Featured

ಬೆಂಗಳೂರಿಗರೇ..ನೇಪಾಳಿಗಳನ್ನ ಮನೆ ಕೆಲಸಕ್ಕೆ ಸೇರಿಸಿಕೊಳ್ಳೊ ಮುನ್ನ ಎಚ್ಚರ : ಪೊಲೀಸರ ಸಲಹೆ – Vishwanews24

ಬೆಂಗಳೂರಿಗರೇ..ಮನೆ ಕೆಲಸಕ್ಕೆ ನೇಪಾಳ ಮೂಲದ ಜನರನ್ನ ನೇಮಿಸಿಕೊಂಡಿದ್ದೀರಾ, ಹಾಗಾದ್ರೆ ಹುಷಾರಾಗಿರಿ..: ಪೊಲೀಸರ ಸಲಹೆ

ಬೆಂಗಳೂರು: ಮನೆ ಕೆಲಸಕ್ಕೆ ನೇಪಾಳ ಮೂಲದ ಜನರನ್ನ ನೇಮಿಸಿಕೊಂಡಿದ್ದೀರಾ, ಹಾಗಾದ್ರೆ ಹುಷಾರಾಗಿರಿ. ಬೆಂಗಳೂರು ಪೊಲೀಸರೇ ಈ ಮಾತು ಹೇಳ್ತಿದ್ದಾರೆ.

ಈ ವರ್ಷದ 11 ತಿಂಗಳಲ್ಲಿ ಬರೋಬ್ಬರಿ 30ಕ್ಕೂ ಹೆಚ್ಚು ಶ್ರೀಮಂತರ ಮನೆಗಳಲ್ಲಿ ಕಳ್ಳತನವಾಗಿದೆ. ಅವುಗಳಲ್ಲಿ ಬಹುತೇಕ ಮನೆಗಳಲ್ಲಿ ಕಳ್ಳತನ ಮಾಡಿರೋದು ನೇಪಾಳಿ  ಮೂಲದವರೇ ಅನ್ನೋದು ಒಪ್ಪಿಕೊಳ್ಳಲೇಬೇಕಾದ ಸತ್ಯ ಸಂಗತಿ. ತುಂಬಾ ನಂಬಿಕಸ್ಥರಂತೆ ವರ್ತಿಸೋ ನೇಪಾಳಿ ಮೂಲದ ಕೆಲವರು, ಬೆಳಗಾಗೊ ಹೊತ್ತಿಗೆ ಮನೆಯನ್ನೆಲ್ಲಾ ಗುಡಿಸಿ ಗುಂಡಾತರ ಮಾಡಿ ಎಸ್ಕೇಪ್ ಆಗಿರ್ತಾರೆ. ದರೋಡೆ ವಿಚಾರ ಪೊಲೀಸರ ಕಿವಿ ತಲುಪೋ ಹೊತ್ತಿಗೆ ಆರೋಪಿಗಳು ಅರಾಮಾಗಿ ನೇಪಾಳ ಬಾರ್ಡರ್ ಕ್ರಾಸ್ ಆಗಿರ್ತಾರೆ. ಹಾಗಾಗಿ ನೇಪಾಳಕ್ಕೆ ಹೋದ ಕಳ್ಳರು, ಕದ್ದ ಐಟಂ ವಾಪಸ್ ಸಿಗೋದು ಬಹುತೇಕ ಡೌಟು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬೆಂಗಳೂರಿನ ಹನುಮಂತ ನಗರದಲ್ಲಿಇಂತಹದ್ದೊಂದು ಘಟನೆ ನಡೆದಿದೆ. ಇಲ್ಲಿನ ಶ್ರೀಮಂತ ಉದ್ಯಮಿಯೊಬ್ಬರ ಮನೆಯಲ್ಲಿ ನೇಪಾಳ ಮೂಲದ ಲಲಿತ್ ಮತ್ತು ಬಹದ್ದೂರ್ ಅನ್ನೋರು ಕೆಲಸಕ್ಕಿದ್ರು. ತುಂಬಾ ನಂಬಿಕಸ್ಥರಾಗಿದ್ದ ಕಾರಣ ಮನೆಯವರಿಗೆ ಯಾವುದೇ ಡೌಟ್ ಬಂದಿರಲಿಲ್ಲ. ಕಳೆದ ವಾರ ಉದ್ಯಮಿ ಕುಟುಂಬ ಸಮೇತ ಸಿಂಗಾಪುರ್ ಟ್ರಿಪ್ ಹೋಗಿದ್ರು. ಅವರು ವಿದೇಶಕ್ಕೆ ಹಾರುತ್ತಿದ್ದಂತೆ, ದಂಪತಿ ಮನೆಯಲ್ಲಿಟ್ಟಿದ್ದ 75 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು, ಡೈಮಂಡ್ ರಿಂಗ್, ವಜ್ರದ ವಸ್ತುಗಳು ಸೇರಿ ಬರೋಬ್ಬರಿ ಎರಡೂವರೆ ಕೋಟಿಯಷ್ಟು ಮೌಲ್ಯದ ವಸ್ತುಗಳನ್ನು ದೋಚಿ ಸೈಲೆಂಟ್ ಆಗಿ ನೇಪಾಳ ಸೇರ್ಕೊಂಡಿದ್ದಾರೆ. ವಾಪಸು ಮನೆಗೆ ಬಂದು ನೋಡುವಷ್ಟರಲ್ಲಿ ಕೆಲಸಗಾರರ ಕೈಚಳಕ ಗೊತ್ತಾಗಿ ಸಿಸಿಟಿವಿ ಚೆಕ್ ಮಾಡಿದ್ದಾರೆ. ಎರಡು ಬ್ಯಾಗ್‌ಗಳಲ್ಲಿ ಲೆಗೇಜ್ ರೀತಿಯಲ್ಲಿ ಹಣ, ಚಿನ್ನಾಭರಣ ತುಂಬಿಕೊಂಂಡು ಎಸ್ಕೇಪ್ ಆಗಿರೋದು ಪತ್ತೆಯಾಗಿದೆ.

ಈ ಸಂಬಂಧ ಹನುಮಂತನಗರದಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಹಾಗಾಗಿ ದೂರದ ನೇಪಾಳಿಗಳು, ಸೇರಿದಂತೆ ಅಪರಿಚಿತರನ್ನು ಮನೆ ಕೆಲಸಕ್ಕೆ ನೇಮಿಸುವ ಮುನ್ನ ಎಚ್ಚರವಾಗಿರುವಂತೆ ಸಲಹೆ ನೀಡಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

23 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago