ಮಡಿಕೇರಿ: ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಮಡಿಕೇರಿ ತಾಲೂಕಿನ ಜೋಡುಪಾಲ ಸಮೀಪ ಮೈಸೂರು- ಮಂಗಳೂರು ರಸ್ತೆಯಲ್ಲಿ ಸೋಮವಾರ ನಸುಕಿನಲ್ಲಿ ಮಗುಚಿ ಬಿದ್ದಿದ್ದು, ಇಬ್ಬರಿಗೆ ಗಾಯಗಳಾಗಿವೆ.
ಘಟನೆಯಿಂದ ಕೆಲವು ಗಂಟೆಗಳ ಕಾಲ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ರಸ್ತೆಯ ಎರಡೂ ಕಡೆಗಳಲ್ಲಿಯೂ ವಾಹನಗಳು ಸಾಲುಗಟ್ಟಿದ್ದವು. ತಕ್ಷಣ ಸ್ಥಳಕ್ಕೆ ಬಂದ ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ಮಗುಚಿದ್ದ ಬಸ್ಸನ್ನು ಬದಿಗೆ ಸರಿಸಿ ರಸ್ತೆಯ ಒಂದು ಪಾರ್ಶ್ವದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಗೌರಿಶಂಕರ ಎಂಬ ಹೆಸರಿನ ಖಾಸಗಿ ಬಸ್ ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿತ್ತು. ಇದರಲ್ಲಿ 17 ಮಂದಿ ಪ್ರಯಾಣಿಕರಿದ್ದರು. ಇಬ್ಬರಿಗೆ ಲಘು ಗಾಯಗಳಾಗಿದ್ದು, ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.
ಘಟನೆಯ ಬಳಿಕ ರಸ್ತೆಯ ಒಂದು ಬದಿಯಲ್ಲಿ ವಾಹನಗಳು ಸಂಚರಿಸಿವೆ. ಬಸ್ ತೆರವುಗೊಳಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣೆಯ ಇನ್ ಸ್ಪೆಕ್ಟರ್ ಉಮೇಶ್ ಉಪ್ಪಳಿಕೆ ಸ್ಥಳಕ್ಕೆ ತೆರಳಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…