ಮಡಿಕೇರಿ: ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಮಡಿಕೇರಿ ತಾಲೂಕಿನ ಜೋಡುಪಾಲ ಸಮೀಪ ಮೈಸೂರು- ಮಂಗಳೂರು ರಸ್ತೆಯಲ್ಲಿ ಸೋಮವಾರ ನಸುಕಿನಲ್ಲಿ ಮಗುಚಿ ಬಿದ್ದಿದ್ದು, ಇಬ್ಬರಿಗೆ ಗಾಯಗಳಾಗಿವೆ.
ಘಟನೆಯಿಂದ ಕೆಲವು ಗಂಟೆಗಳ ಕಾಲ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ರಸ್ತೆಯ ಎರಡೂ ಕಡೆಗಳಲ್ಲಿಯೂ ವಾಹನಗಳು ಸಾಲುಗಟ್ಟಿದ್ದವು. ತಕ್ಷಣ ಸ್ಥಳಕ್ಕೆ ಬಂದ ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ಮಗುಚಿದ್ದ ಬಸ್ಸನ್ನು ಬದಿಗೆ ಸರಿಸಿ ರಸ್ತೆಯ ಒಂದು ಪಾರ್ಶ್ವದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಗೌರಿಶಂಕರ ಎಂಬ ಹೆಸರಿನ ಖಾಸಗಿ ಬಸ್ ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿತ್ತು. ಇದರಲ್ಲಿ 17 ಮಂದಿ ಪ್ರಯಾಣಿಕರಿದ್ದರು. ಇಬ್ಬರಿಗೆ ಲಘು ಗಾಯಗಳಾಗಿದ್ದು, ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.
ಘಟನೆಯ ಬಳಿಕ ರಸ್ತೆಯ ಒಂದು ಬದಿಯಲ್ಲಿ ವಾಹನಗಳು ಸಂಚರಿಸಿವೆ. ಬಸ್ ತೆರವುಗೊಳಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣೆಯ ಇನ್ ಸ್ಪೆಕ್ಟರ್ ಉಮೇಶ್ ಉಪ್ಪಳಿಕೆ ಸ್ಥಳಕ್ಕೆ ತೆರಳಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…