Featured

ಬೆಂಗಳೂರು: ಅಪಾರ್ಟ್ ಮೆಂಟ್ ನ 12ನೇ ಮಹಡಿಯಿಂದ ಬಿದ್ದು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ..Vishwanews24

ಬೆಂಗಳೂರು: ಅಪಾರ್ಟ್ ಮೆಂಟ್ ನ 12ನೇ ಮಹಡಿಯಿಂದ ಬಿದ್ದು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ..

ಬೆಂಗಳೂರು: ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಜೆಸ್ಸಿಕಾ (14) ಎಂದು ಗುರುತಿಸಲಾಗಿದೆ.

ನಿನ್ನೆ ಬೆಳ್ಳಂದೂರಿನ ಕ್ಲಾಸಿಕ್ ಅಪಾರ್ಟ್‌ಮೆಂಟ್‌ನ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಖಾಸಗಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಜೆಸ್ಸಿಕಾ ಬೆಳಗ್ಗೆ ಶಾಲೆಗೆ ಹೋಗಿ ವಾಪಸ್ ಮನೆಗೆ ಬಂದಿದ್ದಾಳೆ. ಬೆಳಗ್ಗೆ 10.30ರ ಸುಮಾರಿಗೆ ಅಪಾರ್ಟ್‌ಮೆಂಟ್‌ಗೆ ಬಂದ ಜೆಸ್ಸಿಕಾ 12ನೇ ಮಹಡಿಯಿಂದ ಜಿಗಿದಿದ್ದಾಳೆ.

ಜೆಸ್ಸಿಕಾ ತಂದೆ ಸಾಫ್ಟ್‌ವೇರ್ ಎಂಜಿನಿಯರ್, ತಾಯಿ ಖಾಸಗಿ ಶಾಲೆಯಲ್ಲಿ ಟೀಚರ್ ಆಗಿದ್ದಾರೆ. ಈ ಕುಟುಂಬ ಕ್ಲಾಸಿಕ್‌ ಅಪಾರ್ಟ್‌ಮೆಂಟ್‌ನ 11ನೇ ಮಹಡಿಯಲ್ಲಿ ವಾಸವಾಗಿದೆ. ಬೆಳಗ್ಗೆ ಬಾಲಕಿ ಶಾಲೆಗೆ ಹೋಗಿ ವಾಪಸ್ ಬಂದಿರೋದು ಪೋಷಕರಿಗೆ ತಿಳಿದಿಲ್ಲ. ಆಕೆ ಆತ್ಮಹತ್ಯೆ ಮಾಡಿಕೊಂಡ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ. ಜೆಸ್ಸಿಕಾ ಕಳೆದ ಮೂರು ತಿಂಗಳಿಂದ ತರಗತಿಗಳಿಗೆ ಹಾಜರಾಗದೆ ಬೇಗ ಮನೆಗೆ ಮರಳುತ್ತಿದ್ದಳು.

ಈ ವಿಷಯವನ್ನು ಆಕೆಯ ಪೋಷಕರ ಗಮನಕ್ಕೆ ತರಲು ಪ್ರಯತ್ನಿಸಿದ್ದೇವೆ, ಆದರೆ ಅವರ ಫೋನ್ ರೀಚ್ ಆಗಿರಲಿಲ್ಲ. ಅಲ್ಲದೆ, ಆಕೆಯ ಶಾಲಾ ಶುಲ್ಕವನ್ನು ಪಾವತಿಸಿಲ್ಲ ಎಂದು ಶಾಲೆಯ ಅಧಿಕಾರಿಗಳು ತಿಳಿಸಿದ್ದಾರೆ. ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago