ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ (ಇಂದು) ಮಧ್ಯಾಹ್ನ ಮಹಾ ದರೋಡೆ ನಡೆದಿದೆ. ಎಟಿಎಂಗೆ ಹಣ ಸಾಗಿಸುವ ವಾಹನವನ್ನು ರಸ್ತೆ ಮಧ್ಯೆದಲ್ಲೇ ಅಡ್ಡಗಟ್ಟಿದ ದರೋಡೆಕೋರರು ಕೋಟ್ಯಂತರ ರೂಪಾಯಿ ದರೋಡೆ ಮಾಡಿದೆ.
ಬೆಂಗಳೂರಿನ ಜಯದೇವ ಡೈರಿ ಸರ್ಕಲ್ ಫ್ಲೈ ಓವರ್ ಮೇಲೆ (ಅಶೋಕ ಪಿಲ್ಲರ್ ಬಳಿ) ಈ ಘಟನೆ ನಡೆದಿದೆ. ವಾಹನದಲ್ಲಿದ್ದ 7 ಕೋಟಿ 11 ಲಕ್ಷ ರೂಪಾಯಿ ಹಣವನ್ನ ದೋಚಿ ದರೋಡೆಕೋರರು ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂಗೆ ಹಣ ಹಾಕಲೆಂದು GJ 01 HT 9173 ಸಂಖ್ಯೆ ವಾಹನ ಹಣ ತುಂಬಿಕೊಂಡು ತೆರಳುತ್ತಿತ್ತು. ಈ ವೇಳೆ ಜಯದೇವ ಡೈರಿ ಸರ್ಕಲ್ನಲ್ಲಿ ಇನ್ನೋವಾದಲ್ಲಿ ಬಂದ 6-7 ಜನರ ಗ್ಯಾಂಗ್, ಎಟಿಎಂ ವಾಹನ ತಡೆದು ನಾವು ಆರ್ಬಿಐನವರು ಎಂದು ಹೇಳಿ ಹೆದರಿಸಿದ್ದಾರೆ. ಗನ್ಮ್ಯಾನ್ ಸೇರಿದಂತೆ ಉಳಿದವರನ್ನೆಲ್ಲ ಅಲ್ಲೇ ಇಳಿಸಿ ವಾಹನ ಸಮೇತ ಚಾಲಕನನ್ನ ಡೈರಿ ಸರ್ಕಲ್ಗೆ ಕರೆದೊಯ್ದಿದ್ದಾರೆ. ಬಳಿಕ ಡೇರಿ ಸರ್ಕಲ್ ಫ್ಲೈಓವರ್ ಮೇಲೆ ನಿಲ್ಲಿಸಿ ವಾಹನದಲ್ಲಿದ್ದ ಹಣವನ್ನು ಇನ್ನೋವಾ ಕಾರಿಗೆ ತುಂಬಿಕೊಂಡು ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ಸುದ್ದಗುಂಟೆಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಎಟಿಎಂ ವಾಹನದಲ್ಲಿ ಒಟ್ಟು 4 ಜನ ಸಿಎಂಎಸ್ ಸಿಬ್ಬಂದಿ ಇದ್ದರು. ಓರ್ವ ಡ್ರೈವರ್, ಇಬ್ಬರು ಗನ್ ಮ್ಯಾನ್ ಹಾಗೂ ಮತ್ತೊಬ್ಬ ಹಣ ಹಾಕುವ ಸಿಬ್ಬಂದಿ ಇದ್ದು, ಸದ್ಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಇವರ ವಿಚಾರಣೆ ನಡೆಯುತ್ತಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…