ಬೆಂಗಳೂರು: ರಾಜ್ಯಕ್ಕೆ ಮೊದಲ ಎಲೆಕ್ಟ್ರಿಕ್ ಬಸ್ ಬೆಂಗಳೂರಿಗೆ ಬಂದಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ 90 ಮಿನಿ ಬಸ್ ಗಳನ್ನು ರಸ್ತೆಗೆ ಇಳಿಸಲು ಬಿಎಂಟಿಸಿ ಮುಂದಾಗಿದೆ.
ಜೆಬಿಎಂ ಕಂಪನಿಯಿಂದ ಗುತ್ತಿಗೆ(ಜಿಸಿಸಿ) ಆಧಾರದಲ್ಲಿ ಬಸ್ ಪಡೆದುಕೊಳ್ಳಲಾಗುತ್ತಿದ್ದು, ಎನ್ ಟಿಪಿಸಿ ಸಹಯೋಗದಲ್ಲಿ ಸೇವೆ ಒದಗಿಸಲು ಒಪ್ಪಂದ ಮಾಡಿಕೊಳ್ಳಲಾಗಿದೆ.
ಬೆಂಗಳೂರಿಗೆ ಬಂದ ಮೊದಲ ಬಸ್ ಪರೀಕ್ಷಾರ್ಥ ಸಂಚಾರವನ್ನು ಬಿಎಂಟಿಸಿಯ ಕೆಂಗೇರಿ ಘಟಕದೊಳಗೇ ನಡೆಸಲಾಯಿತು. ಸಾರಿಗೆ ಸಚಿವ ಶ್ರೀರಾಮುಲು, ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ,ಉಪಾಧ್ಯಕ್ಷ ಎಂ.ಆರ್. ವೆಂಕಟೇಶ್, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಬಸ್ ನಲ್ಲಿ ಕುಳಿತು ಒಂದು ಸುತ್ತು ಸಂಚರಿಸಿದರು.
ಕನ್ನಡ ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆಗೆ ಶರಣು -Vishwanews24
34 ಆಸನಗಳ ಈ ಬಸ್ ನಲ್ಲಿ ಎರಡು ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ. ಆರು ಬ್ಯಾಟರಿಗಳ ಸಹಾಯದಲ್ಲಿ ಬಸ್ ಸಂಚರಿಸಲಿದೆ. ಒಮ್ಮೆ ಚಾರ್ಜ್ ಮಾಡಿದರೆ 120 ಕಿಲೋ ಮೀಟರ್ ಸಂಚರಿಸುವ ಸಾಮರ್ಥ್ಯ ಹೊಂದಿದೆ.
ನ.1ಕ್ಕೆ 10 ಬಸ್ಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾರ್ವಜನಿಕ ಸೇವೆಗೆ ಸಮರ್ಪಿಸುವರು.
ಡಿಸೆಂಬರ್ ಅಂತ್ಯದ ವೇಳೆಗೆ ಎಲ್ಲಾ 90 ಬಸ್ಗಳು ರಸ್ತೆಗೆ ಇಳಿಯಲಿವೆ. ಎರಡನೇ ಹಂತದಲ್ಲಿ 300 ಬಸ್ಗಳು ಇನ್ನು ಆರು ತಿಂಗಳಲ್ಲಿ ರಸ್ತೆಗೆ ಇಳಿಯಲಿವೆ ಎಂದು ಶ್ರೀರಾಮುಲು ತಿಳಿಸಿದರು.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…