ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ (ಇಂದು) ಮಧ್ಯಾಹ್ನ ಮಹಾ ದರೋಡೆ ನಡೆದಿದೆ. ಎಟಿಎಂಗೆ ಹಣ ಸಾಗಿಸುವ ವಾಹನವನ್ನು ರಸ್ತೆ ಮಧ್ಯೆದಲ್ಲೇ ಅಡ್ಡಗಟ್ಟಿದ ದರೋಡೆಕೋರರು ಕೋಟ್ಯಂತರ ರೂಪಾಯಿ ದರೋಡೆ ಮಾಡಿದೆ.
ಬೆಂಗಳೂರಿನ ಜಯದೇವ ಡೈರಿ ಸರ್ಕಲ್ ಫ್ಲೈ ಓವರ್ ಮೇಲೆ (ಅಶೋಕ ಪಿಲ್ಲರ್ ಬಳಿ) ಈ ಘಟನೆ ನಡೆದಿದೆ. ವಾಹನದಲ್ಲಿದ್ದ 7 ಕೋಟಿ 11 ಲಕ್ಷ ರೂಪಾಯಿ ಹಣವನ್ನ ದೋಚಿ ದರೋಡೆಕೋರರು ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂಗೆ ಹಣ ಹಾಕಲೆಂದು GJ 01 HT 9173 ಸಂಖ್ಯೆ ವಾಹನ ಹಣ ತುಂಬಿಕೊಂಡು ತೆರಳುತ್ತಿತ್ತು. ಈ ವೇಳೆ ಜಯದೇವ ಡೈರಿ ಸರ್ಕಲ್ನಲ್ಲಿ ಇನ್ನೋವಾದಲ್ಲಿ ಬಂದ 6-7 ಜನರ ಗ್ಯಾಂಗ್, ಎಟಿಎಂ ವಾಹನ ತಡೆದು ನಾವು ಆರ್ಬಿಐನವರು ಎಂದು ಹೇಳಿ ಹೆದರಿಸಿದ್ದಾರೆ. ಗನ್ಮ್ಯಾನ್ ಸೇರಿದಂತೆ ಉಳಿದವರನ್ನೆಲ್ಲ ಅಲ್ಲೇ ಇಳಿಸಿ ವಾಹನ ಸಮೇತ ಚಾಲಕನನ್ನ ಡೈರಿ ಸರ್ಕಲ್ಗೆ ಕರೆದೊಯ್ದಿದ್ದಾರೆ. ಬಳಿಕ ಡೇರಿ ಸರ್ಕಲ್ ಫ್ಲೈಓವರ್ ಮೇಲೆ ನಿಲ್ಲಿಸಿ ವಾಹನದಲ್ಲಿದ್ದ ಹಣವನ್ನು ಇನ್ನೋವಾ ಕಾರಿಗೆ ತುಂಬಿಕೊಂಡು ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ಸುದ್ದಗುಂಟೆಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಎಟಿಎಂ ವಾಹನದಲ್ಲಿ ಒಟ್ಟು 4 ಜನ ಸಿಎಂಎಸ್ ಸಿಬ್ಬಂದಿ ಇದ್ದರು. ಓರ್ವ ಡ್ರೈವರ್, ಇಬ್ಬರು ಗನ್ ಮ್ಯಾನ್ ಹಾಗೂ ಮತ್ತೊಬ್ಬ ಹಣ ಹಾಕುವ ಸಿಬ್ಬಂದಿ ಇದ್ದು, ಸದ್ಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಇವರ ವಿಚಾರಣೆ ನಡೆಯುತ್ತಿದೆ.
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…
ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…
ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್ಆರ್ ನಗರದ …
ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ ರುತ್ ಪ್ರಭು ತಾವು ಮೊದಲ…