ಬೆಂಗಳೂರಿನಲ್ಲಿ ಕೊರೋನಾ ವೈರಸ್ ಪತ್ತೆಯಾಗಿಲ್ಲ, ಆತಂಕಪಡುವ ಅಗತ್ಯವಿಲ್ಲ: ಶ್ರೀರಾಮುಲು -Vishwanews24
ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ ಎಂದು ಕೆಲವು ಸುದ್ದಿ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಡುತ್ತಿದ್ದು, ಇವು ಸತ್ಯಕ್ಕೆ ದೂರವಾದ ಮಾತು ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ಟ್ವಿಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.
ವಿಶ್ವದೆಲ್ಲೆಡೆ ಭೀತಿ ಹುಟ್ಟಿಸಿರುವ ಮಾರಣಾಂತಿಕ ಕೊರೋನಾ ವೈರಸ್ ಭಾರತದಲ್ಲೂ ಅನೇಕ ಕಡೆಗಳಲ್ಲಿ ಭಯದ ವಾತಾವರಣ ಉಂಟು ಮಾಡಿದೆ. ಈ ನಡುವೆ ಬೆಂಗಳೂರಿನಲ್ಲಿ ಈ ವೈರಸ್ ಪತ್ತೆಯಾಗಿದೆ ಎಂಬಂತಹ ಸುದ್ದಿಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿತ್ತು. ಪರಿಣಾಮ ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದರು. ಆದರೆ, ಈ ಕುರಿತು ಶ್ರೀರಾಮುಲು ಇಂದು ಟ್ವಟರ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ #COVID19india ವೈರಸ್ ಪತ್ತೆಯಾಗಿದೆ ಎಂದು ಕೆಲವೊಂದು ಮಾಧ್ಯಮ ಹಾಗೂ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು. ಕರ್ನಾಟಕ ಸರ್ಕಾರ ಹಾಗೂ ಆರೋಗ್ಯ ಇಲಾಖೆಯು ವೈರಸ್ ಹರಡದಂತೆ ಎಲ್ಲಾ ರೀತಿಯ ಸಮರ್ಪಕ ಕ್ರಮಗಳನ್ನು ಕೈಗೊಂಡಿದೆ. ನಾಗರೀಕರು ಯಾವುದೇ ಆತಂಕಕ್ಕೆ ಒಳಗಾಗಬಾರದು.
— B Sriramulu (@sriramulubjp) March 9, 2020
“ಬೆಂಗಳೂರಿನಲ್ಲಿ ಕೋವಿಡ್ 19 ಅಥವಾ ಕೊರೋನಾ ವೈರಸ್ ಪತ್ತೆಯಾಗಿದೆ ಎಂದು ಕೆಲವೊಂದು ಮಾಧ್ಯಮ ಹಾಗೂ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು. ಕರ್ನಾಟಕ ಸರ್ಕಾರ ಹಾಗೂ ಆರೋಗ್ಯ ಇಲಾಖೆಯು ವೈರಸ್ ಹರಡದಂತೆ ಎಲ್ಲಾ ರೀತಿಯ ಸಮರ್ಪಕ ಕ್ರಮಗಳನ್ನು ಕೈಗೊಂಡಿದೆ. ನಾಗರೀಕರು ಯಾವುದೇ ಆತಂಕಕ್ಕೆ ಒಳಗಾಗಬಾರದು” ಎಂದು ತಿಳಿಸಿದ್ದಾರೆ.
