Featured

ಬೆಂಗಳೂರು:ಚಿಕಿತ್ಸೆ ಕೊಡುವ ನೆಪದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ; ವಿಕೃತ ಮನಸ್ಥಿತಿಯ ನಕಲಿ ವೈದ್ಯನ ಬಂಧಿಸಿದ  ಪೊಲೀಸರು – Vishwanews24

ಬೆಂಗಳೂರು : ಚಿಕಿತ್ಸೆಗೆ ಕೊಡುವ ನೆಪದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ; ವಿಕೃತ ಮನಸ್ಥಿತಿಯ ನಕಲಿ ವೈದ್ಯನ ಬಂಧಿಸಿದ  ಪೊಲೀಸರು

ಚಿಕಿತ್ಸೆ ನೆಪದಲ್ಲಿ ಕ್ಲಿನಿಕ್​ಗೆ ಬರುತ್ತಿದ್ದ ಮಹಿಳೆಯರ ಖಾಸಗಿ ಅಂಗಗಳ ರಹಸ್ಯ ವಿಡಿಯೋ ಫೋಟೋ ಸೆರೆ ಹಿಡಿದು ವಿಕೃತಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಆಕ್ಯುಪಂಕ್ಚರ್​​ ಕ್ಲಿನಿಕ್​ ತೆಗೆದು ಚಿಕಿತ್ಸೆ ಕೊಡುವ ನೆಪದಲ್ಲಿ ಬಾಲಕಿಯರು, ಯುವತಿಯರು, ಮಹಿಳೆಯರಿಗೆ ಲೈಂಗಿಕ ಕಿರುಕುಳ ಕೊಡುತ್ತಿದ್ದ ಆರೋಪಿ ವೆಂಕಟರಮಣ್​ ಎಂಬಾತನನ್ನು ನಿನ್ನೆ(ಬುಧವಾರ) ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಯಶವಂತಪುರದ ಮತ್ತಿಕೆರೆಯಲ್ಲಿ ನ್ಯಾಚುರೋಪಥಿ ಮತ್ತು ಆಕ್ಯುಪಂಕ್ಚರ್​ ಕ್ಲಿನಿಕ್​ ತೆರೆದು ನಡೆಸುತ್ತಿದ್ದ ವೆಂಕಟರಮಣ್​ (57) ಬಂಧಿತ. ಯಶವಂತಪುರ, ಬಸವನಗುಡಿ ಮತ್ತು ಸಿಇಎನ್​ ಠಾಣೆಯಲ್ಲಿ ಆರೋಪಿಯ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಂಧ್ರಪ್ರದೇಶದ ಗುತ್ತಿ ಮೂಲದ ವೆಂಕಟರಮಣ್​ ಅಲಿಯಾಸ್​ ವೆಂಕಟ್, ಜಾಲಹಳ್ಳಿಯ ಬಿಇಎಲ್​ ಶಾಲೆ ಮತ್ತು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿ ಮಾರತ್​ಹಳ್ಳಿಯ ಪಿಟಿಲೆಟ್​ ಇಂಡಸ್ಟ್ರೀಟ್​ ಕಂಪನಿಯಲ್ಲಿ 10 ವರ್ಷ ವಾಣಿಜ್ಯ ವಿಭಾಗದ ವ್ಯವಸ್ಥಾಪಕ ಆಗಿದ್ದ. ಇದರ ನಡುವೆ ವೈದ್ಯರೊಬ್ಬರ ಸಹಾಯದಿಂದ ಮೆಜೆಸ್ಟಿಕ್​ನಲ್ಲಿನ ಆರ್ಯುರ್ವೇದ ಕಾಲೇಜಿನಲ್ಲಿ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ವೆಂಕಟರಮಣ್​ ಭಾಗವಹಿಸಿದ್ದ. ಈ ವೇಳೆ ಜಯನಗರ 4ನೇ ಹಂತದಲ್ಲಿ ಆಕ್ಯೂಪೈ ಇ.ಎಂ. ಇನ್​ಸ್ಟಿಟ್ಯೂಟ್​ ಬಗ್ಗೆ ಮಾಹಿತಿ ಪಡೆದು ಅಲ್ಲಿ 2 ವರ್ಷ ಕಾಲ ತರಬೇತಿ ಪಡೆದಿದ್ದ. ಇದರ ಆಧಾರದ ಮೇಲೆ ಮನೆಯ ಬಳಿ 2018ರಲ್ಲಿ ಆಕ್ಯುಪಂಕ್ಚರ್​ ಕ್ಲಿನಿಕ್​ ತೆರೆದು ಚಿಕಿತ್ಸೆ ನೀಡಲು ಶುರು ಮಾಡಿದ್ದ.

ಇನ್ಮುಂದೆ ಕ್ಯುಆರ್​ ಕೋಡ್​ನೊಂದಿಗೆ ಎಲ್​ಪಿಜಿ ಗ್ಯಾಸ್ ಸಿಲಿಂಡರ್ – Vishwanews24

ಕ್ಲಿನಿಕ್​ಗೆ ಬರುತ್ತಿದ್ದ ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ಅವರ ಬಟ್ಟೆಗಳನ್ನು ತೆಗೆಸಿ ಅಂಗಾಂಗಗಳನ್ನು ಮುಟ್ಟುತ್ತಿದ್ದ ಮತ್ತು ಅಸಭ್ಯವಾಗಿ ವರ್ತಿಸುತ್ತಿದ್ದ. ಈ ಬಗ್ಗೆ ರೋಗಿಗಳು ಪ್ರಶ್ನಿಸಿದರೆ ಚಿಕಿತ್ಸೆ ನೀಡುವುದು ಇದೇ ರೀತಿ ಎಂದು ಸಬೂಬು ಹೇಳಿ ಸುಮ್ಮನಾಗಿಸುತ್ತಿದ್ದ. ರೋಗಿಗಳ ಅರೆನಗ್ನ ವಿಡಿಯೋ, ಫೋಟೋಗಳನ್ನು ಅವರಿಗೇ ಗೊತ್ತಿಲ್ಲದಂತೆ ತನ್ನ ಮೊಬೈಲ್​ನಲ್ಲಿ ರಹಸ್ಯವಾಗಿ ಸೆರೆ ಹಿಡಿದುಕೊಂಡು ವಿಕೃತಿ ಮೆರೆಯುತ್ತಿದ್ದ.

ಮೊಬೈಲ್​ನಲ್ಲಿ ಹಲವು ವಿಡಿಯೋ: ಎಂಟು ತಿಂಗಳ ಹಿಂದೆ ಮಹಿಳೆಯೊಬ್ಬರು ಬಲಗಾಲು ಊದಿಕೊಂಡಿದ್ದ ಕಾರಣ ಚಿಕಿತ್ಸೆಗೆಂದು ವೆಂಕಟರಮಣ್​ ಕ್ಲಿನಿಕ್​ಗೆ ಹೋಗಿದ್ದರು. 20 ಬಾರಿ ಚಿಕಿತ್ಸೆ ಪಡೆದಿದ್ದರು. ಇದರಲ್ಲಿ ಐದು ಬಾರಿ ಕ್ಲಿನಿಕ್​ಗೆ ಮಹಿಳೆಯ ಪತಿ ಹೋಗಿರಲಿಲ್ಲ. ಈ ವೇಳೆ ಕಾಲಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ಅವರ ಬಟ್ಟೆ ತೆಗೆಸಿ ಚಿಕಿತ್ಸೆ ಕೊಡಲು ಮುಂದಾದಾಗ ಮಹಿಳೆ ಪ್ರಶ್ನಿಸಿದ್ದರು. ಅದಕ್ಕೆ ನಿಮ್ಮ ಪತಿಗೆ ವಿಷಯ ತಿಳಿಸಿದ್ದೇನೆ ಎಂದು ಸುಳ್ಳು ಹೇಳಿ ಅವರ ಅರೆನಗ್ನ ವಿಡಿಯೋ ಮಾಡಿಕೊಂಡಿದ್ದ.

ಅಕಾಲಿಕ ಮಳೆ ಹಾಗೂ ಚಳಿಯಿಂದ ರಕ್ಷಿಸಲು ಮೇಕೆಗಳಿಗೆ ರೈನ್‍ಕೋಟ್ ಸಿದ್ಧ ಮಾಡಿದ ರೈತ – Vishwanews24

ಇದಾದ ಕೆಲ ತಿಂಗಳ ಬಳಿಕ ಮತ್ತೊಬ್ಬ ಮಹಿಳೆ ಹೋದಾಗ ಅವರಿಗೆ ಸಬೂಬು ಹೇಳಿ ಬಟ್ಟೆ ತೆಗೆಸಿ ಚಿಕಿತ್ಸೆ ನೀಡುವ ನೆಪದಲ್ಲಿ ಅರೆನಗ್ನ ವಿಡಿಯೋ ಮಾಡುತ್ತಿದ್ದಾಗ ಸಂತ್ರಸ್ತೆ ನೋಡಿದ್ದಾರೆ. ತಕ್ಷಣ ವೆಂಕಟರಮಣ್​ನ ಮೊಬೈಲ್​ ತೆಗೆದುಕೊಂಡು ಪರಿಶೀಲನೆ ನಡೆಸಿದಾಗ ಹಲವು ಅಶ್ಲೀಲ ವಿಡಿಯೋ ಇರುವುದು ಗೊತ್ತಾಗಿ ನಕಲಿ ವೈದ್ಯನ ನಿಜ ಬಣ್ಣ ಬಯಲಾಗಿದೆ.

ಈ ಬಗ್ಗೆ ಯಶವಂತಪುರ, ಬಸವನಗುಡಿ ಮತ್ತು ಸೈಬರ್​ ಕೆಂ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದ್ದವು. ಬಂಧನ ಭೀತಿಯಿಂದ ವೆಂಕಟರಮಣ್​, ಹುಟ್ಟೂರು ಆಂಧ್ರಪ್ರದೇಶದಕ್ಕೆ ಹೋಗಿ ತಲೆಮರೆಸಿಕೊಂಡಿದ್ದ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನಗರ ಪೊಲೀಸ್​ ಆಯುಕ್ತ ಸಿ.ಎಚ್​. ಪ್ರತಾಪ್​ ರೆಡ್ಡಿ, ಹೆಚ್ಚಿನ ತನಿಖೆ ಸಲುವಾಗಿ ಸಿಸಿಬಿಗೆ ವರ್ಗಾವಣೆ ಮಾಡಿದ್ದರು. ಸಿಸಿಬಿಯ ಮಹಿಳಾ ಸಂರಕ್ಷಣಾ ದಳ ಕಾರ್ಯಾಚರಣೆ ನಡೆಸಿ ಆಂಧ್ರಪ್ರದೇಶದ ಗುತ್ತಿ ಬಳಿ ಆರೋಪಿಯನ್ನು ಬಂಧಿಸಿದ್ದಾರೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

3 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

9 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

9 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

10 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

11 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

11 hours ago