ಬೆಂಗಳೂರು : ಶಬರಿಮಲೆ ಯಾತ್ರಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಸಿಹಿಸುದ್ದಿ ನೀಡಿದ್ದು, ಕೆಎಸ್ಆರ್ಟಿಸಿಯು ಬೆಂಗಳೂರು ಮತ್ತು ಕೇರಳದ ಪಂಪಾ ನಡುವೆ ಐರಾವತ ವೋಲ್ವೊ ಬಸ್ ಸೇವೆ ಆರಂಭಿಸಿದೆ.
ಶಾಂತಿ ನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1.50ಕ್ಕೆ ವೋಲ್ವೊ ಬಸ್ ಹೊರಡಲಿದೆ. ಮೈಸೂರು ರಸ್ತೆ ಸ್ಯಾಟ್ಲೈಟ್ ಬಸ್ ನಿಲ್ದಾಣದಿಂದ 2.20ಕ್ಕೆ ಹೊರಟು ಸಂಜೆ 5.10ಕ್ಕೆ ಮೈಸೂರು ತಲುಪಲಿದೆ. ಮರುದಿನ ಬೆಳಗ್ಗೆ 6.45ಕ್ಕೆ ನಿಲಕ್ಕಲ್ ಬಸ್ ನಿಲ್ದಾಣವನ್ನು ತಲುಪಲಿದೆ.
ಹೋಗುವಾಗ ಪಂಪಾದಲ್ಲಿ ಇಳಿಯುವ ಅವಕಾಶ ನೀಡಲಾಗಿದ್ದು, ಬರುವಾಗ ನಿಲಕ್ಕಲ್ ಬಸ್ ನಿಲ್ದಾಣಕ್ಕೆ ಬರಬೇಕಾಗುತ್ತದೆ. ಪ್ರತಿದಿನ ಸಂಜೆ 6ಕ್ಕೆ ನಿಲಕ್ಕಲ್ನಿಂದ ವೋಲ್ವೊ ಬಸ್ ಹೊರಡಲಿದ್ದು, ಮರುದಿನ ಬೆಳಗ್ಗೆ 10ಕ್ಕೆ ಮೆಜೆಸ್ಟಿಕ್ ತಲುಪಲಿದೆ. ನಿಮ್ಮ ಹತ್ತಿರದ ಖಾಸಗಿ ಟಿಕೆಟ್ ಕೌಂಟರ್ಗಳಲ್ಲದೆ, ಬೆಂಗಳೂರು ಮತ್ತು ಕರ್ನಾಟಕದ ವಿವಿಧ ಬುಕ್ಕಿಂಗ್ ಕೌಂಟರ್ಗಳಲ್ಲಿ ಟಿಕೆಟ್ ಕಾಯ್ದಿರಿಸಬಹುದು. ವೆಬ್ಸೈಟ್ https://www.ksrtc.in/ ಟಿಕೆಟ್ ಬುಕ್ಕಿಂಗ್ ಮಾಡಬಹುದು.
ವೋಲ್ವೋ ಪ್ರಯಾಣ ವಿವರ:
ಮಧ್ಯಾಹ್ನ 1:50ಕ್ಕೆ ಶಾಂತಿನಗರ ಬಸ್ ನಿಲ್ದಾಣದಿಂದ ಹೊರಟು ಸಂಜೆ 5:10ಕ್ಕೆ ಮೈಸೂರು ತಲುಪಿ ಮರುದಿನ ಬೆಳಿಗ್ಗೆ 6:45ಕ್ಕೆ ನಿಲಕ್ಕಲ್ ತಲುಪಲಿದೆ. ಅದೇ ದಿನ ಸಂಜೆ 6:00 ಗಂಟೆಗೆ ಬಸ್ ನಿಲಕ್ಕಲ್ ನಿಂದ ಹೊರಟು ಮರುದಿನ ಬೆಳಿಗ್ಗೆ 10:00 ಗಂಟೆಗೆ ಮೆಜೆಸ್ಟಿಕ್ ತಲುಪಲಿದೆ. ಹೋಗುವಾಗ ಪಂಪಾದಲ್ಲಿ ಇಳಿಯುವ ಅವಕಾಶವನ್ನು ಸಹ ನೀಡಲಾಗಿದೆ. ಭಕ್ತಾದಿಗಳು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿ ವಿನಂತಿ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…