ಬೆಂಗಳೂರು : ಕೇಂದ್ರ ಸರ್ಕಾರವು ದೇಶದ 4 ರಾಜ್ಯಗಳಲ್ಲಿ ಕೊರೋನಾ ಲಸಿಕೆ ವಿತರಣೆ ತಾಲೀಮು ನಡೆಸಲು ಸೂಚನೆ ನೀಡಿದೆ. ಕೇಂದ್ರ ಸರ್ಕಾರದ ಸೂಚನೆಯ ಹಿನ್ನಲೆಯಲ್ಲಿ ರಾಜ್ಯದ ಐದು ಜಿಲ್ಲೆಗಳಲ್ಲಿ ಇಂದು ಕೊರೋನಾ ಲಸಿಕೆ ವಿತರಣೆಯ ತಾಲೀಮು ಶುರುವಾಗಿದೆ. ಇದಕ್ಕಾಗಿ ಕೋವಿನ್ ಅಪ್ಲಿಕೇಷನ್ ನಲ್ಲಿ ಲಸಿಕೆ ಪಡೆಯುತ್ತಿರುವವರ ಹೆಸರನ್ನು ನಮೂದಿಸಲಾಗಿದ್ದು, ರಾಜ್ಯದ ಬೆಂಗಳೂರು ನಗರ, ಶಿವಮೊಗ್ಗ, ಕಲಬುರ್ಗಿ, ಮೈಸೂರು ಹಾಗೂ ಬೆಳಗಾವಿಯಲ್ಲಿ ಇಂದು ಕೊರೋನಾ ಲಸಿಕೆ ವಿತರಣೆಯ ತಾಲೀಮು ನಡೆಯಲಿದೆ.
ಬೆಂಗಳೂರಿನಲ್ಲಿ ಅಣಕು ಲಸಿಕೆ ವಿತರಣೆ ಕಾರ್ಯಕ್ರಮ ಆರಂಭವಾಗಿದೆ. ಆರೋಗ್ಯ ಇಲಾಖೆಯ 25 ಮಂದಿ ಈಗಾಗಲೇ ಆಗಮಿಸಿದ್ದು ತಾಲೀಮಿನಲ್ಲಿ ಭಾಗವಹಿಸಿದ್ದಾರೆ.ಬೆಂಗಳೂರಿನಲ್ಲಿ ಎರಡು ಕಡೆ ಲಸಿಕೆಯ ಡ್ರೈ ರನ್ (ತಾಲೀಮು) ನಡೆಯುತ್ತಿದ್ದು, ಅವುಗಳೆಂದರೆ ನಗರದ ವಿದ್ಯಾಪೀಠ (ದಕ್ಷಿಣ ವಲಯ) ಮತ್ತು ಕಾಮಾಕ್ಷಿಪಾಳ್ಯ (ಪಶ್ಚಿಮ ವಲಯ)ದಲ್ಲಿ ಹಾಗೂ ಬೆಂಗಳೂರು ಗ್ರಾಮೀಣ ಪ್ರದೇಶದ ಬನ್ನೇರುಘಟ್ಟ-ಅನೆಕಲ್ ರಸ್ತೆಯ ಹರಗದ್ದೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ವಿತರಣೆಯ ತಾಲೀಮು ನಡೆಯುತ್ತಿದೆ.ಡ್ರೈನ್ ರನ್ ( ತಾಲೀಮು) ಬಳಿಕ ಎಲ್ಲಾ ಅಂಕಿ-ಅಂಶಗಳ ವರದಿಯನ್ನು ರಾಜ್ಯ ಸರ್ಕಾರ ಕೇಂದ್ರ ಆರೋಗ್ಯ ಇಲಾಖೆಗೆ ನೀಡಲಿದೆ. ‘ಕೋವಿಶೀಲ್ಡ್’ ಲಸಿಕೆಯನ್ನು ತುರ್ತು ಸಂದರ್ಭಗಳಲ್ಲಿ ಸೋಂಕಿತರಿಗೆ ಬಳಸಲು ತಜ್ಞರ ಸಮಿತಿ ಶುಕ್ರವಾರ ಷರತ್ತುಬದ್ಧ ಅನುಮೋದನೆ ನೀಡಿದೆ, ಆದರೆ ದೇಶದ ಜನತೆ ಬಳಕೆಗೆ ಔಷಧ ನಿಯಂತ್ರಣ ಪ್ರಾಧಿಕಾರದ (ಡಿಸಿಜಿಐ) ಅನುಮೋದನೆ ಅಗತ್ಯವಾಗಿದೆ,. ಅಂತಿಮ ಆದೇಶ ಹೊರ ಬರಬೇಕಾಗಿದೆ.
ಮೀನಿನಲ್ಲಿ ಫಾರ್ಮಲಿನ್ ಬಳಕೆ ಇರುವುದು ಕಂಡುಬಂದಿಲ್ಲ: ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24
ಬೆಂಗಳೂರಿನಲ್ಲಿ ಎರಡು ಕಡೆ ಲಸಿಕೆಯ ಡ್ರೈ ರನ್ ನಡೆಯತ್ತಿದೆ. ಒಂದು ನಗರದ ವಿದ್ಯಾಪೀಠ (ದಕ್ಷಿಣ ವಲಯ) ಮತ್ತು ಕಾಮಾಕ್ಷಿಪಾಳ್ಯ (ಪಶ್ಚಿಮ ವಲಯ)ದಲ್ಲಿ ನಡೆಸಲಾಗುತ್ತಿದೆ. ಇನ್ನೊಂದು ಬೆಂಗಳೂರು ಗ್ರಾಮೀಣ ಪ್ರದೇಶದ ಬನ್ನೇರುಘಟ್ಟ-ಅನೆಕಲ್ ರಸ್ತೆಯ ಹರಗದ್ದೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ವಿತರಣೆ ನಡೆಯುತ್ತಿದೆ.
ಒಂದು ಪ್ರಾಥಮಿಕ ಕೇಂದ್ರದಲ್ಲಿ 25 ಮಂದಿ ಲಸಿಕೆ ಪಡೆಯಲಿದ್ದಾರೆ. ವಿತರಣೆ ಬಳಿಕ ಕೇಂದ್ರಕ್ಕೆ ರಾಜ್ಯ ವರದಿ ನೀಡುತ್ತದೆ. ಕೇಂದ್ರ ಸರಕಾರದ ಒಂದು ಬಾರಿ ಲಸಿಕೆ ನೀಡಲು ಅನುಮತಿ ನೀಡಿದರೆ ಬೆಂಗಳೂರಿನ ಸುಮಾರು 1,517 ಆರೋಗ್ಯ ಕೇಂದ್ರಗಳನ್ನು ಲಸಿಕೆ ವಿತರಣೆ ಬಳಸಿಕೊಳ್ಳಲಾಗುತ್ತದೆ ಎಂದು ಬಿಬಿಎಂಪಿ ತಿಳಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…