Featured

ಬೃಹತ್ ಜಾಹಿರಾತು ಫಲಕ ಬಿದ್ದು 3 ಸಾವು, ಐವರಿಗೆ ಗಂಭೀರ ಗಾಯ..

ಮುಂಬೈ: ಬೃಹತ್ ಜಾಹಿರಾತು ಫಲಕವೊಂದು ಬಿದ್ದು, ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ಪತ್ನಿಯ ಚಿತಾಭಸ್ಮ ಬಿಟ್ಟು ಬರುತ್ತಿದ್ದ ಶಿವಾಜಿ ಪರದೇಶಿ (40) ಸೇರಿದಂತೆ ಶಾಮ್‍ರಾವ್ ಕಾಸರ್ (70) ಹಾಗೂ ಶಾಮ್‍ರಾವ್ ದೋತ್ರೆ (48) ಮೃತ ದುರ್ದೈವಿಗಳು. ಈ ಅವಘಡದಲ್ಲಿ ಐವರಿಗೆ ಗಂಭೀರವಾಗಿ ಗಾಯವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಘಟನೆಯ ವಿವರ :ಪುಣೆಯ ರೈಲ್ವೇ ನಿಲ್ದಾಣದ ಸಮೀಪದ ಸಿಗ್ನಲ್‍ನಲ್ಲಿ ವಾಹಗಳು ನಿಂತಿದ್ದವು. ಈ ವೇಳೆ ಪಕ್ಕದಲ್ಲಿಯೇ ಇದ್ದ ಬೃಹತ್ ಜಾಹಿರಾತು ಫಲಕ ವಾಹನಗಳ ಮೇಲೆ ಬಿದ್ದಿದೆ. ಫಲಕ ಬಿದ್ದ ತೀವ್ರತೆಗೆ ವಾಹನದಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದು, ಎರಡು ಆಟೋಗಳು ಜಖಂಗೊಂಡಿವೆ.

ಸುಮಾರು ದಿನಗಳಿಂದ ಜಾಹಿರಾತು ಫಲಕವನ್ನು ದುರಸ್ತಿಗೊಳಿಸದೆ ಹಾಗೆ ಬಿಡಲಾಗಿತ್ತು. ಹೀಗಾಗಿ ಈ ಅವಘಡ ಸಂಭವಿಸಿದ್ದು, ಅದರ ಗುತ್ತಿಗೆದಾರರು ಹಾಗೂ ಕೆಲಸಗಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅದೃಷ್ಟವಶಾತ್ ಎಂದಿನಂತೆ ಟ್ರಾಫಿಕ್ ಹೆಚ್ಚಾಗಿರಲಿಲ್ಲ. ಹೀಗಾಗಿ ಭಾರೀ ಅನಾಹುತ ತಪ್ಪಿದೆ ಎಂದು ಪೊಲೀಸ್ ಉಪಆಯುಕ್ತ ಬಿ.ಸಿಂಗ್ ತಿಳಿಸಿದ್ದಾರೆ.

ರೈಲ್ವೇ ಇಲಾಖೆಯು ಕಳೆದ ಕೆಲವು ವರ್ಷಗಳಿಂದ ಜಾಹಿರಾತು ಎಜೆನ್ಸಿಗಳಿಗೆ ಫಲಕಗಳನ್ನು ಗುತ್ತಿಗೆ ನೀಡಿತ್ತು. ಆದರೆ ಅವರು ನಿರ್ವಹಣೆಯಲ್ಲಿ ಬೇಜವಾಬ್ದಾರಿ ತೋರಿದ್ದ ಪರಿಣಾಮ ಅವಘಡ ಸಂಭವಿಸಿದೆ. ಈ ಕುರಿತು ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪುಣೆ ವಿಭಾಗೀಯ ರೈಲ್ವೇ ಮಾನೇಜರ್ ಮಿಲಿಂದ್ ಡಿಯೋಸ್ಕರ್ ಹೇಳಿದ್ದಾರೆ.

ಇನ್ನು ಮುಂದೆ ಮುಂಜಾಗ್ರತ ಕ್ರಮವಾಗಿ ಜಾಹಿರಾತು ಫಲಕಗಳ ನಿರ್ವಹಣೆ ಮಾಡದ ಏಜೆನ್ಸಿಗಳ ಪರವಾನಿಗೆ ರದ್ದು ಮಾಡುತ್ತೇವೆ. ಜೊತೆಗೆ ಅವಘಡದಲ್ಲಿ ಮೃತಪಟ್ಟ ಕುಟುಂಬಕ್ಕೆ ಪರಿಹಾರ ಹಾಗೂ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆಸ್ಪತ್ರೆಯ ವೆಚ್ಚ ಪಾವತಿಸುತ್ತೇವೆ ಎಂದು ಮಿಲಿಂದರ್ ಭರವಸೆ ನೀಡಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

14 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

14 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

15 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

18 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

18 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

18 hours ago