Featured

ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ : ಯೆಲ್ಲೋ ಅಲರ್ಟ್ ಘೋಷಣೆ – Vishwanews24

ಬೆಂಗಳೂರಿಗರೇ ಎಚ್ಚರ : ಮುಂದಿನ 3 ಗಂಟೆಯಲ್ಲಿ ಗುಡುಗು ಸಹಿತ ಭಾರಿ ‘ಮಳೆ’ ಮುನ್ನೆಚ್ಚರಿಕೆ

ಬೆಂಗಳೂರು: ಮುಂದಿನ 3 ಗಂಟೆಯಲ್ಲಿ ನಗರದ ಹಲವೆಡೆ ಬಿರುಗಾಳಿ, ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಎಚ್ಚರಿಕೆ ನೀಡಿದೆ.

ಇಂದು ಸಂಜೆ ವೇಳೆಗೆ ಬೆಂಗಳೂರಿನ ಕೆಲವು ಕಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗಾಳಿಯ ವೇಗವು 30-40 ಕಿಮೀ ರಷ್ಟು ಇರಲಿದ್ದು ವಾಹನ ಸವಾರರು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಮುಂದಿನ ಮೂರು ಗಂಟೆಗಳಲ್ಲಿ ಬೆಂಗಳೂರು ನಗರ , ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಮಂಡ್ಯ ಜಿಲ್ಲೆ ಸೇರಿದಂತೆ ವಿವಿಧೆಡೆ ಭಾರೀ ಮಳೆಯಾಗಲಿದೆ ಎಂದೂ ಹೇಳಿದೆ.

ಮೇ. 30 ರಿಂದ ಜೂನ್ 1 ರವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಮಂಡ್ಯ, ರಾಮನಗರ, ಚಾಮರಾಜನಗರ ಜಿಲ್ಲೆಗಳಿಗೆ ಮೇ 31 ಹಾಗೂ ಜೂನ್ 1 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಚಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶ ಮಾಡಲಿದೆ. ಅದಕ್ಕೂ ಮೊದಲು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ರಾಜ್ಯಕ್ಕೆ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶವಾಗಲಿದೆ. ಹೀಗಾಗಿ ಮುಂಗಾರು ಆಗಮನಕ್ಕೂ ಮುನ್ನವೇ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

5 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

5 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago