Featured

ಬೆಂಗಳೂರಿಗೆ ರಾಜ್ಯದ ಮೊದಲ ಎಲೆಕ್ಟ್ರಿಕ್ ಬಸ್ -Vishwanews24

ಬೆಂಗಳೂರಿಗೆ ರಾಜ್ಯದ ಮೊದಲ ಎಲೆಕ್ಟ್ರಿಕ್ ಬಸ್ -Vishwanews24

ಬೆಂಗಳೂರು: ರಾಜ್ಯಕ್ಕೆ ಮೊದಲ ಎಲೆಕ್ಟ್ರಿಕ್ ಬಸ್ ಬೆಂಗಳೂರಿಗೆ ಬಂದಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ 90 ಮಿನಿ ಬಸ್ ಗಳನ್ನು ರಸ್ತೆಗೆ ಇಳಿಸಲು ಬಿಎಂಟಿಸಿ ಮುಂದಾಗಿದೆ.

ಜೆಬಿಎಂ ಕಂಪನಿಯಿಂದ ಗುತ್ತಿಗೆ(ಜಿಸಿಸಿ) ಆಧಾರದಲ್ಲಿ ಬಸ್ ಪಡೆದುಕೊಳ್ಳಲಾಗುತ್ತಿದ್ದು, ಎನ್ ಟಿಪಿಸಿ ಸಹಯೋಗದಲ್ಲಿ ಸೇವೆ ಒದಗಿಸಲು ಒಪ್ಪಂದ ‌ಮಾಡಿಕೊಳ್ಳಲಾಗಿದೆ.

ಬೆಂಗಳೂರಿಗೆ ಬಂದ ಮೊದಲ ಬಸ್ ಪರೀಕ್ಷಾರ್ಥ ಸಂಚಾರವನ್ನು ಬಿಎಂಟಿಸಿಯ ಕೆಂಗೇರಿ ಘಟಕದೊಳಗೇ‌ ನಡೆಸಲಾಯಿತು. ಸಾರಿಗೆ ಸಚಿವ ಶ್ರೀರಾಮುಲು, ಬಿಎಂಟಿಸಿ ಅಧ್ಯಕ್ಷ ‌ನಂದೀಶ್ ರೆಡ್ಡಿ,ಉಪಾಧ್ಯಕ್ಷ ಎಂ.ಆರ್. ವೆಂಕಟೇಶ್, ಸಾರಿಗೆ ಇಲಾಖೆ‌ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.‌ಅನ್ಬುಕುಮಾರ್ ಬಸ್ ನಲ್ಲಿ ‌ಕುಳಿತು ಒಂದು ಸುತ್ತು ಸಂಚರಿಸಿದರು.

ಕನ್ನಡ ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆಗೆ ಶರಣು -Vishwanews24

34 ಆಸನಗಳ ಈ ಬಸ್ ನಲ್ಲಿ ಎರಡು ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ. ಆರು ಬ್ಯಾಟರಿಗಳ ಸಹಾಯದಲ್ಲಿ ಬಸ್ ಸಂಚರಿಸಲಿದೆ. ಒಮ್ಮೆ ಚಾರ್ಜ್ ಮಾಡಿದರೆ 120 ಕಿಲೋ ಮೀಟರ್ ಸಂಚರಿಸುವ ಸಾಮರ್ಥ್ಯ ಹೊಂದಿದೆ.

ನ.1ಕ್ಕೆ 10 ಬಸ್‌ಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾರ್ವಜನಿಕ ಸೇವೆಗೆ ಸಮರ್ಪಿಸುವರು.

ಡಿಸೆಂಬರ್ ಅಂತ್ಯದ ವೇಳೆಗೆ ಎಲ್ಲಾ 90 ಬಸ್‌ಗಳು ರಸ್ತೆಗೆ ಇಳಿಯಲಿವೆ. ಎರಡನೇ ಹಂತದಲ್ಲಿ 300 ಬಸ್‌ಗಳು ಇನ್ನು ಆರು ತಿಂಗಳಲ್ಲಿ ರಸ್ತೆಗೆ ಇಳಿಯಲಿವೆ ಎಂದು ಶ್ರೀರಾಮುಲು ತಿಳಿಸಿದರು.

Vishwa News 24

Recent Posts

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  – vishwanews24

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ…

18 hours ago

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

19 hours ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

19 hours ago

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

19 hours ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

19 hours ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

19 hours ago