ಮಂಗಳೂರು: ಮಂಗಳೂರು ನಗರ ಸೇರಿದಂತೆ ವಿವಿಧ ರಾಜ್ಯಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಮೂಲದ ಪ್ರಜೆಯನ್ನು ಬಂಧಿಸಿ 6 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡಿರುವ ಮಂಗಳೂರಿನ ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆಗೆ ದ.ಕ. ಸಂಸದ ಬ್ರಿಜೇಶ್ ಚೌಟ ಅಭಿನಂದಿಸಿದ್ದಾರೆ.
ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಮಾದಕ ವಸ್ತುಗಳನ್ನು ಪತ್ತೆ ಮಾಡಿ ನಟೋರಿಯಸ್ ಡ್ರಗ್ಸ್ ಪೆಡ್ಲರ್ನನ್ನು ಬಂಧಿಸಿರುವುದರ ಹಿನ್ನಲೆ ಪ್ರತಿಕ್ರಿಯಿಸಿರುವ ಚೌಟ ಅವರು, ಮಂಗಳೂರಿನ ಸಿಸಿಬಿ ಪೊಲೀಸರು ಈ ಬೃಹತ್ ಡ್ರಗ್ಸ್ ಜಾಲವನ್ನು ಬಯಲಿಗೆಳೆಯುವಲ್ಲಿ ಹಲವು ದಿನಗಳಿಂದ ಬೆನ್ನತ್ತಿ ಮಂಗಳೂರು, ಬೆಂಗಳೂರಿನಲ್ಲಿ ಮಾಹಿತಿ ಸಂಗ್ರಹಿಸಿದ್ದಾರೆ. ಆ ಮೂಲಕ ಕರಾವಳಿಗೆ ಪೂರೈಕೆಯಾಗುತ್ತಿದ್ದ ಈ ಡ್ರಗ್ಸ್ ದಂಧೆಯ ಮೂಲವನ್ನೇ ಪತ್ತೆ ಮಾಡಿ ಇಷ್ಟೊಂದು ದೊಡ್ಡ ಪ್ರಮಾಣದ ಮಾದಕ ವಸ್ತುವನ್ನು ವಶಪಡಿಸಿಕೊಂಡ ಈ ಐತಿಹಾಸಿಕ ಕಾರ್ಯಾಚರಣೆಗೆ ಸಹಕರಿಸಿ ರುವ ಸಿಸಿಬಿಯ ಎಲ್ಲ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯ ಶ್ಲಾಘನೀಯ ಎಂದು ಹೇಳಿದ್ದಾರೆ.
ಸಂಸದನಾಗಿ ಆಯ್ಕೆಗೊಂಡ ಬಳಿಕ ನಡೆದ ಮೊದಲ ಸಂಸತ್ ಅಧಿವೇಶದಲ್ಲೇ ಕರಾವಳಿ ಸೇರಿದಂತೆ ದೇಶದೆಲ್ಲೆಡೆ ವ್ಯಾಪಕವಾಗುತ್ತಿರುವ ಡ್ರಗ್ಸ್ ಜಾಲವನ್ನು ತುರ್ತಾಗಿ ಮಟ್ಟ ಹಾಕಬೇಕೆಂದು ಒತ್ತಾಯಿಸಿದ್ದೆ. ಈ ಮಾದಕ ವಸ್ತುಗಳ ಜಾಲಕ್ಕೆ ಸಿಲುಕುತ್ತಿರುವ ಯುವಜನತೆಯನ್ನು ಅದರಿಂದ ಪಾರು ಮಾಡುವುದಕ್ಕೆ ನಾವೆಲ್ಲರೂ ಪೊಲೀಸರ ಜತೆಗೆ ಕೈಜೋಡಿಸ ಬೇಕೆಂದು ಹಲವು ವೇದಿಕೆಗಳಲ್ಲಿ ಪ್ರಸ್ತಾಪ ಕೂಡ ಮಾಡಿದ್ದೆ. ಹೀಗಿರುವಾಗ, ಡ್ರಗ್ಸ್ ಮುಕ್ತ ಕರಾವಳಿ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರವೂ ಬಹಳ ಮುಖ್ಯ. ಪೊಲೀಸರ ಜತೆ ನಾವೆಲ್ಲರೂ ಕೈಜೋಡಿಸಿದರೆ ಆಳವಾಗಿ ಬೇರುಬಿಟ್ಟಿರುವ ಇಂಥಹ ಹಲವಾರು ಡ್ರಗ್ಸ್ ದಂಧೆಯನ್ನು ಮಟ್ಟ ಹಾಕುವ ಮೂಲಕ ಯಾವುದೋ ದೇಶದಿಂದ ಬಂದು ನಮ್ಮ ಯುವ ಸಮುದಾಯವನ್ನು ದಾರಿತಪ್ಪಿಸುವ ಜತೆಗೆ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ನಟೋರಿಯಸ್ ಪೆಡ್ಲರ್ಗಳನ್ನು ಜೈಲಿಗಟ್ಟು ವುದಕ್ಕೆ ಸಾಧ್ಯವಾಗುತ್ತದೆ ಎಂದು ಚೌಟ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…