ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಪಂದ್ಯ ನಮ್ಮ ಕಡೆಯಿಂದ ಕ್ಲಿಯರೆನ್ಸ್ ಸಿಗಬೇಕಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜಸ್ಟೀಸ್ ಕುನ್ಹಾ ಅವರ ವರದಿಯ ಶಿಫಾರಸು ಪಾಲಿಸಬೇಕು ಅಂತ ಹೇಳಿದ್ದೀವಿ. ಸರ್ಕಾರದಿಂದ ಜಿಬಿಎ ಹಾಗೂ ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಸಮಿತಿ ಕೂಡಾ ರಚಿಸಲಾಗಿತ್ತು. ಸಮಿತಿಯು ಕೂಡಾ ಒಂದಷ್ಟು ಶಿಫಾರಸು ಮಾಡಿದೆ. ಐಪಿಎಲ್ ಮ್ಯಾಚ್ಗಳು ಬರ್ತಿವೆ. ನಮ್ಮ ಕಡೆಯಿಂದ ಕ್ಲಿಯರೆನ್ಸ್ ಸಿಗಬೇಕಿದೆ. ಬುಧವಾರ ನಾನು ಸಭೆ ಕರೆದಿದ್ದೇನೆ. ಸರ್ಕಾರದ ಹಂತದಲ್ಲಿ ಏನು ಮಾಡಬೇಕೋ, ಅವರಿಗೆ ಏನು ಸೂಚನೆ ಕೊಡಬೇಕೋ ಅಂತ ನೋಡ್ತೇವೆ” ಎಂದರು.
“ಸಿಎಂ ಜತೆಗೂ ಚರ್ಚೆ ಮಾಡಬೇಕಾಗಿದೆ. ನಮ್ಮ ಶಿಫಾರಸನ್ನು ಅವರು ಎಷ್ಟರ ಮಟ್ಟಿಗೆ ಪೂರೈಸಿದ್ದಾರೆ ಅಂತ ನೋಡಿ ತೀರ್ಮಾನ ಮಾಡ್ತೇವೆ. ಬೆಂಗಳೂರಿನಲ್ಲಿ ಮ್ಯಾಚ್ ಆಗಬೇಕು ಅಂತ ಅಭಿಮಾನಿಗಳು ಬಯಸ್ತಿದ್ದಾರೆ. ಆದರೆ, ಸುರಕ್ಷತೆಯನ್ನೂ ನೋಡಬೇಕು, ಕಾಲ್ತುಳಿತದಂಥ ಘಟನೆಗಳು ಮರುಕಳಿಸಬಾರದಲ್ಲ. ಎಲ್ಲವನ್ನೂ ನೋಡಿ ತೀರ್ಮಾನಿಸುತ್ತೇವೆ” ಎಂದು ತಿಳಿಸಿದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…