Featured

ಬೃಹತ್ ಜಾಹಿರಾತು ಫಲಕ ಬಿದ್ದು 3 ಸಾವು, ಐವರಿಗೆ ಗಂಭೀರ ಗಾಯ..

ಮುಂಬೈ: ಬೃಹತ್ ಜಾಹಿರಾತು ಫಲಕವೊಂದು ಬಿದ್ದು, ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ಪತ್ನಿಯ ಚಿತಾಭಸ್ಮ ಬಿಟ್ಟು ಬರುತ್ತಿದ್ದ ಶಿವಾಜಿ ಪರದೇಶಿ (40) ಸೇರಿದಂತೆ ಶಾಮ್‍ರಾವ್ ಕಾಸರ್ (70) ಹಾಗೂ ಶಾಮ್‍ರಾವ್ ದೋತ್ರೆ (48) ಮೃತ ದುರ್ದೈವಿಗಳು. ಈ ಅವಘಡದಲ್ಲಿ ಐವರಿಗೆ ಗಂಭೀರವಾಗಿ ಗಾಯವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಘಟನೆಯ ವಿವರ :ಪುಣೆಯ ರೈಲ್ವೇ ನಿಲ್ದಾಣದ ಸಮೀಪದ ಸಿಗ್ನಲ್‍ನಲ್ಲಿ ವಾಹಗಳು ನಿಂತಿದ್ದವು. ಈ ವೇಳೆ ಪಕ್ಕದಲ್ಲಿಯೇ ಇದ್ದ ಬೃಹತ್ ಜಾಹಿರಾತು ಫಲಕ ವಾಹನಗಳ ಮೇಲೆ ಬಿದ್ದಿದೆ. ಫಲಕ ಬಿದ್ದ ತೀವ್ರತೆಗೆ ವಾಹನದಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದು, ಎರಡು ಆಟೋಗಳು ಜಖಂಗೊಂಡಿವೆ.

ಸುಮಾರು ದಿನಗಳಿಂದ ಜಾಹಿರಾತು ಫಲಕವನ್ನು ದುರಸ್ತಿಗೊಳಿಸದೆ ಹಾಗೆ ಬಿಡಲಾಗಿತ್ತು. ಹೀಗಾಗಿ ಈ ಅವಘಡ ಸಂಭವಿಸಿದ್ದು, ಅದರ ಗುತ್ತಿಗೆದಾರರು ಹಾಗೂ ಕೆಲಸಗಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅದೃಷ್ಟವಶಾತ್ ಎಂದಿನಂತೆ ಟ್ರಾಫಿಕ್ ಹೆಚ್ಚಾಗಿರಲಿಲ್ಲ. ಹೀಗಾಗಿ ಭಾರೀ ಅನಾಹುತ ತಪ್ಪಿದೆ ಎಂದು ಪೊಲೀಸ್ ಉಪಆಯುಕ್ತ ಬಿ.ಸಿಂಗ್ ತಿಳಿಸಿದ್ದಾರೆ.

ರೈಲ್ವೇ ಇಲಾಖೆಯು ಕಳೆದ ಕೆಲವು ವರ್ಷಗಳಿಂದ ಜಾಹಿರಾತು ಎಜೆನ್ಸಿಗಳಿಗೆ ಫಲಕಗಳನ್ನು ಗುತ್ತಿಗೆ ನೀಡಿತ್ತು. ಆದರೆ ಅವರು ನಿರ್ವಹಣೆಯಲ್ಲಿ ಬೇಜವಾಬ್ದಾರಿ ತೋರಿದ್ದ ಪರಿಣಾಮ ಅವಘಡ ಸಂಭವಿಸಿದೆ. ಈ ಕುರಿತು ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪುಣೆ ವಿಭಾಗೀಯ ರೈಲ್ವೇ ಮಾನೇಜರ್ ಮಿಲಿಂದ್ ಡಿಯೋಸ್ಕರ್ ಹೇಳಿದ್ದಾರೆ.

ಇನ್ನು ಮುಂದೆ ಮುಂಜಾಗ್ರತ ಕ್ರಮವಾಗಿ ಜಾಹಿರಾತು ಫಲಕಗಳ ನಿರ್ವಹಣೆ ಮಾಡದ ಏಜೆನ್ಸಿಗಳ ಪರವಾನಿಗೆ ರದ್ದು ಮಾಡುತ್ತೇವೆ. ಜೊತೆಗೆ ಅವಘಡದಲ್ಲಿ ಮೃತಪಟ್ಟ ಕುಟುಂಬಕ್ಕೆ ಪರಿಹಾರ ಹಾಗೂ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆಸ್ಪತ್ರೆಯ ವೆಚ್ಚ ಪಾವತಿಸುತ್ತೇವೆ ಎಂದು ಮಿಲಿಂದರ್ ಭರವಸೆ ನೀಡಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

1 hour ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

1 hour ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

1 hour ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

2 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

2 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

3 hours ago