ಬೆಂಗಳೂರು: ಸಿಲಿಕಾನ್ ಸಿಟಿಗೆ ಪ್ರಧಾನಿ ನರೇಂದ್ರ ಮೋದಿ ಅಗಮಿಸುತ್ತಿರುವ ಹಿನ್ನಲೆ ಸಂಚಾರದಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ. ಸಂಚಾರಿ ಪೊಲೀಸರು ನಗರದ ಕೆಲ ರಸ್ತೆಗಳ ಸಂಚಾರ ಮಾರ್ಗ ಬದಲಾವಣೆ ಮಾಡಿದ್ದಾರೆ. ಈ ಮೂಲಕ ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.
ಆಗಸ್ಟ್ 26 ಬೆಳಗ್ಗೆ 4:30 ರಿಂದ ಬೆಳಗ್ಗೆ 9:30 ರ ವರೆಗೆ ಕೆಳಕಂಡ ರಸ್ತೆ ಮಾರ್ಗ ಬದಲಾವಣೆ ಮಾಡಲಾಗಿದೆ. ಸಾರ್ವಜನಿಕರು ಈ ರಸ್ತೆಗಳ ಬದಲಾಗಿ ಪರ್ಯಾಯ ಮಾರ್ಗ ಬಳಕೆಗೆ ಪೊಲೀಸರ ಮನವಿ ಮಾಡಿಕೊಳ್ಳಲಾಗಿದೆ. ಇನ್ನು ಭಾರೀ ಸರಕು ಸಾಗಾಣಿಕೆ ವಾಹನಗಳ ಸಂಚಾರ ನಿರ್ಬಂಧ ಮಾಡಲಾಗಿದೆ. ನಗರದೊಳಗೆ ಆಗಸ್ಟ್ 26ರ ಬೆಳಗ್ಗಿನ ಜಾವ 04.00 ಗಂಟೆಯಿಂದ ಬೆಳಗ್ಗೆ 11.00 ಗಂಟೆಯವರೆಗೆ ನಿಷೇಧ ಮಾಡಲಾಗಿದೆ.
ಪರ್ಯಾಯವಾಗಿ ವಾಹನ ಸವಾರರು ಬಳಸುವ ಮಾರ್ಗಗಳು: ಓಲ್ಡ್ ಏರ್ಪೋರ್ಟ್ ರಸ್ತೆ, ಓಲ್ಡ್ ಮದ್ರಾಸ್ ರಸ್ತೆ, ಎಂ.ಜಿ.ರಸ್ತೆ, ಕಬ್ಬನ್ ರಸ್ತೆ, ರಾಜಭವನ ರಸ್ತೆ, ಬಳ್ಳಾರಿ ರಸ್ತೆ (ಮೇಖ್ರಿ ಸರ್ಕಲ್), ಸಿವಿ ರಾಮನ್ ರಸ್ತೆ, ಯಶವಂತಪುರ ಫ್ಲೈ ಓವರ್, ತುಮಕೂರು ರಸ್ತೆ (ಯಶವಂತಪುರದಿಂದ ನಾಗಸಂದ್ರದವರೆಗೆ), ಮಾಗಡಿ ರಸ್ತೆ, ಹೊರವರ್ತುಲ ರಸ್ತೆ (ಗೊರಗುಂಟೆ ಪಾಳ್ಯ ಜಂಕ್ಷನ್ನಿಂದ ಸುಮನಹಳ್ಳಿ)ಗುಬ್ಬಿ ತೋಟದಪ್ಪ ರಸ್ತೆ, ಜಾಲಹಳ್ಳಿ ಕ್ರಾಸ್ ರಸ್ತೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…