿಗಳ ವ್ಯಾಪಾರ ಆಗುತ್ತಿಲ್ಲ ಎನ್ನುವ ವರದಿ ನೋಡಿದೆ, 8 ಸಾವಿರಕ್ಕೆ ಮಾರಾಟವಾಗುತ್ತಿದ್ದ ಕುರಿಗಳು 3-4 ಸಾವಿರಕ್ಕೆ ಮಾರುತ್ತಿದ್ದಾರೆ. ಈಗ ಬಿಜೆಪಿಯವರು ಕುರಿಗಳನ್ನು ತಗೊಂಡು ಹೋಗುತ್ತಾರಾ?. ಇದರ ಪರಿಣಾಮ ಸಂತೆ, ಜಾತ್ರೆಗಳ ಮೇಲೆ ಬಿದ್ದಿದೆ ಎಂದು ಕಿಡಿಕಾರಿದರು.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

13 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

13 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

13 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

14 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

14 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago