ಮುಂಬೈ: ಬೃಹತ್ ಜಾಹಿರಾತು ಫಲಕವೊಂದು ಬಿದ್ದು, ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಪತ್ನಿಯ ಚಿತಾಭಸ್ಮ ಬಿಟ್ಟು ಬರುತ್ತಿದ್ದ ಶಿವಾಜಿ ಪರದೇಶಿ (40) ಸೇರಿದಂತೆ ಶಾಮ್ರಾವ್ ಕಾಸರ್ (70) ಹಾಗೂ ಶಾಮ್ರಾವ್ ದೋತ್ರೆ (48) ಮೃತ ದುರ್ದೈವಿಗಳು. ಈ ಅವಘಡದಲ್ಲಿ ಐವರಿಗೆ ಗಂಭೀರವಾಗಿ ಗಾಯವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಘಟನೆಯ ವಿವರ :ಪುಣೆಯ ರೈಲ್ವೇ ನಿಲ್ದಾಣದ ಸಮೀಪದ ಸಿಗ್ನಲ್ನಲ್ಲಿ ವಾಹಗಳು ನಿಂತಿದ್ದವು. ಈ ವೇಳೆ ಪಕ್ಕದಲ್ಲಿಯೇ ಇದ್ದ ಬೃಹತ್ ಜಾಹಿರಾತು ಫಲಕ ವಾಹನಗಳ ಮೇಲೆ ಬಿದ್ದಿದೆ. ಫಲಕ ಬಿದ್ದ ತೀವ್ರತೆಗೆ ವಾಹನದಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದು, ಎರಡು ಆಟೋಗಳು ಜಖಂಗೊಂಡಿವೆ.
ಸುಮಾರು ದಿನಗಳಿಂದ ಜಾಹಿರಾತು ಫಲಕವನ್ನು ದುರಸ್ತಿಗೊಳಿಸದೆ ಹಾಗೆ ಬಿಡಲಾಗಿತ್ತು. ಹೀಗಾಗಿ ಈ ಅವಘಡ ಸಂಭವಿಸಿದ್ದು, ಅದರ ಗುತ್ತಿಗೆದಾರರು ಹಾಗೂ ಕೆಲಸಗಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅದೃಷ್ಟವಶಾತ್ ಎಂದಿನಂತೆ ಟ್ರಾಫಿಕ್ ಹೆಚ್ಚಾಗಿರಲಿಲ್ಲ. ಹೀಗಾಗಿ ಭಾರೀ ಅನಾಹುತ ತಪ್ಪಿದೆ ಎಂದು ಪೊಲೀಸ್ ಉಪಆಯುಕ್ತ ಬಿ.ಸಿಂಗ್ ತಿಳಿಸಿದ್ದಾರೆ.
ರೈಲ್ವೇ ಇಲಾಖೆಯು ಕಳೆದ ಕೆಲವು ವರ್ಷಗಳಿಂದ ಜಾಹಿರಾತು ಎಜೆನ್ಸಿಗಳಿಗೆ ಫಲಕಗಳನ್ನು ಗುತ್ತಿಗೆ ನೀಡಿತ್ತು. ಆದರೆ ಅವರು ನಿರ್ವಹಣೆಯಲ್ಲಿ ಬೇಜವಾಬ್ದಾರಿ ತೋರಿದ್ದ ಪರಿಣಾಮ ಅವಘಡ ಸಂಭವಿಸಿದೆ. ಈ ಕುರಿತು ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪುಣೆ ವಿಭಾಗೀಯ ರೈಲ್ವೇ ಮಾನೇಜರ್ ಮಿಲಿಂದ್ ಡಿಯೋಸ್ಕರ್ ಹೇಳಿದ್ದಾರೆ.
ಇನ್ನು ಮುಂದೆ ಮುಂಜಾಗ್ರತ ಕ್ರಮವಾಗಿ ಜಾಹಿರಾತು ಫಲಕಗಳ ನಿರ್ವಹಣೆ ಮಾಡದ ಏಜೆನ್ಸಿಗಳ ಪರವಾನಿಗೆ ರದ್ದು ಮಾಡುತ್ತೇವೆ. ಜೊತೆಗೆ ಅವಘಡದಲ್ಲಿ ಮೃತಪಟ್ಟ ಕುಟುಂಬಕ್ಕೆ ಪರಿಹಾರ ಹಾಗೂ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆಸ್ಪತ್ರೆಯ ವೆಚ್ಚ ಪಾವತಿಸುತ್ತೇವೆ ಎಂದು ಮಿಲಿಂದರ್ ಭರವಸೆ ನೀಡಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…