Featured

ಬೃಹತ್ ಜಾಹಿರಾತು ಫಲಕ ಬಿದ್ದು 3 ಸಾವು, ಐವರಿಗೆ ಗಂಭೀರ ಗಾಯ..

ಮುಂಬೈ: ಬೃಹತ್ ಜಾಹಿರಾತು ಫಲಕವೊಂದು ಬಿದ್ದು, ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ಪತ್ನಿಯ ಚಿತಾಭಸ್ಮ ಬಿಟ್ಟು ಬರುತ್ತಿದ್ದ ಶಿವಾಜಿ ಪರದೇಶಿ (40) ಸೇರಿದಂತೆ ಶಾಮ್‍ರಾವ್ ಕಾಸರ್ (70) ಹಾಗೂ ಶಾಮ್‍ರಾವ್ ದೋತ್ರೆ (48) ಮೃತ ದುರ್ದೈವಿಗಳು. ಈ ಅವಘಡದಲ್ಲಿ ಐವರಿಗೆ ಗಂಭೀರವಾಗಿ ಗಾಯವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಘಟನೆಯ ವಿವರ :ಪುಣೆಯ ರೈಲ್ವೇ ನಿಲ್ದಾಣದ ಸಮೀಪದ ಸಿಗ್ನಲ್‍ನಲ್ಲಿ ವಾಹಗಳು ನಿಂತಿದ್ದವು. ಈ ವೇಳೆ ಪಕ್ಕದಲ್ಲಿಯೇ ಇದ್ದ ಬೃಹತ್ ಜಾಹಿರಾತು ಫಲಕ ವಾಹನಗಳ ಮೇಲೆ ಬಿದ್ದಿದೆ. ಫಲಕ ಬಿದ್ದ ತೀವ್ರತೆಗೆ ವಾಹನದಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದು, ಎರಡು ಆಟೋಗಳು ಜಖಂಗೊಂಡಿವೆ.

ಸುಮಾರು ದಿನಗಳಿಂದ ಜಾಹಿರಾತು ಫಲಕವನ್ನು ದುರಸ್ತಿಗೊಳಿಸದೆ ಹಾಗೆ ಬಿಡಲಾಗಿತ್ತು. ಹೀಗಾಗಿ ಈ ಅವಘಡ ಸಂಭವಿಸಿದ್ದು, ಅದರ ಗುತ್ತಿಗೆದಾರರು ಹಾಗೂ ಕೆಲಸಗಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅದೃಷ್ಟವಶಾತ್ ಎಂದಿನಂತೆ ಟ್ರಾಫಿಕ್ ಹೆಚ್ಚಾಗಿರಲಿಲ್ಲ. ಹೀಗಾಗಿ ಭಾರೀ ಅನಾಹುತ ತಪ್ಪಿದೆ ಎಂದು ಪೊಲೀಸ್ ಉಪಆಯುಕ್ತ ಬಿ.ಸಿಂಗ್ ತಿಳಿಸಿದ್ದಾರೆ.

ರೈಲ್ವೇ ಇಲಾಖೆಯು ಕಳೆದ ಕೆಲವು ವರ್ಷಗಳಿಂದ ಜಾಹಿರಾತು ಎಜೆನ್ಸಿಗಳಿಗೆ ಫಲಕಗಳನ್ನು ಗುತ್ತಿಗೆ ನೀಡಿತ್ತು. ಆದರೆ ಅವರು ನಿರ್ವಹಣೆಯಲ್ಲಿ ಬೇಜವಾಬ್ದಾರಿ ತೋರಿದ್ದ ಪರಿಣಾಮ ಅವಘಡ ಸಂಭವಿಸಿದೆ. ಈ ಕುರಿತು ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪುಣೆ ವಿಭಾಗೀಯ ರೈಲ್ವೇ ಮಾನೇಜರ್ ಮಿಲಿಂದ್ ಡಿಯೋಸ್ಕರ್ ಹೇಳಿದ್ದಾರೆ.

ಇನ್ನು ಮುಂದೆ ಮುಂಜಾಗ್ರತ ಕ್ರಮವಾಗಿ ಜಾಹಿರಾತು ಫಲಕಗಳ ನಿರ್ವಹಣೆ ಮಾಡದ ಏಜೆನ್ಸಿಗಳ ಪರವಾನಿಗೆ ರದ್ದು ಮಾಡುತ್ತೇವೆ. ಜೊತೆಗೆ ಅವಘಡದಲ್ಲಿ ಮೃತಪಟ್ಟ ಕುಟುಂಬಕ್ಕೆ ಪರಿಹಾರ ಹಾಗೂ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆಸ್ಪತ್ರೆಯ ವೆಚ್ಚ ಪಾವತಿಸುತ್ತೇವೆ ಎಂದು ಮಿಲಿಂದರ್ ಭರವಸೆ ನೀಡಿದ್ದಾರೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

27 minutes ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

47 minutes ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

56 minutes ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

1 hour ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

1 hour ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

3 hours ago