ಬೆಂಗಳೂರು,: ಸಂಚಾರ ದಟ್ಟಣೆ ಕಾರಣ ನೀಡಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಜನನಿಬಿಡ ಚರ್ಚ್ ಸ್ಟ್ರೀಟ್ನಲ್ಲಿ ಚಲನಚಿತ್ರ ಚಿತ್ರೀಕರಣಕ್ಕೆ ನಿರ್ಬಂಧ ಹೇರಿದೆ.
ವಿಶೇಷವಾಗಿ ವಾರಾಂತ್ಯದಲ್ಲಿ ಪಾರ್ಟಿಗೆ ಹೋಗುವವರಿಗೆ ಮತ್ತು ಖರೀದಿದಾರರಿಗೆ ಚರ್ಚ್ ಸ್ಟ್ರೀಟ್ ಬೆಂಗಳೂರಿನ ಪ್ರಮುಖ ಆಕರ್ಷಣೆಯಾಗಿದೆ. ಕಳೆದ ಭಾನುವಾರ ಚರ್ಚ ಸ್ಟ್ರೀಟ್ನಲ್ಲಿ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದುದನ್ನು ಗಮನಿಸಿದ ಬಿಬಿಎಂಪಿ ಈ ಆದೇಶ ಹೊರಡಿಸಿದೆ. ಸೂಕ್ತ ಅನುಮತಿ ಪಡೆಯದೆ ಸಿನಿಮಾ ಚಿತ್ರೀಕರಣ ನಡೆಸಲಾಗುತ್ತಿದೆ ಎಂದು ಆರೋಪಿಸಲಾಗಿದೆ.
ಆದರೆ ನಾವು ಪೊಲೀಸರಿಂದ ಅನುಮತಿ ಪಡೆದಿದ್ದೇವೆ ಎಂದು ಮಲಯಾಳಂ ಚಿತ್ರದ ಸಿಬ್ಬಂದಿಯೊಬ್ಬರು ಹೇಳಿದರು. ಈ ಬಗ್ಗೆ ಕೇಂದ್ರೀಯ ಡಿಸಿಪಿ ಶೇಖರ್ ಎಚ್.ತೆಕ್ಕನವರ್ ಮಾತನಾಡಿ, ನಾವು ಸಿನಿಮಾ ಶೂಟಿಂಗ್ಗೆ ಅನುಮತಿ ನೀಡಿಲ್ಲ. ಬಹುತೇಕ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ತೆಗೆದುಕೊಂಡಿರಬಹುದು ಎಂದು ಹೇಳಿದ್ದಾರೆ.
ಕೆಎಫ್ಸಿಸಿ ಅಧ್ಯಕ್ಷ ಎನ್.ಎಂ.ಸುರೇಶ್ ಮಾತನಾಡಿ ನಾವು ಯಾವುದೇ ಅನುಮತಿ ನೀಡಿಲ್ಲ ಮತ್ತು ಅನುಮತಿ ನೀಡಲು ನಮಗೆ ಯಾವುದೇ ಅಧಿಕಾರವಿಲ್ಲ ಎಂದು ಸ್ಪಷ್ಟಪಡಿಸಿದರು. ಸಿನಿಮಾ ಚಿತ್ರೀಕರಣದಿಂದ ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು.ಪಾದಚಾರಿ ಮಾರ್ಗದಲ್ಲಿ ಶೂಟಿಂಗ್ ಮಾಡುತ್ತಿದ್ದರೂ, ನೂರಾರು ಜನರು ವೀಕ್ಷಿಸಲು ನಿಂತಿದ್ದರು. ನಾವು ಪ್ರಶ್ನಿಸಿದಾಗ ಅವರು ಅನುಮತಿಯನ್ನು ಪಡೆದಿದ್ದೇವೆ ಎಂದರು
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾತನಾಡಿ, ಚರ್ಚ್ ಸ್ಟ್ರೀಟ್ನಲ್ಲಿ ಚಲನಚಿತ್ರಗಳ ಚಿತ್ರೀಕರಣವನ್ನು ನಿರ್ಬಂಧಿಸಲಾಗಿದೆ. ಮತ್ತು ಚಿತ್ರೀಕರಣಕ್ಕೆ ಪೊಲೀಸರು ಅಥವಾ ಕೆಎಫ್ಸಿಸಿ ಅನುಮತಿ ನೀಡಲು ಸಾಧ್ಯವಿಲ್ಲ. ಅದೊಂದು ಜನನಿಬಿಡ ರಸ್ತೆ. ಸಿನಿಮಾ ಚಿತ್ರೀಕರಣ ಸಂಚಾರಕ್ಕೆ ಅಡ್ಡಿಯಾಗಲಿದೆ. ಹೀಗಾಗಿ ಚಿತ್ರೀಕರಣಕ್ಕೆ ಬಿಬಿಎಂಪಿ ನಿರ್ಬಂಧಿಸಿದೆ ಎಂದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…