ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಆಕ್ಯುಪಂಕ್ಚರ್ ಕ್ಲಿನಿಕ್ ತೆಗೆದು ಚಿಕಿತ್ಸೆ ಕೊಡುವ ನೆಪದಲ್ಲಿ ಬಾಲಕಿಯರು, ಯುವತಿಯರು, ಮಹಿಳೆಯರಿಗೆ ಲೈಂಗಿಕ ಕಿರುಕುಳ ಕೊಡುತ್ತಿದ್ದ ಆರೋಪಿ ವೆಂಕಟರಮಣ್ ಎಂಬಾತನನ್ನು ನಿನ್ನೆ(ಬುಧವಾರ) ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಯಶವಂತಪುರದ ಮತ್ತಿಕೆರೆಯಲ್ಲಿ ನ್ಯಾಚುರೋಪಥಿ ಮತ್ತು ಆಕ್ಯುಪಂಕ್ಚರ್ ಕ್ಲಿನಿಕ್ ತೆರೆದು ನಡೆಸುತ್ತಿದ್ದ ವೆಂಕಟರಮಣ್ (57) ಬಂಧಿತ. ಯಶವಂತಪುರ, ಬಸವನಗುಡಿ ಮತ್ತು ಸಿಇಎನ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಂಧ್ರಪ್ರದೇಶದ ಗುತ್ತಿ ಮೂಲದ ವೆಂಕಟರಮಣ್ ಅಲಿಯಾಸ್ ವೆಂಕಟ್, ಜಾಲಹಳ್ಳಿಯ ಬಿಇಎಲ್ ಶಾಲೆ ಮತ್ತು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿ ಮಾರತ್ಹಳ್ಳಿಯ ಪಿಟಿಲೆಟ್ ಇಂಡಸ್ಟ್ರೀಟ್ ಕಂಪನಿಯಲ್ಲಿ 10 ವರ್ಷ ವಾಣಿಜ್ಯ ವಿಭಾಗದ ವ್ಯವಸ್ಥಾಪಕ ಆಗಿದ್ದ. ಇದರ ನಡುವೆ ವೈದ್ಯರೊಬ್ಬರ ಸಹಾಯದಿಂದ ಮೆಜೆಸ್ಟಿಕ್ನಲ್ಲಿನ ಆರ್ಯುರ್ವೇದ ಕಾಲೇಜಿನಲ್ಲಿ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ವೆಂಕಟರಮಣ್ ಭಾಗವಹಿಸಿದ್ದ. ಈ ವೇಳೆ ಜಯನಗರ 4ನೇ ಹಂತದಲ್ಲಿ ಆಕ್ಯೂಪೈ ಇ.ಎಂ. ಇನ್ಸ್ಟಿಟ್ಯೂಟ್ ಬಗ್ಗೆ ಮಾಹಿತಿ ಪಡೆದು ಅಲ್ಲಿ 2 ವರ್ಷ ಕಾಲ ತರಬೇತಿ ಪಡೆದಿದ್ದ. ಇದರ ಆಧಾರದ ಮೇಲೆ ಮನೆಯ ಬಳಿ 2018ರಲ್ಲಿ ಆಕ್ಯುಪಂಕ್ಚರ್ ಕ್ಲಿನಿಕ್ ತೆರೆದು ಚಿಕಿತ್ಸೆ ನೀಡಲು ಶುರು ಮಾಡಿದ್ದ.
ಇನ್ಮುಂದೆ ಕ್ಯುಆರ್ ಕೋಡ್ನೊಂದಿಗೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ – Vishwanews24
ಕ್ಲಿನಿಕ್ಗೆ ಬರುತ್ತಿದ್ದ ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ಅವರ ಬಟ್ಟೆಗಳನ್ನು ತೆಗೆಸಿ ಅಂಗಾಂಗಗಳನ್ನು ಮುಟ್ಟುತ್ತಿದ್ದ ಮತ್ತು ಅಸಭ್ಯವಾಗಿ ವರ್ತಿಸುತ್ತಿದ್ದ. ಈ ಬಗ್ಗೆ ರೋಗಿಗಳು ಪ್ರಶ್ನಿಸಿದರೆ ಚಿಕಿತ್ಸೆ ನೀಡುವುದು ಇದೇ ರೀತಿ ಎಂದು ಸಬೂಬು ಹೇಳಿ ಸುಮ್ಮನಾಗಿಸುತ್ತಿದ್ದ. ರೋಗಿಗಳ ಅರೆನಗ್ನ ವಿಡಿಯೋ, ಫೋಟೋಗಳನ್ನು ಅವರಿಗೇ ಗೊತ್ತಿಲ್ಲದಂತೆ ತನ್ನ ಮೊಬೈಲ್ನಲ್ಲಿ ರಹಸ್ಯವಾಗಿ ಸೆರೆ ಹಿಡಿದುಕೊಂಡು ವಿಕೃತಿ ಮೆರೆಯುತ್ತಿದ್ದ.
ಮೊಬೈಲ್ನಲ್ಲಿ ಹಲವು ವಿಡಿಯೋ: ಎಂಟು ತಿಂಗಳ ಹಿಂದೆ ಮಹಿಳೆಯೊಬ್ಬರು ಬಲಗಾಲು ಊದಿಕೊಂಡಿದ್ದ ಕಾರಣ ಚಿಕಿತ್ಸೆಗೆಂದು ವೆಂಕಟರಮಣ್ ಕ್ಲಿನಿಕ್ಗೆ ಹೋಗಿದ್ದರು. 20 ಬಾರಿ ಚಿಕಿತ್ಸೆ ಪಡೆದಿದ್ದರು. ಇದರಲ್ಲಿ ಐದು ಬಾರಿ ಕ್ಲಿನಿಕ್ಗೆ ಮಹಿಳೆಯ ಪತಿ ಹೋಗಿರಲಿಲ್ಲ. ಈ ವೇಳೆ ಕಾಲಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ಅವರ ಬಟ್ಟೆ ತೆಗೆಸಿ ಚಿಕಿತ್ಸೆ ಕೊಡಲು ಮುಂದಾದಾಗ ಮಹಿಳೆ ಪ್ರಶ್ನಿಸಿದ್ದರು. ಅದಕ್ಕೆ ನಿಮ್ಮ ಪತಿಗೆ ವಿಷಯ ತಿಳಿಸಿದ್ದೇನೆ ಎಂದು ಸುಳ್ಳು ಹೇಳಿ ಅವರ ಅರೆನಗ್ನ ವಿಡಿಯೋ ಮಾಡಿಕೊಂಡಿದ್ದ.
ಅಕಾಲಿಕ ಮಳೆ ಹಾಗೂ ಚಳಿಯಿಂದ ರಕ್ಷಿಸಲು ಮೇಕೆಗಳಿಗೆ ರೈನ್ಕೋಟ್ ಸಿದ್ಧ ಮಾಡಿದ ರೈತ – Vishwanews24
ಇದಾದ ಕೆಲ ತಿಂಗಳ ಬಳಿಕ ಮತ್ತೊಬ್ಬ ಮಹಿಳೆ ಹೋದಾಗ ಅವರಿಗೆ ಸಬೂಬು ಹೇಳಿ ಬಟ್ಟೆ ತೆಗೆಸಿ ಚಿಕಿತ್ಸೆ ನೀಡುವ ನೆಪದಲ್ಲಿ ಅರೆನಗ್ನ ವಿಡಿಯೋ ಮಾಡುತ್ತಿದ್ದಾಗ ಸಂತ್ರಸ್ತೆ ನೋಡಿದ್ದಾರೆ. ತಕ್ಷಣ ವೆಂಕಟರಮಣ್ನ ಮೊಬೈಲ್ ತೆಗೆದುಕೊಂಡು ಪರಿಶೀಲನೆ ನಡೆಸಿದಾಗ ಹಲವು ಅಶ್ಲೀಲ ವಿಡಿಯೋ ಇರುವುದು ಗೊತ್ತಾಗಿ ನಕಲಿ ವೈದ್ಯನ ನಿಜ ಬಣ್ಣ ಬಯಲಾಗಿದೆ.
ಈ ಬಗ್ಗೆ ಯಶವಂತಪುರ, ಬಸವನಗುಡಿ ಮತ್ತು ಸೈಬರ್ ಕೆಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದವು. ಬಂಧನ ಭೀತಿಯಿಂದ ವೆಂಕಟರಮಣ್, ಹುಟ್ಟೂರು ಆಂಧ್ರಪ್ರದೇಶದಕ್ಕೆ ಹೋಗಿ ತಲೆಮರೆಸಿಕೊಂಡಿದ್ದ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನಗರ ಪೊಲೀಸ್ ಆಯುಕ್ತ ಸಿ.ಎಚ್. ಪ್ರತಾಪ್ ರೆಡ್ಡಿ, ಹೆಚ್ಚಿನ ತನಿಖೆ ಸಲುವಾಗಿ ಸಿಸಿಬಿಗೆ ವರ್ಗಾವಣೆ ಮಾಡಿದ್ದರು. ಸಿಸಿಬಿಯ ಮಹಿಳಾ ಸಂರಕ್ಷಣಾ ದಳ ಕಾರ್ಯಾಚರಣೆ ನಡೆಸಿ ಆಂಧ್ರಪ್ರದೇಶದ ಗುತ್ತಿ ಬಳಿ ಆರೋಪಿಯನ್ನು ಬಂಧಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…