Featured

ಬೆಂಗಳೂರಿನಿಂದ ಕೆಮ್ಮಣ್ಣು ಹೂಡೆಗೆ ಬೈಕ್ ಮೂಲಕವೇ ಆಗಮಿಸಿ ಕಡಲ ತೀರದ ರಕ್ಷಣೆ, ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಿದ ಮಹಿಳಾ ಬೈಕರ್ಸ್ – Vishwanews24

ಬೆಂಗಳೂರಿನಿಂದ ಕೆಮ್ಮಣ್ಣು ಹೂಡೆಗೆ ಬೈಕ್ ಮೂಲಕವೇ ಆಗಮಿಸಿ ಕಡಲ ತೀರದ ರಕ್ಷಣೆ, ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಿದ ಮಹಿಳಾ ಬೈಕರ್ಸ್

ಕೆಮ್ಮಣ್ಣು: ಕಡಲ ತೀರದ ರಕ್ಷಣೆ, ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ‘ಸೇವ್ ಮರೈನ್ ಲೈಫ್’ ಬೈಕ್ ಯಾತ್ರೆಯ ಮೂಲಕ ಬೆಂಗಳೂರಿನ ಸ್ವಾತಿ ಆರ್ ಮತ್ತು ಅನಿತಾ ಎಂ ಮಂಗಳವಾರ ಹೂಡೆ ಕಡಲ ತೀರದಲ್ಲಿ ಜಾಗೃತಿ ಮೂಡಿಸಿ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದರು.

ಭಾರತ ಸರ್ಕಾರ, ನೆಹರು ಯುವ ಕೇಂದ್ರ ಉಡುಪಿ, ಸ್ವಚ್ಛ ಭಾರತ್ ಫ್ರೆಂಡ್ಸ್, ತೋನ್ಸೆ ಗ್ರಾಮ ಪಂಚಾಯತ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.), ನಿರ್ಮಲ್ ತೋನ್ಸೆ, ಲಯನ್ಸ್ ಕ್ಲಬ್ ಸಂತೆಕಟ್ಟೆ, ಆರ್ಗನೈಸೇಶನ್ ಫಾರ್ ರೂರಲ್ ಡೆವಲಪ್ಮೆಂಟ್ ಎಜ್ಯುಕೇಶನ್ ಆಂಡ್ ರಿಸರ್ಚ್ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೆಹರೂ ಯುವ ಕೇಂದ್ರ ಉಡುಪಿ ಜಿಲ್ಲೆಯ ಜಿಲ್ಲಾ ಯುವ ಅಧಿಕಾರಿ ವಿಲ್ಫ್ರೆಡ್ ಡಿ’ಸೋಜ ಸ್ವಾಗತಿಸಿ ಶುಭ ಹಾರೈಸಿದರು.

ಬಳಿಕ ಮಾತನಾಡಿದ ಅವರು, ನೆಹರೂ ಯುವ ಕೇಂದ್ರ ಸ್ಥಳೀಯ ಸಂಘ ಸಂಸ್ಥೆಗಳೊಂದಿಗೆ ಸ್ವಚ್ಛತೆಯ ಅರಿವನ್ನು ಮೂಡಿಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದು ಜಿಲ್ಲೆಯ ಸಂಘ ಸಂಸ್ಥೆಗಳು ಅಭೂತಪೂರ್ವ ಬೆಂಬಲವನ್ನು ನೀಡಿವೆ. ಸ್ವಚ್ಛತೆಯು ಒಂದು ದಿನದ ವಿಚಾರವಲ್ಲ, ಅದು ನಿತ್ಯ ನಿರಂತರವಾದರೆ ಮಾತ್ರ ಬದಲಾವಣೆ ಸಾಧ್ಯ ಎಂದರು.

ಕನ್ನಡದ ಮೊದಲ ಮಹಿಳಾ ಮೋಟೋ ವ್ಲಾಗರ್ ಮತ್ತು ಇಂಡಿಯನ್ ಬುಕ್ ಆಫ್ ರೆಕಾರ್ಡ್ ಖ್ಯಾತಿಯ ಬೆಂಗಳೂರಿನ ಸ್ವಾತಿ ಆರ್ ಮಾತನಾಡುತ್ತಾ, ಸಿಂಗಲ್ ಯೂಸ್ ಪ್ಲಾಸ್ಟಿಕ್ ಪರಿಸರಕ್ಕೆ ಅತ್ಯಂತ ಮಾರಕವಾಗಿದ್ದು ಜನರ ಮನೋಭಾವದಲ್ಲಿ ಬದಲಾವಣೆಯಾದರೆ ಪರಿಸರ ಸಂರಕ್ಷಣೆಯ ಕೆಲಸ ಸುಲಭಸಾಧ್ಯ ಎಂದರು. ಉಡುಪಿ ಜಿಲ್ಲೆಯ ಎಲ್ಲಾ ಕಡಲ ತೀರಗಳಿಗೆ ಬ್ಲೂ ಫ್ಲಾಗ್ ಮನ್ನಣೆ ಸಿಗುವಂತಾಗಲಿ ಎಂದರು.

ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಪ್ರೈಡ್, ಆರ್ಗನೈಸೇಶನ್ ಫಾರ್ ರೂರಲ್ ಡೆವಲಪ್ಮೆಂಟ್ ಎಜ್ಯುಕೇಶನ್ ಆಂಡ್ ರಿಸರ್ಚ್ ಮತ್ತು ಮೊಟೋ ಟೋರ್ಕ್ ಪ್ರಾಯೋಜಕತ್ವದಲ್ಲಿ ಜಾಗೃತಿ ಮೂಡಿಸುವ ‘ಸೇವ್ ಮರೈನ್ ಲೈಫ್’ ಬೈಕ್ ಯಾತ್ರೆಗೆ ಅಕ್ಟೋಬರ್ 9 ರಂದು ಬೆಂಗಳೂರಿನ ವಿಧಾನಸೌಧದ ಎದುರು ಚಾಲನೆ ನೀಡಲಾಯಿತು.

ಇದನ್ನೂ ಓದಿ: ನಿರ್ಧಾರಗಳ ಬದಲಾವಣೆಯಿಂದ ಕೆಲಸಗಳಲ್ಲಿ ಹಿನ್ನಡೆ ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಅಕ್ಟೋಬರ್ 17 ರವರೆಗೆ ಈ ಜಾಗೃತಿ ಯಾತ್ರೆ ನಡೆಯಲಿದೆ. ರಾಜ್ಯದ ಎಲ್ಲಾ ಕಡಲ ತೀರಗಳಿಗೆ ಸುಮಾರು 1300 ಕಿಮೀ ಕ್ಕಿಂತ ಹೆಚ್ಚು ದೂರವನ್ನು ಬೈಕ್ ಮೂಲಕವೇ ಸಂಚರಿಸಿ, ಆಯ್ದ ಕಡೆಗಳಲ್ಲಿ ಜಾಗೃತಿ ಮೂಡಿಸಿ ಸ್ವಚ್ಛತಾ ಅಭಿಯಾನ ನಡೆಸುತ್ತಿದ್ದೇವೆ. ಶೈಕ್ಷಣಿಕ ಸಂಸ್ಥೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಜತೆಗೆ ಸಂವಾದ ಕಾರ್ಯಕ್ರಮವೂ ಯಾತ್ರೆಯ ಭಾಗವಾಗಿದೆ ಎಂದು ಸ್ವಾತಿ ಆರ್. ಹೇಳಿದರು.

ಹೂಡೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಯೋಜನಾಧಿಕಾರಿ ಸುಷ್ಮಾ, ನಿರ್ಮಲ್ ತೋನ್ಸೆ ಅಧ್ಯಕ್ಷರಾದ ವೆಂಕಟೇಶ್ ಕುಂದರ್, ಲಯನ್ಸ್ ಕ್ಲಬ್ ಸಂತೆಕಟ್ಟೆ ಅಧ್ಯಕ್ಷರಾದ ಪ್ರವೀಣ್ ಕರ್ವಾಲೋ, ಕಾರ್ಯದರ್ಶಿ ಸುದರ್ಶನ್ ನಾಯಕ್, ಕೋಶಾಧಿಕಾರಿ ಗಣೇಶ್ ಡಿ., ರಾಘವೇಂದ್ರ ಪ್ರಭು ಕರ್ವಾಲು, ಉದಯ ನಾಯ್ಕ್, ಜೂಲಿಯಸ್ ಲೂವಿಸ್, ಗಣೇಶ್ ಪ್ರಸಾದ್ ಜಿ. ನಾಯಕ್, ಅಸ್ವಿನಿ, ಶ್ರದ್ಧಾ, ಸಂಜನಾ, ಸಮೀಕ್ಷಾ, ರಕ್ಷಿತ್, ಸುಕಾಂತ್ ಯು ನಾಯ್ಕ್ ಮುಂತಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

55 minutes ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 hour ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

1 hour ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

1 hour ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago