Featured

ಬೆಂಗಳೂರಿನಿಂದ ಮಂಗಳೂರಿಗೆ ಎರಡು ಹೊಸ ವಿಮಾನಗಳನ್ನು ಆರಂಭಿಸಿದ ಏರ್ ಇಂಡಿಯಾ – vishwanews24

ಬೆಂಗಳೂರಿನಿಂದ ಮಂಗಳೂರಿಗೆ ಎರಡು ಹೊಸ ವಿಮಾನಗಳನ್ನು ಆರಂಭಿಸಿದ ಏರ್ ಇಂಡಿಯಾ

ಮಂಗಳೂರು : ಏರ್ ಇಂಡಿಯಾ ಸಂಸ್ಥೆಯು ಬೆಂಗಳೂರಿನಿಂದ ಮಂಗಳೂರಿಗೆ ಎರಡು ಹೊಸ ವಿಮಾನಗಳ ಸೇವೆಯನ್ನು ಆರಂಭಿಸಿದೆ. ನವೆಂಬರ್ 15 ರ ಬುಧವಾರದಿಂದ ಪ್ರಾರಂಭವಾಗುವ ಚಳಿಗಾಲದ ವೇಳಾಪಟ್ಟಿಯು ಈ ಎರಡು ನಗರಗಳಿಗೆ ಮಾತ್ರವಲ್ಲದೆ ಚೆನ್ನೈ, ಕಣ್ಣೂರು, ತಿರುವನಂತಪುರಂ ಮತ್ತು ವಾರಣಾಸಿಗೆ ಸಂಪರ್ಕ ಕಲ್ಪಿಸುತ್ತದೆ.

ಈ ಬಗ್ಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ (MIA) ಮಂಗಳವಾರ ವರದಿ ಬಿಡುಗಡೆ ಮಾಡಿದೆ. ದೇಶೀಯ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಿದ್ದು, ವಿಮಾನದ ಸಮಯವನ್ನು ಗ್ರಾಹಕರ ಅನುಕೂಲಕ್ಕಾಗಿ ವಿನ್ಯಾಸಗೊಳಿಸಲಾಗಿದೆ ಎಂದು ಎಂಐಎ ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನಗಳ ವೇಳಾಪಟ್ಟಿ

IX 782 ವಿಮಾನವು ವಾರಣಾಸಿಯಿಂದ ಬೆಳಿಗ್ಗೆ 8 ಗಂಟೆಗೆ ತನ್ನ ಪ್ರಯಾಣವನ್ನು ಪ್ರಾರಂಭಿಸುತ್ತದೆ, ಬೆಳಿಗ್ಗೆ 10.30 ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಇಳಿಯುತ್ತದೆ. ವಿಮಾನವನ್ನು ಬದಲಾಯಿಸದೆ 55 ನಿಮಿಷಗಳ ವಿರಾಮದ ನಂತರ, ಅದು KIA ನಿಂದ 11.10 ಕ್ಕೆ ನಿರ್ಗಮಿಸಿ ಮಧ್ಯಾಹ್ನ 12.10 ಕ್ಕೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲಿದೆ.

ವಾರಣಾಸಿ-ಮಂಗಳೂರು ವಿಮಾನ ಸೇವೆಯಿ ನವೆಂಬರ್ 25 ರವರೆಗೆ (ಕೇವಲ 10 ದಿನಗಳವರೆಗೆ) ಮಾತ್ರ ಇರಲಿದೆ. ಆದಾಗ್ಯೂ, ನವೆಂಬರ್ 26 ರಿಂದ, ವಿಮಾನವು ಬೆಂಗಳೂರಿನ ಮೂಲಕ ಚೆನ್ನೈನಿಂದ ಮಂಗಳೂರಿಗೆ ಸೇವೆ ನೀಡಲಿದೆ.

Vishwa News 24

Recent Posts

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

2 minutes ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

14 minutes ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

20 minutes ago

ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ- vishwanews24

ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…

2 hours ago

ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ – vishwanews24

ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…

3 hours ago

ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ  – vishwanews24

ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ  ಉಡುಪಿ: ಮಂಗಳೂರಿನಿಂದ…

3 hours ago