Featured

ಬೆಂಗಳೂರಿನಲ್ಲಿ ಅಣುಕು ಕೊರೊನಾ ಲಸಿಕೆ ವಿತರಣೆ ಆರಂಭ -Vishwanews24

ಬೆಂಗಳೂರಿನಲ್ಲಿ ಅಣುಕು ಕೊರೊನಾ ಲಸಿಕೆ ವಿತರಣೆ ಆರಂಭ -Vishwanews24

ಬೆಂಗಳೂರು : ಕೇಂದ್ರ ಸರ್ಕಾರವು ದೇಶದ 4 ರಾಜ್ಯಗಳಲ್ಲಿ ಕೊರೋನಾ ಲಸಿಕೆ ವಿತರಣೆ ತಾಲೀಮು ನಡೆಸಲು ಸೂಚನೆ ನೀಡಿದೆ. ಕೇಂದ್ರ ಸರ್ಕಾರದ ಸೂಚನೆಯ ಹಿನ್ನಲೆಯಲ್ಲಿ ರಾಜ್ಯದ ಐದು ಜಿಲ್ಲೆಗಳಲ್ಲಿ ಇಂದು ಕೊರೋನಾ ಲಸಿಕೆ ವಿತರಣೆಯ ತಾಲೀಮು ಶುರುವಾಗಿದೆ. ಇದಕ್ಕಾಗಿ ಕೋವಿನ್ ಅಪ್ಲಿಕೇಷನ್ ನಲ್ಲಿ ಲಸಿಕೆ ಪಡೆಯುತ್ತಿರುವವರ ಹೆಸರನ್ನು ನಮೂದಿಸಲಾಗಿದ್ದು, ರಾಜ್ಯದ ಬೆಂಗಳೂರು ನಗರ, ಶಿವಮೊಗ್ಗ, ಕಲಬುರ್ಗಿ, ಮೈಸೂರು ಹಾಗೂ ಬೆಳಗಾವಿಯಲ್ಲಿ ಇಂದು ಕೊರೋನಾ ಲಸಿಕೆ ವಿತರಣೆಯ ತಾಲೀಮು ನಡೆಯಲಿದೆ.

ಬೆಂಗಳೂರಿನಲ್ಲಿ ಅಣಕು ಲಸಿಕೆ ವಿತರಣೆ ಕಾರ್ಯಕ್ರಮ ಆರಂಭವಾಗಿದೆ. ಆರೋಗ್ಯ ಇಲಾಖೆಯ 25 ಮಂದಿ ಈಗಾಗಲೇ ಆಗಮಿಸಿದ್ದು ತಾಲೀಮಿನಲ್ಲಿ ಭಾಗವಹಿಸಿದ್ದಾರೆ.ಬೆಂಗಳೂರಿನಲ್ಲಿ ಎರಡು ಕಡೆ ಲಸಿಕೆಯ ಡ್ರೈ ರನ್‌ (ತಾಲೀಮು) ನಡೆಯುತ್ತಿದ್ದು, ಅವುಗಳೆಂದರೆ ನಗರದ ವಿದ್ಯಾಪೀಠ (ದಕ್ಷಿಣ ವಲಯ) ಮತ್ತು ಕಾಮಾಕ್ಷಿಪಾಳ್ಯ (ಪಶ್ಚಿಮ ವಲಯ)ದಲ್ಲಿ ಹಾಗೂ ಬೆಂಗಳೂರು ಗ್ರಾಮೀಣ ಪ್ರದೇಶದ ಬನ್ನೇರುಘಟ್ಟ-ಅನೆಕಲ್ ರಸ್ತೆಯ ಹರಗದ್ದೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ವಿತರಣೆಯ ತಾಲೀಮು ನಡೆಯುತ್ತಿದೆ.ಡ್ರೈನ್‌ ರನ್‌ ( ತಾಲೀಮು) ಬಳಿಕ ಎಲ್ಲಾ ಅಂಕಿ-ಅಂಶಗಳ ವರದಿಯನ್ನು ರಾಜ್ಯ ಸರ್ಕಾರ ಕೇಂದ್ರ ಆರೋಗ್ಯ ಇಲಾಖೆಗೆ ನೀಡಲಿದೆ. ‘ಕೋವಿಶೀಲ್ಡ್‌’ ಲಸಿಕೆಯನ್ನು ತುರ್ತು ಸಂದರ್ಭಗಳಲ್ಲಿ ಸೋಂಕಿತರಿಗೆ ಬಳಸಲು ತಜ್ಞರ ಸಮಿತಿ ಶುಕ್ರವಾರ ಷರತ್ತುಬದ್ಧ ಅನುಮೋದನೆ ನೀಡಿದೆ, ಆದರೆ ದೇಶದ ಜನತೆ ಬಳಕೆಗೆ ಔಷಧ ನಿಯಂತ್ರಣ ಪ್ರಾಧಿಕಾರದ (ಡಿಸಿಜಿಐ) ಅನುಮೋದನೆ ಅಗತ್ಯವಾಗಿದೆ,. ಅಂತಿಮ ಆದೇಶ ಹೊರ ಬರಬೇಕಾಗಿದೆ.

ಮೀನಿನಲ್ಲಿ ಫಾರ್ಮಲಿನ್ ಬಳಕೆ ಇರುವುದು ಕಂಡುಬಂದಿಲ್ಲ: ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಬೆಂಗಳೂರಿನಲ್ಲಿ ಎರಡು ಕಡೆ ಲಸಿಕೆಯ ಡ್ರೈ ರನ್‌ ನಡೆಯತ್ತಿದೆ. ಒಂದು ನಗರದ ವಿದ್ಯಾಪೀಠ (ದಕ್ಷಿಣ ವಲಯ) ಮತ್ತು ಕಾಮಾಕ್ಷಿಪಾಳ್ಯ (ಪಶ್ಚಿಮ ವಲಯ)ದಲ್ಲಿ ನಡೆಸಲಾಗುತ್ತಿದೆ. ಇನ್ನೊಂದು ಬೆಂಗಳೂರು ಗ್ರಾಮೀಣ ಪ್ರದೇಶದ ಬನ್ನೇರುಘಟ್ಟ-ಅನೆಕಲ್ ರಸ್ತೆಯ ಹರಗದ್ದೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ವಿತರಣೆ ನಡೆಯುತ್ತಿದೆ.

ಒಂದು ಪ್ರಾಥಮಿಕ ಕೇಂದ್ರದಲ್ಲಿ 25 ಮಂದಿ ಲಸಿಕೆ ಪಡೆಯಲಿದ್ದಾರೆ. ವಿತರಣೆ ಬಳಿಕ ಕೇಂದ್ರಕ್ಕೆ ರಾಜ್ಯ ವರದಿ ನೀಡುತ್ತದೆ. ಕೇಂದ್ರ ಸರಕಾರದ ಒಂದು ಬಾರಿ ಲಸಿಕೆ ನೀಡಲು ಅನುಮತಿ ನೀಡಿದರೆ ಬೆಂಗಳೂರಿನ ಸುಮಾರು 1,517 ಆರೋಗ್ಯ ಕೇಂದ್ರಗಳನ್ನು ಲಸಿಕೆ ವಿತರಣೆ ಬಳಸಿಕೊಳ್ಳಲಾಗುತ್ತದೆ ಎಂದು ಬಿಬಿಎಂಪಿ ತಿಳಿಸಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago