Featured

ಬೆಂಗಳೂರಲ್ಲಿ ಮನೆ ಲೀಸ್​​ಗೆ ಪಡೆಯೋ ಮುನ್ನ ಎಚ್ಚರ; ಲಕ್ಷಾಂತರ ರೂ. ವಂಚನೆ ಆರೋಪ – vishwanews24

ಬೆಂಗಳೂರಲ್ಲಿ ಮನೆ ಲೀಸ್​​ಗೆ ಪಡೆಯೋ ಮುನ್ನ ಎಚ್ಚರ; ಕುಟುಂಬಗಳಿಂದ ಲಕ್ಷಾಂತರ ರೂ. ವಂಚನೆ ಆರೋಪ

ಬೆಂಗಳೂರು : ಬೆಂಗಳೂರು ನಗರದಲ್ಲಿ ಮನೆ ಲೀಸ್ ಹೆಸರಿನಲ್ಲಿ ಹತ್ತಾರು ಜನರಿಗೆ ಭಾರೀ ವಂಚನೆ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೆಟಿನಾ ಹೋಮ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಎಂಬ ಖಾಸಗಿ ಕಂಪನಿ ಹೆಸರಿನಲ್ಲಿ ವ್ಯಕ್ತಿಯೊಬ್ಬ ಅನೇಕ ಕುಟುಂಬಗಳಿಂದ ಲಕ್ಷಾಂತರ ರೂಪಾಯಿಗಳನ್ನು ಪಡೆದು ನಾಪತ್ತೆಯಾಗಿದ್ದಾನೆ. ಇದೀಗ ಆರೋಪಿ ವಿವೇಕ್ ಕೇಶವನ್ ಹಾಗೂ ಆತನ ಸಹಚರರ ವಿರುದ್ಧ ಪರಪ್ಪನ ಅಗ್ರಹಾರ, ಹೆಬ್ಬಗೋಡಿ ಮತ್ತು ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಗಳಲ್ಲಿ ವಿವಿಧ ಎಫ್​ಐಆರ್​​ಗಳು ದಾಖಲಾಗಿವೆ.

ಕೆಟಿನಾ ಹೋಮ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮಾಲೀಕ ವಿವೇಕ್ ಕೇಶವನ್, ವೆಬ್‌ಸೈಟ್ ಮುಖಾಂತರ ಮನೆ ಬಾಡಿಗೆಗೆ ಪಡೆದು ನಂತರ ಅದೇ ಮನೆಗಳನ್ನು ಲೀಸ್‌ಗೆ ನೀಡುವ ಮೂಲಕ ಜನರಿಂದ ಭಾರೀ ಮೊತ್ತವನ್ನು ಪಡೆದುಕೊಂಡಿರುವ ಆರೋಪ ಕೇಳಿಬಂದಿದೆ. ಪ್ರಾರಂಭದಲ್ಲಿ ಮನೆಯ ಮಾಲೀಕರಿಗೆ ಒಂದೆರಡು ತಿಂಗಳು ಬಾಡಿಗೆ ಪಾವತಿಸಿದ್ದರೂ, ಕಳೆದ ಆರು ತಿಂಗಳಿಂದ ಯಾವುದೇ ಬಾಡಿಗೆ ಹಣ ಪಾವತಿಸಿರಲಿಲ್ಲ. ಅಲ್ಲದೆ, ಕಂಪನಿ ಕಚೇರಿಯನ್ನು ರಾತ್ರೋರಾತ್ರಿ ಖಾಲಿ ಮಾಡಿ ಪರಾರಿಯಾಗಿದ್ದಾನೆ ಎಂದು ವಂಚನೆಗೆ ಒಳಗಾದವರು ಆರೋಪಿಸಿದ್ದಾರೆ.

ಬೀದಿಗೆ ಬಿದ್ದ ಕುಟುಂಬಗಳು
ಮನೆ ಲೀಸ್‌ಗೆ ಪಡೆದ ನೂರಾರು ಕುಟುಂಬಗಳು ಇದೀಗ ಸಂಕಷ್ಟಕ್ಕೆ ಸಿಲುಕಿವೆ. ಮಾಲೀಕರು ಮನೆ ಖಾಲಿ ಮಾಡಬೇಕೆಂದು ಒತ್ತಡ ಹೇರುತ್ತಿದ್ದಾರೆ. ವಂಚನೆಗೆ ಒಳಗಾದವರು ತಮ್ಮ ಲಕ್ಷಾಂತರ ರೂಪಾಯಿಗಳನ್ನು ಕಳೆದುಕೊಂಡು ಮನೆ ಇಲ್ಲದೆ ಬೀದಿಗೆ ಬೀಳುವ ಸ್ಥಿತಿಗೆ ತಲುಪಿದ್ದಾರೆ.

60 ಕೋಟಿ ರೂಪಾಯಿಗೂ ಹೆಚ್ಚು ವಂಚನೆ ಶಂಕೆ
ಸುಮಾರು 60 ಕೋಟಿ ರೂಪಾಯಿಗೂ ಅಧಿಕ ವಂಚನೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ. ಮಾರತ್ತಹಳ್ಳಿ, ಬಾಣಸವಾಡಿ, ಅಮೃತಹಳ್ಳಿ ಸೇರಿದಂತೆ ಬೆಂಗಳೂರಿನ ಅನೇಕ ಪ್ರದೇಶಗಳಲ್ಲಿ ಆರೋಪಿ ವಂಚನೆ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

14 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

16 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

16 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

17 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

17 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

17 hours ago