ಬೆಂಗಳೂರು: ಸಿಲಿಕಾನ್ ಸಿಟಿಗೆ ಪ್ರಧಾನಿ ನರೇಂದ್ರ ಮೋದಿ ಅಗಮಿಸುತ್ತಿರುವ ಹಿನ್ನಲೆ ಸಂಚಾರದಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ. ಸಂಚಾರಿ ಪೊಲೀಸರು ನಗರದ ಕೆಲ ರಸ್ತೆಗಳ ಸಂಚಾರ ಮಾರ್ಗ ಬದಲಾವಣೆ ಮಾಡಿದ್ದಾರೆ. ಈ ಮೂಲಕ ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.
ಆಗಸ್ಟ್ 26 ಬೆಳಗ್ಗೆ 4:30 ರಿಂದ ಬೆಳಗ್ಗೆ 9:30 ರ ವರೆಗೆ ಕೆಳಕಂಡ ರಸ್ತೆ ಮಾರ್ಗ ಬದಲಾವಣೆ ಮಾಡಲಾಗಿದೆ. ಸಾರ್ವಜನಿಕರು ಈ ರಸ್ತೆಗಳ ಬದಲಾಗಿ ಪರ್ಯಾಯ ಮಾರ್ಗ ಬಳಕೆಗೆ ಪೊಲೀಸರ ಮನವಿ ಮಾಡಿಕೊಳ್ಳಲಾಗಿದೆ. ಇನ್ನು ಭಾರೀ ಸರಕು ಸಾಗಾಣಿಕೆ ವಾಹನಗಳ ಸಂಚಾರ ನಿರ್ಬಂಧ ಮಾಡಲಾಗಿದೆ. ನಗರದೊಳಗೆ ಆಗಸ್ಟ್ 26ರ ಬೆಳಗ್ಗಿನ ಜಾವ 04.00 ಗಂಟೆಯಿಂದ ಬೆಳಗ್ಗೆ 11.00 ಗಂಟೆಯವರೆಗೆ ನಿಷೇಧ ಮಾಡಲಾಗಿದೆ.
ಪರ್ಯಾಯವಾಗಿ ವಾಹನ ಸವಾರರು ಬಳಸುವ ಮಾರ್ಗಗಳು: ಓಲ್ಡ್ ಏರ್ಪೋರ್ಟ್ ರಸ್ತೆ, ಓಲ್ಡ್ ಮದ್ರಾಸ್ ರಸ್ತೆ, ಎಂ.ಜಿ.ರಸ್ತೆ, ಕಬ್ಬನ್ ರಸ್ತೆ, ರಾಜಭವನ ರಸ್ತೆ, ಬಳ್ಳಾರಿ ರಸ್ತೆ (ಮೇಖ್ರಿ ಸರ್ಕಲ್), ಸಿವಿ ರಾಮನ್ ರಸ್ತೆ, ಯಶವಂತಪುರ ಫ್ಲೈ ಓವರ್, ತುಮಕೂರು ರಸ್ತೆ (ಯಶವಂತಪುರದಿಂದ ನಾಗಸಂದ್ರದವರೆಗೆ), ಮಾಗಡಿ ರಸ್ತೆ, ಹೊರವರ್ತುಲ ರಸ್ತೆ (ಗೊರಗುಂಟೆ ಪಾಳ್ಯ ಜಂಕ್ಷನ್ನಿಂದ ಸುಮನಹಳ್ಳಿ)ಗುಬ್ಬಿ ತೋಟದಪ್ಪ ರಸ್ತೆ, ಜಾಲಹಳ್ಳಿ ಕ್ರಾಸ್ ರಸ್ತೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…