ಉಡುಪಿ: ಬುಲ್ ಟ್ರಲ್ ಮತ್ತು ಬೆಳಕು ಮೀನುಗಾರಿಗೆ ನಡೆಸುವ ಬೋಟ್ಗಳಿಗೆ ಡೀಸೆಲ್ ಸಬ್ಸಿಡಿ ಕಡಿತಗೊಳಿಸುವಂತೆ ಮೀನುಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಸರಕಾರದ ಕಾರ್ಯದರ್ಶಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರ ರಾವ್ ಸೂಚಿಸಿದ್ದಾರೆ.
ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಜಿಲ್ಲಾಭಿವೃದ್ಧಿ, ಮರಳು ಸಮಸ್ಯೆ ಹಾಗೂ ನೆರೆ ಪರಿಹಾರಗಳ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಸರಕಾರವು ಬುಲ್ಟ್ರಾಲ್ ಹಾಗೂ ಬೆಳಕು ಮೀನುಗಾರಿಕೆಯನ್ನು ನಿಷೇಧಿಸಿದ್ದರೂ ಸಹ, ಇವುಗಳನ್ನು ಉಲ್ಲಂಘಿಸಿ ಮೀನುಗಾರಿಕೆ ನಡೆಸುತ್ತಿರುವ ಕುರಿತು ಮಾಹಿತಿ ಪಡೆದ ಮಹೇಶ್ವರ ರಾವ್, ನಿಷೇಧ ಉಲ್ಲಂಘಿಸುವ ಬೋಟ್ಗಳಿಗೆ ಡೀಸೆಲ್ ಸಬ್ಸಿಡಿ ಕಡಿತಗೊಳಿಸುವಂತೆ ಹಾಗೂ ಇಂತಹ ಬೋಟ್ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಹಾಗೂ ಅತೀ ಹೆಚ್ಚಿನ ದಂಡ ವಿಧಿಸುವ, ಲೈಸೆನ್ಸ್ ರದ್ದುಗೊಳಿಸುವ ಕುರಿತಂತೆ ಕರ್ನಾಟಕ ಮರೈನ್ ಫಿಷಿಂಗ್ ಕಾಯ್ದೆಯಲ್ಲಿ ಸೂಕ್ತ ತಿದ್ದುಪಡಿ ಮಾಡುವ ಬಗ್ಗೆ ಹಾಗೂ ಇವುಗಳನ್ನು ಪತ್ತೆ ಹಚ್ಚಲು ಪ್ರತ್ಯೇಕ ತಂಡ ರಚಿಸುವ ಕುರಿತಂತೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸುವುದಾಗಿ ತಿಳಿಸಿದರು.
ಬೆಳಕು ಮೀನುಗಾರಿಕಾ ತಡೆಯುವ ನಿಟ್ಟಿನಲ್ಲಿ ಬಂದರು ದ್ವಾರದಲ್ಲೇ ಜನರೇಟರ್ ತೆಗೆದುಕೊಂಡು ಹೋಗುವುದನ್ನು ತಡೆಯುವಂತೆ ಹಾಗೂ ಈ ಬಗ್ಗೆ ಪೊಲೀಸ್ ಇಲಾಖೆಯ ನೆರವು ಪಡೆಯುವಂತೆ ಸೂಚಿಸಿದ ಅವರು, ಮೀನುಗಾರಿಕೆ ತೆರಳುವವರ ಸರಿಯಾದ ಮಾಹಿತಿ ಹೊಂದುವ ನಿಟ್ಟಿನಲ್ಲಿ ಡೀಸೆಲ್ ಬಂಕ್ನಲ್ಲಿಯೇ ಬೋಟ್ನಲ್ಲಿ ತೆರಳುವವರ ಸಂಪೂರ್ಣ ವಿವರ ಪಡೆಯುವಂತೆ ಹಾಗೂ ಸಮುದ್ರದಲ್ಲಿ ಬೋಟ್ಗಳನ್ನು ಸರಿಯಾದ ರೀತಿಯಲ್ಲಿ ಪತ್ತೆ ಹಚ್ಚುವ ಕುರಿತಂತೆ ಬೋಟ್ ಟ್ರಾಕಿಂಗ್ ಸಿಸ್ಟಂ ನನ್ನು ಎಲ್ಲಾ ಬೋಟ್ಗಳಲ್ಲಿ ಅಳವಡಿಸುವಂತೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಸಿಇಒ ಪ್ರೀತಿ ಗೆಹಲೋತ್, ಎಸ್.ಪಿ ನಿಶಾ ಜೇಮ್ಸ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…