Featured

ಲೊಕಾಯುಕ್ತ ದಾಳಿ : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಕಚೇರಿ-ನಿವಾಸದಿಂದ ಬರೋಬ್ಬರಿ 6 ಕೋಟಿ ರೂ. ನಗದು ವಶ – Vishwanews24

ಲೊಕಾಯುಕ್ತ ದಾಳಿ : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಕಚೇರಿ-ನಿವಾಸದಿಂದ ಬರೋಬ್ಬರಿ 6 ಕೋಟಿ ರೂ. ನಗದು ವಶ

ಬೆಂಗಳೂರು: ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ BWSSB ಮುಖ್ಯ ಲೆಕ್ಕಾಧಿಕಾರಿ ಮಾಡಾಳ್ ಪ್ರಶಾಂತ್‌ ಕಚೇರಿಯಲ್ಲಿ ನಿನ್ನೆ ಮಾರ್ಚ್ 2 ಗುರುವಾರ ಸಾಯಂಕಾಲದಿಂದ ಇಂದು ಶುಕ್ರವಾರ ಬೆಳಗಿನ ಜಾವದವರೆಗೂ ಲೋಕಾಯುಕ್ತ ದಾಳಿ ಮುಂದುವರಿದಿದ್ದು ಈ ವೇಳೆ ರಾಶಿ ರಾಶಿ ಹಣ ಪತ್ತೆಯಾಗಿದೆ.

ಬೆಂಗಳೂರಿನ ಕ್ರೆಸೆಂಟ್​ ರಸ್ತೆಯಲ್ಲಿರುವ ಮಾಡಾಳು ಪ್ರಶಾಂತ್ ಅವರ ಕಚೇರಿಯಲ್ಲಿ ನಿನ್ನೆ ಸಂಜೆ 6.30ಕ್ಕೆ ಪ್ರಶಾಂತ್ ಅವರು 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ದಾಳಿ ಮಾಡಲಾಗಿತ್ತು. ಬಳಿಕ ಕಚೇರಿಯಲ್ಲಿ ಮತ್ತು ಅವರ ಮನೆಯಲ್ಲಿ ಶೋಧ ಕಾರ್ಯ ಮುಂದುವರಿಯಿತು. ಅದು ಇಂದು ಬೆಳಗಿನ ಜಾವದವರೆಗೂ ಮುಂದುವರಿದಿತ್ತು. ಈ ವೇಳೆ ಸಮಗ್ರವಾಗಿ ಶೋಧ ನಡೆಸಿದಾಗ ಅವರ ಕಚೇರಿಯಲ್ಲಿ ದಾಖಲೆ ಹಾಗೂ ಸುಮಾರು 6 ಕೋಟಿ ರೂಪಾಯಿ ನಗದು ಹಣ ಸಿಕ್ಕಿದ್ದು ಲೋಕಾಯುಕ್ತ ಸಿಬ್ಬಂದಿಯನ್ನು ದಂಗುಬಡಿಸಿದೆ.

ಇಂದು ಲೋಕಾಯುಕ್ತ ನ್ಯಾಯಾಲಯ ಮುಂದೆ ಹಾಜರು: ಲಂಚ ಸ್ವೀಕರಿಸಿದ ಮತ್ತು ನೀಡಿದ ಆರೋಪದ ಮೇಲೆ ಪ್ರಶಾಂತ್ ಮಾಡಾಳ್​​​ ಸೇರಿ ಐವರನ್ನು ಬಂಧಿಸಲಾಗಿದೆ. ಪ್ರಶಾಂತ್ ಮಾಡಾಳ್ ಅವರ ಸಂಬಂಧಿ ಸಿದ್ದೇಶ್, ಬಿಡಬ್ಲ್ಯುಎಸ್ ಎಸ್ ಬಿಯ ಅಕೌಂಟೆಂಟ್ ಸುರೇಂದ್ರ, ಹಣ ನೀಡಲು ಬಂದಿದ್ದ ನಿಕೋಲಸ್, ಗಂಗಾಧರ್ ಎನ್ನುವವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿ ಇಂದು ಲೋಕಾಯುಕ್ತ ನ್ಯಾಯಾಲಯದ ಮುಂದೆ ಆರೋಪಿಗಳನ್ನು ಹಾಜರುಪಡಿಸಲಿದ್ದಾರೆ. ಇನ್ನಷ್ಟು ವಿಚಾರಣೆಗಾಗಿ ಐವರನ್ನು ತಮ್ಮ ವಶಕ್ಕೆ ನೀಡುವಂತೆ ಲೋಕಾಯುಕ್ತ ಪೊಲೀಸರು ನ್ಯಾಯಾಲಕ್ಕೆ ಮನವಿ ಮಾಡುವ ಸಾಧ್ಯತೆಗಳಿವೆ.

Vishwa News 24

Recent Posts

ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ – vishwanews24

ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…

14 hours ago

ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…

17 hours ago

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ – vishwanews24

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…

18 hours ago

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ – vishwanews24

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…

19 hours ago

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ – vishwanews24

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…

21 hours ago

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ – vishwanews24

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…

21 hours ago