ಮಂಗಳೂರು: ಮಂಗಳೂರು ನಗರ ಸೇರಿದಂತೆ ವಿವಿಧ ರಾಜ್ಯಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಮೂಲದ ಪ್ರಜೆಯನ್ನು ಬಂಧಿಸಿ 6 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡಿರುವ ಮಂಗಳೂರಿನ ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆಗೆ ದ.ಕ. ಸಂಸದ ಬ್ರಿಜೇಶ್ ಚೌಟ ಅಭಿನಂದಿಸಿದ್ದಾರೆ.
ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಮಾದಕ ವಸ್ತುಗಳನ್ನು ಪತ್ತೆ ಮಾಡಿ ನಟೋರಿಯಸ್ ಡ್ರಗ್ಸ್ ಪೆಡ್ಲರ್ನನ್ನು ಬಂಧಿಸಿರುವುದರ ಹಿನ್ನಲೆ ಪ್ರತಿಕ್ರಿಯಿಸಿರುವ ಚೌಟ ಅವರು, ಮಂಗಳೂರಿನ ಸಿಸಿಬಿ ಪೊಲೀಸರು ಈ ಬೃಹತ್ ಡ್ರಗ್ಸ್ ಜಾಲವನ್ನು ಬಯಲಿಗೆಳೆಯುವಲ್ಲಿ ಹಲವು ದಿನಗಳಿಂದ ಬೆನ್ನತ್ತಿ ಮಂಗಳೂರು, ಬೆಂಗಳೂರಿನಲ್ಲಿ ಮಾಹಿತಿ ಸಂಗ್ರಹಿಸಿದ್ದಾರೆ. ಆ ಮೂಲಕ ಕರಾವಳಿಗೆ ಪೂರೈಕೆಯಾಗುತ್ತಿದ್ದ ಈ ಡ್ರಗ್ಸ್ ದಂಧೆಯ ಮೂಲವನ್ನೇ ಪತ್ತೆ ಮಾಡಿ ಇಷ್ಟೊಂದು ದೊಡ್ಡ ಪ್ರಮಾಣದ ಮಾದಕ ವಸ್ತುವನ್ನು ವಶಪಡಿಸಿಕೊಂಡ ಈ ಐತಿಹಾಸಿಕ ಕಾರ್ಯಾಚರಣೆಗೆ ಸಹಕರಿಸಿ ರುವ ಸಿಸಿಬಿಯ ಎಲ್ಲ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯ ಶ್ಲಾಘನೀಯ ಎಂದು ಹೇಳಿದ್ದಾರೆ.
ಸಂಸದನಾಗಿ ಆಯ್ಕೆಗೊಂಡ ಬಳಿಕ ನಡೆದ ಮೊದಲ ಸಂಸತ್ ಅಧಿವೇಶದಲ್ಲೇ ಕರಾವಳಿ ಸೇರಿದಂತೆ ದೇಶದೆಲ್ಲೆಡೆ ವ್ಯಾಪಕವಾಗುತ್ತಿರುವ ಡ್ರಗ್ಸ್ ಜಾಲವನ್ನು ತುರ್ತಾಗಿ ಮಟ್ಟ ಹಾಕಬೇಕೆಂದು ಒತ್ತಾಯಿಸಿದ್ದೆ. ಈ ಮಾದಕ ವಸ್ತುಗಳ ಜಾಲಕ್ಕೆ ಸಿಲುಕುತ್ತಿರುವ ಯುವಜನತೆಯನ್ನು ಅದರಿಂದ ಪಾರು ಮಾಡುವುದಕ್ಕೆ ನಾವೆಲ್ಲರೂ ಪೊಲೀಸರ ಜತೆಗೆ ಕೈಜೋಡಿಸ ಬೇಕೆಂದು ಹಲವು ವೇದಿಕೆಗಳಲ್ಲಿ ಪ್ರಸ್ತಾಪ ಕೂಡ ಮಾಡಿದ್ದೆ. ಹೀಗಿರುವಾಗ, ಡ್ರಗ್ಸ್ ಮುಕ್ತ ಕರಾವಳಿ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರವೂ ಬಹಳ ಮುಖ್ಯ. ಪೊಲೀಸರ ಜತೆ ನಾವೆಲ್ಲರೂ ಕೈಜೋಡಿಸಿದರೆ ಆಳವಾಗಿ ಬೇರುಬಿಟ್ಟಿರುವ ಇಂಥಹ ಹಲವಾರು ಡ್ರಗ್ಸ್ ದಂಧೆಯನ್ನು ಮಟ್ಟ ಹಾಕುವ ಮೂಲಕ ಯಾವುದೋ ದೇಶದಿಂದ ಬಂದು ನಮ್ಮ ಯುವ ಸಮುದಾಯವನ್ನು ದಾರಿತಪ್ಪಿಸುವ ಜತೆಗೆ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ನಟೋರಿಯಸ್ ಪೆಡ್ಲರ್ಗಳನ್ನು ಜೈಲಿಗಟ್ಟು ವುದಕ್ಕೆ ಸಾಧ್ಯವಾಗುತ್ತದೆ ಎಂದು ಚೌಟ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…