Featured

ಬೃಹತ್ ಡ್ರಗ್ಸ್ ಜಾಲ ಮಟ್ಟ ಹಾಕಿದ ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆಗೆ ಸಂಸದ ಬ್ರಿಜೇಶ್ ಚೌಟ ಅಭಿನಂದನೆ – Vishwanews24

ಬೃಹತ್ ಡ್ರಗ್ಸ್ ಜಾಲ ಮಟ್ಟ ಹಾಕಿದ ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆಗೆ ಸಂಸದ ಬ್ರಿಜೇಶ್ ಚೌಟ ಅಭಿನಂದನೆ

ಮಂಗಳೂರು: ಮಂಗಳೂರು ನಗರ ಸೇರಿದಂತೆ ವಿವಿಧ ರಾಜ್ಯಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಮೂಲದ ಪ್ರಜೆಯನ್ನು ಬಂಧಿಸಿ 6 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡಿರುವ ಮಂಗಳೂರಿನ ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆಗೆ ದ.ಕ. ಸಂಸದ ಬ್ರಿಜೇಶ್ ಚೌಟ ಅಭಿನಂದಿಸಿದ್ದಾರೆ.

ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಮಾದಕ ವಸ್ತುಗಳನ್ನು ಪತ್ತೆ ಮಾಡಿ ನಟೋರಿಯಸ್ ಡ್ರಗ್ಸ್ ಪೆಡ್ಲರ್‌ನನ್ನು ಬಂಧಿಸಿರುವುದರ ಹಿನ್ನಲೆ ಪ್ರತಿಕ್ರಿಯಿಸಿರುವ ಚೌಟ ಅವರು, ಮಂಗಳೂರಿನ ಸಿಸಿಬಿ ಪೊಲೀಸರು ಈ ಬೃಹತ್ ಡ್ರಗ್ಸ್ ಜಾಲವನ್ನು ಬಯಲಿಗೆಳೆಯುವಲ್ಲಿ ಹಲವು ದಿನಗಳಿಂದ ಬೆನ್ನತ್ತಿ ಮಂಗಳೂರು, ಬೆಂಗಳೂರಿನಲ್ಲಿ ಮಾಹಿತಿ ಸಂಗ್ರಹಿಸಿದ್ದಾರೆ. ಆ ಮೂಲಕ ಕರಾವಳಿಗೆ ಪೂರೈಕೆಯಾಗುತ್ತಿದ್ದ ಈ ಡ್ರಗ್ಸ್ ದಂಧೆಯ ಮೂಲವನ್ನೇ ಪತ್ತೆ ಮಾಡಿ ಇಷ್ಟೊಂದು ದೊಡ್ಡ ಪ್ರಮಾಣದ ಮಾದಕ ವಸ್ತುವನ್ನು ವಶಪಡಿಸಿಕೊಂಡ ಈ ಐತಿಹಾಸಿಕ ಕಾರ್ಯಾಚರಣೆಗೆ ಸಹಕರಿಸಿ ರುವ ಸಿಸಿಬಿಯ ಎಲ್ಲ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯ ಶ್ಲಾಘನೀಯ ಎಂದು ಹೇಳಿದ್ದಾರೆ.

ಸಂಸದನಾಗಿ ಆಯ್ಕೆಗೊಂಡ ಬಳಿಕ ನಡೆದ ಮೊದಲ ಸಂಸತ್ ಅಧಿವೇಶದಲ್ಲೇ ಕರಾವಳಿ ಸೇರಿದಂತೆ ದೇಶದೆಲ್ಲೆಡೆ ವ್ಯಾಪಕವಾಗುತ್ತಿರುವ ಡ್ರಗ್ಸ್ ಜಾಲವನ್ನು ತುರ್ತಾಗಿ ಮಟ್ಟ ಹಾಕಬೇಕೆಂದು ಒತ್ತಾಯಿಸಿದ್ದೆ. ಈ ಮಾದಕ ವಸ್ತುಗಳ ಜಾಲಕ್ಕೆ ಸಿಲುಕುತ್ತಿರುವ ಯುವಜನತೆಯನ್ನು ಅದರಿಂದ ಪಾರು ಮಾಡುವುದಕ್ಕೆ ನಾವೆಲ್ಲರೂ ಪೊಲೀಸರ ಜತೆಗೆ ಕೈಜೋಡಿಸ ಬೇಕೆಂದು ಹಲವು ವೇದಿಕೆಗಳಲ್ಲಿ ಪ್ರಸ್ತಾಪ ಕೂಡ ಮಾಡಿದ್ದೆ. ಹೀಗಿರುವಾಗ, ಡ್ರಗ್ಸ್ ಮುಕ್ತ ಕರಾವಳಿ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರವೂ ಬಹಳ ಮುಖ್ಯ. ಪೊಲೀಸರ ಜತೆ ನಾವೆಲ್ಲರೂ ಕೈಜೋಡಿಸಿದರೆ ಆಳವಾಗಿ ಬೇರುಬಿಟ್ಟಿರುವ ಇಂಥಹ ಹಲವಾರು ಡ್ರಗ್ಸ್ ದಂಧೆಯನ್ನು ಮಟ್ಟ ಹಾಕುವ ಮೂಲಕ ಯಾವುದೋ ದೇಶದಿಂದ ಬಂದು ನಮ್ಮ ಯುವ ಸಮುದಾಯವನ್ನು ದಾರಿತಪ್ಪಿಸುವ ಜತೆಗೆ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ನಟೋರಿಯಸ್ ಪೆಡ್ಲರ್‌ಗಳನ್ನು ಜೈಲಿಗಟ್ಟು ವುದಕ್ಕೆ ಸಾಧ್ಯವಾಗುತ್ತದೆ ಎಂದು ಚೌಟ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

11 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

11 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

11 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

15 hours ago