ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ (ಇಂದು) ಮಧ್ಯಾಹ್ನ ಮಹಾ ದರೋಡೆ ನಡೆದಿದೆ. ಎಟಿಎಂಗೆ ಹಣ ಸಾಗಿಸುವ ವಾಹನವನ್ನು ರಸ್ತೆ ಮಧ್ಯೆದಲ್ಲೇ ಅಡ್ಡಗಟ್ಟಿದ ದರೋಡೆಕೋರರು ಕೋಟ್ಯಂತರ ರೂಪಾಯಿ ದರೋಡೆ ಮಾಡಿದೆ.
ಬೆಂಗಳೂರಿನ ಜಯದೇವ ಡೈರಿ ಸರ್ಕಲ್ ಫ್ಲೈ ಓವರ್ ಮೇಲೆ (ಅಶೋಕ ಪಿಲ್ಲರ್ ಬಳಿ) ಈ ಘಟನೆ ನಡೆದಿದೆ. ವಾಹನದಲ್ಲಿದ್ದ 7 ಕೋಟಿ 11 ಲಕ್ಷ ರೂಪಾಯಿ ಹಣವನ್ನ ದೋಚಿ ದರೋಡೆಕೋರರು ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂಗೆ ಹಣ ಹಾಕಲೆಂದು GJ 01 HT 9173 ಸಂಖ್ಯೆ ವಾಹನ ಹಣ ತುಂಬಿಕೊಂಡು ತೆರಳುತ್ತಿತ್ತು. ಈ ವೇಳೆ ಜಯದೇವ ಡೈರಿ ಸರ್ಕಲ್ನಲ್ಲಿ ಇನ್ನೋವಾದಲ್ಲಿ ಬಂದ 6-7 ಜನರ ಗ್ಯಾಂಗ್, ಎಟಿಎಂ ವಾಹನ ತಡೆದು ನಾವು ಆರ್ಬಿಐನವರು ಎಂದು ಹೇಳಿ ಹೆದರಿಸಿದ್ದಾರೆ. ಗನ್ಮ್ಯಾನ್ ಸೇರಿದಂತೆ ಉಳಿದವರನ್ನೆಲ್ಲ ಅಲ್ಲೇ ಇಳಿಸಿ ವಾಹನ ಸಮೇತ ಚಾಲಕನನ್ನ ಡೈರಿ ಸರ್ಕಲ್ಗೆ ಕರೆದೊಯ್ದಿದ್ದಾರೆ. ಬಳಿಕ ಡೇರಿ ಸರ್ಕಲ್ ಫ್ಲೈಓವರ್ ಮೇಲೆ ನಿಲ್ಲಿಸಿ ವಾಹನದಲ್ಲಿದ್ದ ಹಣವನ್ನು ಇನ್ನೋವಾ ಕಾರಿಗೆ ತುಂಬಿಕೊಂಡು ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ಸುದ್ದಗುಂಟೆಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಎಟಿಎಂ ವಾಹನದಲ್ಲಿ ಒಟ್ಟು 4 ಜನ ಸಿಎಂಎಸ್ ಸಿಬ್ಬಂದಿ ಇದ್ದರು. ಓರ್ವ ಡ್ರೈವರ್, ಇಬ್ಬರು ಗನ್ ಮ್ಯಾನ್ ಹಾಗೂ ಮತ್ತೊಬ್ಬ ಹಣ ಹಾಕುವ ಸಿಬ್ಬಂದಿ ಇದ್ದು, ಸದ್ಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಇವರ ವಿಚಾರಣೆ ನಡೆಯುತ್ತಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…